Homeಕರ್ನಾಟಕತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕಾಲೇಜು ವಿದ್ಯಾರ್ಥಿಗಳಿಗೆ ಒತ್ತಾಯ: ಆರೋಪ

ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕಾಲೇಜು ವಿದ್ಯಾರ್ಥಿಗಳಿಗೆ ಒತ್ತಾಯ: ಆರೋಪ

- Advertisement -
- Advertisement -

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿವಿ ಪುರಂನ ಜೈನ್ ಕಾಲೇಜು ವಿದ್ಯಾರ್ಥಿಗಳಿಗೆ ಒತ್ತಾಯಿಸಿರುವ ಆರೋಪ ಕೇಳಿ ಬಂದಿದೆ.

ಈ ಕುರಿತು ರೋಹಿನ್ ಆನಂದ್‌ ಎಂಬವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು,  ತೇಜಸ್ವಿ ಸೂರ್ಯ ಅವರು ಕೊಳಕು ತಂತ್ರಗಳನ್ನು ಮಾಡುತ್ತಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ತಾನು ಸ್ಪರ್ಧಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದ್ದಾರೆ.

ವಿವಿ ಪುರಂ ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳಿಗೆ ತೇಜಸ್ವಿ ಸೂರ್ಯ ಅವರ ನಾಮಪತ್ರ ಸಲ್ಲಿಕೆ ರ್ಯಾಲಿಗೆ ಹಾಜರಾಗುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಇಲ್ಲದಿದ್ದರೆ ಅವರಿಗೆ ಹಾಜರಾತಿ ನೀಡುವುದಿಲ್ಲ ಎಂದು ಹೇಳಾಗಿದೆ. ನಾಮಪತ್ರ ಸಲ್ಲಿಕೆ ರ್ಯಾಲಿಯಲ್ಲಿ ಅವರ ಹೆಸರು ಮುದ್ರಿತ ಟೀ ಶರ್ಟ್‌ಗಳನ್ನು ಧರಿಸಲು ಮತ್ತು ತೇಜಸ್ವಿ ಸೂರ್ಯ ವಿರುದ್ಧ ಘೋಷಣೆಗಳನ್ನು ಕೂಗುವಂತೆ ಸೂಚಿಸಲಾಗಿದೆ. ಇದು ಸರ್ವಾಧಿಕಾರವಲ್ಲವೇ?  ಇದು ಸರಿಯೇ? ಚುನಾವಣಾ ಆಯೋಗ ಏನು ನಿದ್ರೆಗೆ ಜಾರಿದೆಯಾ ಎಂದು ಪ್ರಶ್ನಿಸಿದ್ದಾರೆ.

ಗುರುರಾಜ್‌ ಅಂಜನ್‌ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಅಪ್ರಬುದ್ಧ ರಾಜಕಾರಣಿ ತೇಜಸ್ವಿ ಸೂರ್ಯ ಕಾಲೇಜು ವಿದ್ಯಾರ್ಥಿಗಳನ್ನೂ ಬಿಡಲಿಲ್ಲ. ಜೈನ್ ಕಾಲೇಜಿನ ವಿದ್ಯಾರ್ಥಿಗಳು ತೇಜಸ್ವಿ ಸೂರ್ಯ ಅವರ ನಾಮನಿರ್ದೇಶನ ರ್ಯಾಲಿಗೆ ಹಾಜರಾಗುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಇಲ್ಲದಿದ್ದರೆ ಅವರಿಗೆ ಹಾಜರಾತಿ ನೀಡುವುದಿಲ್ಲ ಎಂದು ಹೇಳಲಾಗಿದೆ. ಇದಕ್ಕಾಗಿಯೇ ನಾವು ಬೆಂಗಳೂರು-ದಕ್ಷಿಣ ಜನರನ್ನು ತೇಜಸ್ವಿ ಸೂರ್ಯ  ಪ್ರತಿನಿಧಿಸುವುದನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ವಾಟ್ಸಾಪ್‌ ಸಂದೇಶವೊಂದು ವೈರಲ್‌ ಆಗಿದ್ದು, ಸಂದೇಶದಲ್ಲಿ ನಾಳೆ ವಿದ್ಯಾರ್ಥಿ ಸಂಘಟನೆಯ ಎಲ್ಲಾ ಸದಸ್ಯರು ಜಯನಗರದ ಮೈಯ್ಯಾಸ್‌ ಹೋಟೇಲ್‌ ಬಳಿ 9 ಗಂಟೆಗೆ ತೇಜಸ್ವಿಸೂರ್ಯ ಅವರ ರ್ಯಾಲಿಗೆ ಹಾಜರಿರಬೇಕು. ನಿಮಗ ಅಲ್ಲಿ ಟೀ-ಶರ್ಟ್‌ ಸಿಗುತ್ತದೆ. ಆದ್ದರಿಂದ ತಡ ಮಾಡಬೇಡಿ, ಎಲ್ಲರೂ ಕ್ಲಪ್ತ ಸಮಯಕ್ಕೆ ಅಲ್ಲಿ ಹಾಜರಿರಬೇಕು. ನಿಮಗೆ ಭಾಗವಹಿಸಿದರೆ ಕಾಲೇಜಿನಿಂದ ಹಾಜರಾತಿ ಸಿಗಲಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೈನ್ ಕಾಲೇಜು ಅಥಾರಿಟಿಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು, ತಕ್ಷಣಕ್ಕೆ ಸಂಪರ್ಕ ಸಾಧ್ಯವಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

 

ಇದನ್ನು ಓದಿ: ಶಿವಮೊಗ್ಗದಲ್ಲಿ ರಾಘವೇಂದ್ರನನ್ನು ಸೋಲಿಸಲು ಅಮಿತ್‌ ಶಾ ಆಶೀರ್ವಾದಿಸಿದ್ದಾರೆ: ಕೆಎಸ್‌ ಈಶ್ವರಪ್ಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...