Homeಕರ್ನಾಟಕಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯರಿಂದ ನೊಂದಿದ್ದೇನೆಂದೂ, ತಾನು ಮೊದಲ ವ್ಯಕ್ತಿಯೂ ಅಲ್ಲ, ಕಡೆಯವಳೂ ಅಲ್ಲ ಎಂದು ಮಹಿಳಾ ಉದ್ಯಮಿಯೊಬ್ಬರು ಮಾಡಿದ ಟ್ವೀಟ್‍ನ ನಂತರ, ಅದನ್ನು ಒಂದು ಸುದ್ದಿಯಾಗಿ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಟ್ವೀಟ್ ಮಾಡಿದ್ದು ನಿಜ, ಹಾಗಾಗಿ ಸುದ್ದಿಯೂ ಆಯಿತು. ಆದರೆ, ತನ್ನ ವಿರುದ್ಧ ಮಾಧ್ಯಮಗಳು ಏನನ್ನೂ ಪ್ರಕಟಿಸಬಾರದೆಂದು ತೇಜಸ್ವಿ ಕೋರ್ಟಿಗೆ ಹೋದರು.

ತಮಾಷೆಯೆಂದರೆ ಆತ ಮೊಕದ್ದಮೆ ಹೂಡಿದ ಮಾಧ್ಯಮಗಳ ಪಟ್ಟಿಯಲ್ಲಿ ನಾಲ್ಕು ಅಸ್ತಿತ್ವದಲ್ಲೇ ಇಲ್ಲ!
ಯಾವ ಮಾಧ್ಯಮಗಳು ತನ್ನ ಬಗ್ಗೆ ಸುದ್ದಿ ಪ್ರಕಟಿಸುತ್ತಿವೆಯೋ ಆ ಮಾಧ್ಯಮಗಳನ್ನೆಲ್ಲಾ ವಿರುದ್ಧ ಸುದ್ದಿ ಪ್ರಕಟಿಸುವುದು ಎಂದು ಒಬ್ಬ ವಕೀಲ ತಿಳಿದದ್ದೇ ವಿಚಿತ್ರ. ತೇಜಸ್ವಿ ಸೂರ್ಯ ಯಾವೆಲ್ಲಾ ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿಸಿದ್ದಾರೋ ಅವುಗಳಲ್ಲಿ ಹಲವು ಸುದ್ದಿಯನ್ನೇ ಪ್ರಕಟಿಸಿರಲಿಲ್ಲ. ಇನ್ನು ಮೂರು ಮಾಧ್ಯಮ ಸಂಸ್ಥೆಗಳು ಅಸ್ತಿತ್ವದಲ್ಲೇ ಇಲ್ಲ.

ಹಿಂದಿನ ಯಾವುದೋ ಸಮಯದ ಮಾಧ್ಯಮಗಳ ಪಟ್ಟಿಯನ್ನು ಎಲ್ಲಿಂದಲೋ ತೆಗೆದುಕೊಂಡರು, ಆ ಪಟ್ಟಿಯನ್ನು ಯಥಾವತ್ತಾಗಿ ಪ್ರತಿವಾದಿಗಳನ್ನಾಗಿ ಮಾಡಿದರು. ಅಷ್ಟೇ ಅಲ್ಲ ವಾಟ್ಸಾಪ್, ಫೇಸ್‍ಬುಕ್, ಯೂಟ್ಯೂಬ್, ಯಾಹೂ, ಗೂಗಲ್‍ಗಳನ್ನೂ ಪ್ರತಿವಾದಿಗಳನ್ನಾಗಿಸಿದರು.

