Homeಮುಖಪುಟಬಿಹಾರ| ಮತದಾರರ ಪಟ್ಟಿಯಿಂದ ನನ್ನ ಹೆಸರು ಕಾಣೆಯಾಗಿದೆ: ತೇಜಸ್ವಿ ಯಾದವ್ ಆರೋಪ

ಬಿಹಾರ| ಮತದಾರರ ಪಟ್ಟಿಯಿಂದ ನನ್ನ ಹೆಸರು ಕಾಣೆಯಾಗಿದೆ: ತೇಜಸ್ವಿ ಯಾದವ್ ಆರೋಪ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ (ಇಸಿಐ) ಶುಕ್ರವಾರ (ಆ.1) ಬಿಡುಗಡೆ ಮಾಡಿರುವ ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ ಎಂದು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ (ಆ.2) ಹೇಳಿದ್ದಾರೆ.

ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, “ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಸಮಯದಲ್ಲಿ ನೋಂದಣಿ ನಮೂನೆಯನ್ನು (enumeration form) ಭರ್ತಿ ಮಾಡಿದ್ದೇನೆ ಎಂದಿದ್ದಾರೆ.

“ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಹೇಗೆ ಸ್ಪರ್ಧಿಸಲಿ?” ಎಂದು ಅವರು ಪ್ರಶ್ನಿಸಿದ್ದಾರೆ.

EPIC ಸಂಖ್ಯೆಯ ಮೂಲಕ ತನ್ನ ಹೆಸರನ್ನು ಹುಡುಕಿದಾಗ ಯಾವುದೇ ಮಾಹಿತಿ ಕಂಡುಬಂದಿಲ್ಲ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ವೈಯಕ್ತಿಕವಾಗಿ ತನ್ನ ಭರ್ತಿ ಮಾಡಿದ ಫಾರ್ಮ್ ಅನ್ನು ಸಂಗ್ರಹಿಸಿದ್ದಾರೆ. ಆದರೆ, ಕರಡು ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಇಲ್ಲ ಎಂದು ತೇಜಸ್ವಿ ಯಾದವ್ ಹೇಳಿಕೊಂಡಿದ್ದಾರೆ.

“ಪ್ರತಿ ವಿಧಾನಸಭಾ ಕ್ಷೇತ್ರದಿಂದ ಸುಮಾರು 20 ರಿಂದ 30 ಸಾವಿರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಒಟ್ಟು ಸುಮಾರು 65 ಲಕ್ಷ ಅಂದರೆ, ಸುಮಾರು 8.5% ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ. ಚುನಾವಣಾ ಆಯೋಗ ಜಾಹೀರಾತು ನೀಡಿದಾಗಲೆಲ್ಲಾ, ಇಷ್ಟೊಂದು ಜನರು ಸ್ಥಳಾಂತರಗೊಂಡಿದ್ದಾರೆ, ಇಷ್ಟೊಂದು ಜನರು ಸಾವನ್ನಪ್ಪಿದ್ದಾರೆ ಮತ್ತು ಇಷ್ಟೊಂದು ಜನರು ನಕಲಿ ಹೆಸರುಗಳನ್ನು ಹೊಂದಿದ್ದಾರೆ ಎಂದು ಉಲ್ಲೇಖಿಸಿತ್ತು” ಎಂದು ತೇಜಸ್ವಿ ವಿವರಿಸಿದ್ದಾರೆ.

“ಆದರೆ ಚುನಾವಣಾ ಆಯೋಗವು ನಮಗೆ ಒದಗಿಸಿದ ಪಟ್ಟಿಯಲ್ಲಿ, ಅವರು ಯಾವುದೇ ಮತದಾರರ ವಿಳಾಸ, ಬೂತ್ ಸಂಖ್ಯೆ ಮತ್ತು ಎಪಿಕ್ ಸಂಖ್ಯೆಯನ್ನು ನೀಡಿಲ್ಲ. ಆದ್ದರಿಂದ, ಮತದಾರರ ಪಟ್ಟಿಯಿಂದ ಯಾರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬುದನ್ನು ನಾವು ಕಂಡುಹಿಡಿಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆರೋಪ ನಿರಾಕರಿಸಿದ ಚುನಾವಣಾ ಆಯೋಗ

ತೇಜಸ್ವಿ ಯಾದವ್ ಆರೋಪವನ್ನು ಭಾರತೀಯ ಚುನಾವಣಾ ಆಯೋಗ ತಳ್ಳಿ ಹಾಕಿದೆ. ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿದೆ ಎಂದು ಹೇಳಿದೆ. ಇದಕ್ಕೆ ಪೂರಕವಾಗಿ ತೇಜಸ್ವಿ ಹೆಸರು ಇರುವ ಪಟ್ಟಿಯ ಪ್ರತಿಯನ್ನು ಬಿಡುಗಡೆ ಮಾಡಿದೆ.

ಅವರ ಹೆಸರು ಕ್ರಮ ಸಂಖ್ಯೆ 416, ಮನೆ ಸಂಖ್ಯೆ 10 ಮತ್ತು EPICಸಂಖ್ಯೆ RABO456228ನೊಂದಿಗೆ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ತೇಜಸ್ವಿ ಯಾದವ್ ತಮ್ಮ ಹಳೆಯ EPIC ಸಂಖ್ಯೆಯನ್ನು ಬಳಸಿಕೊಂಡು ಹುಡುಕಿರಬಹುದು. ಹಾಗಾಗಿ, ಅವರ ವಿವರಗಳು ಕಂಡುಬಂದಿರಲಿಕ್ಕಿಲ್ಲ ಎಂದು ಚುನಾವಣಾ ಆಯೋಗದ ಪ್ರಕಾರ ಹೇಳಿದೆ.

ಛತ್ತೀಸ್‌ಗಢ: ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...