Homeಮುಖಪುಟಬಿಹಾರ| ಮತದಾರರ ಪಟ್ಟಿಯಿಂದ ನನ್ನ ಹೆಸರು ಕಾಣೆಯಾಗಿದೆ: ತೇಜಸ್ವಿ ಯಾದವ್ ಆರೋಪ

ಬಿಹಾರ| ಮತದಾರರ ಪಟ್ಟಿಯಿಂದ ನನ್ನ ಹೆಸರು ಕಾಣೆಯಾಗಿದೆ: ತೇಜಸ್ವಿ ಯಾದವ್ ಆರೋಪ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ (ಇಸಿಐ) ಶುಕ್ರವಾರ (ಆ.1) ಬಿಡುಗಡೆ ಮಾಡಿರುವ ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ ಎಂದು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ (ಆ.2) ಹೇಳಿದ್ದಾರೆ.

ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, “ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಸಮಯದಲ್ಲಿ ನೋಂದಣಿ ನಮೂನೆಯನ್ನು (enumeration form) ಭರ್ತಿ ಮಾಡಿದ್ದೇನೆ ಎಂದಿದ್ದಾರೆ.

“ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಹೇಗೆ ಸ್ಪರ್ಧಿಸಲಿ?” ಎಂದು ಅವರು ಪ್ರಶ್ನಿಸಿದ್ದಾರೆ.

EPIC ಸಂಖ್ಯೆಯ ಮೂಲಕ ತನ್ನ ಹೆಸರನ್ನು ಹುಡುಕಿದಾಗ ಯಾವುದೇ ಮಾಹಿತಿ ಕಂಡುಬಂದಿಲ್ಲ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ವೈಯಕ್ತಿಕವಾಗಿ ತನ್ನ ಭರ್ತಿ ಮಾಡಿದ ಫಾರ್ಮ್ ಅನ್ನು ಸಂಗ್ರಹಿಸಿದ್ದಾರೆ. ಆದರೆ, ಕರಡು ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಇಲ್ಲ ಎಂದು ತೇಜಸ್ವಿ ಯಾದವ್ ಹೇಳಿಕೊಂಡಿದ್ದಾರೆ.

“ಪ್ರತಿ ವಿಧಾನಸಭಾ ಕ್ಷೇತ್ರದಿಂದ ಸುಮಾರು 20 ರಿಂದ 30 ಸಾವಿರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಒಟ್ಟು ಸುಮಾರು 65 ಲಕ್ಷ ಅಂದರೆ, ಸುಮಾರು 8.5% ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ. ಚುನಾವಣಾ ಆಯೋಗ ಜಾಹೀರಾತು ನೀಡಿದಾಗಲೆಲ್ಲಾ, ಇಷ್ಟೊಂದು ಜನರು ಸ್ಥಳಾಂತರಗೊಂಡಿದ್ದಾರೆ, ಇಷ್ಟೊಂದು ಜನರು ಸಾವನ್ನಪ್ಪಿದ್ದಾರೆ ಮತ್ತು ಇಷ್ಟೊಂದು ಜನರು ನಕಲಿ ಹೆಸರುಗಳನ್ನು ಹೊಂದಿದ್ದಾರೆ ಎಂದು ಉಲ್ಲೇಖಿಸಿತ್ತು” ಎಂದು ತೇಜಸ್ವಿ ವಿವರಿಸಿದ್ದಾರೆ.

“ಆದರೆ ಚುನಾವಣಾ ಆಯೋಗವು ನಮಗೆ ಒದಗಿಸಿದ ಪಟ್ಟಿಯಲ್ಲಿ, ಅವರು ಯಾವುದೇ ಮತದಾರರ ವಿಳಾಸ, ಬೂತ್ ಸಂಖ್ಯೆ ಮತ್ತು ಎಪಿಕ್ ಸಂಖ್ಯೆಯನ್ನು ನೀಡಿಲ್ಲ. ಆದ್ದರಿಂದ, ಮತದಾರರ ಪಟ್ಟಿಯಿಂದ ಯಾರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬುದನ್ನು ನಾವು ಕಂಡುಹಿಡಿಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆರೋಪ ನಿರಾಕರಿಸಿದ ಚುನಾವಣಾ ಆಯೋಗ

ತೇಜಸ್ವಿ ಯಾದವ್ ಆರೋಪವನ್ನು ಭಾರತೀಯ ಚುನಾವಣಾ ಆಯೋಗ ತಳ್ಳಿ ಹಾಕಿದೆ. ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿದೆ ಎಂದು ಹೇಳಿದೆ. ಇದಕ್ಕೆ ಪೂರಕವಾಗಿ ತೇಜಸ್ವಿ ಹೆಸರು ಇರುವ ಪಟ್ಟಿಯ ಪ್ರತಿಯನ್ನು ಬಿಡುಗಡೆ ಮಾಡಿದೆ.

ಅವರ ಹೆಸರು ಕ್ರಮ ಸಂಖ್ಯೆ 416, ಮನೆ ಸಂಖ್ಯೆ 10 ಮತ್ತು EPICಸಂಖ್ಯೆ RABO456228ನೊಂದಿಗೆ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ತೇಜಸ್ವಿ ಯಾದವ್ ತಮ್ಮ ಹಳೆಯ EPIC ಸಂಖ್ಯೆಯನ್ನು ಬಳಸಿಕೊಂಡು ಹುಡುಕಿರಬಹುದು. ಹಾಗಾಗಿ, ಅವರ ವಿವರಗಳು ಕಂಡುಬಂದಿರಲಿಕ್ಕಿಲ್ಲ ಎಂದು ಚುನಾವಣಾ ಆಯೋಗದ ಪ್ರಕಾರ ಹೇಳಿದೆ.

ಛತ್ತೀಸ್‌ಗಢ: ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...