ಈ ಮೂಲಕ ಅವರು ತನ್ನ ನಿಜಮುಖವನ್ನು ವಾಟ್ಸಾಪ್ ಮೂಲಕ ಯಾರಾದರೂ ಫಾರ್ವರ್ಡ್ ಮಾಡಿದರೆ, ವಾಟ್ಸಾಪ್‍ಅನ್ನೇ ಅದಕ್ಕೆ ಹೊಣೆಗಾರನನ್ನಾಗಿಸುತ್ತೇನೆಂಬ ಸಂದೇಶ, ಇ-ಮೇಲ್ ಮೂಲಕ ಯಾರಾದರೂ ಯಾರಿಗಾದರೂ ಕಳಿಸಿದರೂ ಯಾಹೂ ಅಥವಾ ಗೂಗಲ್‍ಗಳನ್ನೂ ಹೊಣೆಗಾರರನ್ನಾಗಿಸುತ್ತೇನೆಂಬ ಬೆದರಿಕೆ ಒಡ್ಡಿದಂತಾಗಿದೆ!! ನ್ಯಾಷನಲ್ ಲಾ ಸ್ಕೂಲ್‍ನಂತಹ ದೇಶದ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ಕಾನೂನು ಓದಿರುವ ತೇಜಸ್ವಿ ಕೋರ್ಟಿನಲ್ಲಿ ಈ ರೀತಿಯ ತನ್ನ ಬಾಲಚೇಷ್ಟೆಗಳ ಮೂಲಕ ಸಂಸ್ಥೆಯ ಮರ್ಯಾದೆಯನ್ನೂ ಕಳೆಯುತ್ತಿದ್ದಂತಿದೆ.

ಅಂದರೆ ಕೋಟಿ ಕೋಟಿ ಜನರು ಬಳಸುತ್ತಿರುವ, ಖಾಸಗಿ ಸಂದೇಶಗಳನ್ನೂ ಕಳಿಸಲು ಬಳಸುವ ಇಮೇಲ್, ವಾಟ್ಸಾಪ್‍ಗಳನ್ನು ಯಾರಾದರೂ ಮಾನಿಟರ್ ಮಾಡಲು ಸಾಧ್ಯವೇ? ಈ ರೀತಿ ಖಾಸಗಿ ಸಂದೇಶಗಳನ್ನೂ ನಿರ್ಬಂಧಿಸಬೇಕೆಂದು ಒಬ್ಬ ವಕೀಲ ಭಾವಿಸುತ್ತಾರೆಯೇ?
ಇಂತಹ ಕೇಸುಗಳು ಪ್ರತಿವಾದಿಗಳ ಗೈರುಹಾಜರಿಯಲ್ಲಿ – ಎಕ್ಸ್ ಪಾರ್ಟೇ – ತಕ್ಷಣದ ಆದೇಶ ಪಡೆದುಕೊಳ್ಳುತ್ತವಾದ್ದರಿಂದ, ಅದರ ಲಾಭ ಪಡೆಯಲು ದುರುದ್ದೇಶಪೂರ್ವಕವಾದ ಕ್ರಮಕ್ಕೆ ತೇಜಸ್ವಿ ಮುಂದಾಗಿದ್ದಾರೆ. ಹಾಗೆ ಮಾಡುವಾಗ, ಇಲ್ಲದ ಪ್ರತಿವಾದಿಗಳನ್ನೂ ಹೆಸರಿಸುವ ಅಜ್ಞಾನವೂ ವ್ಯಕ್ತವಾಗಿದೆ.
ಈಗಾಗಲೇ ಇಂಡಿಯನ್ ಎಕ್ಸ್‍ಪ್ರೆಸ್ ಸದರಿ ಕೇಸಿನ ಕುರಿತು ಸಂಪಾದಕೀಯವನ್ನೇ ಬರೆದು ಖಂಡಿಸಿದೆ. ದೇಶಾದ್ಯಂತ ಕೋಟಿ ಕೋಟಿ ಫೇಕ್ ನ್ಯೂಸ್‍ಗಳನ್ನು ಹಬ್ಬಿಸುವ ಜಾಲದ ಪ್ರಮುಖರಾಗಿರುವ ತೇಜಸ್ವಿ ತನ್ನ ವಿರುದ್ಧ ಸತ್ಯವನ್ನೂ ಬರೆಯದಂತೆ ಕೋರ್ಟಿನ ಮೊರೆ ಹೋಗಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...