Homeಕರ್ನಾಟಕಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯರಿಂದ ನೊಂದಿದ್ದೇನೆಂದೂ, ತಾನು ಮೊದಲ ವ್ಯಕ್ತಿಯೂ ಅಲ್ಲ, ಕಡೆಯವಳೂ ಅಲ್ಲ ಎಂದು ಮಹಿಳಾ ಉದ್ಯಮಿಯೊಬ್ಬರು ಮಾಡಿದ ಟ್ವೀಟ್‍ನ ನಂತರ, ಅದನ್ನು ಒಂದು ಸುದ್ದಿಯಾಗಿ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಟ್ವೀಟ್ ಮಾಡಿದ್ದು ನಿಜ, ಹಾಗಾಗಿ ಸುದ್ದಿಯೂ ಆಯಿತು. ಆದರೆ, ತನ್ನ ವಿರುದ್ಧ ಮಾಧ್ಯಮಗಳು ಏನನ್ನೂ ಪ್ರಕಟಿಸಬಾರದೆಂದು ತೇಜಸ್ವಿ ಕೋರ್ಟಿಗೆ ಹೋದರು.

ತಮಾಷೆಯೆಂದರೆ ಆತ ಮೊಕದ್ದಮೆ ಹೂಡಿದ ಮಾಧ್ಯಮಗಳ ಪಟ್ಟಿಯಲ್ಲಿ ನಾಲ್ಕು ಅಸ್ತಿತ್ವದಲ್ಲೇ ಇಲ್ಲ!
ಯಾವ ಮಾಧ್ಯಮಗಳು ತನ್ನ ಬಗ್ಗೆ ಸುದ್ದಿ ಪ್ರಕಟಿಸುತ್ತಿವೆಯೋ ಆ ಮಾಧ್ಯಮಗಳನ್ನೆಲ್ಲಾ ವಿರುದ್ಧ ಸುದ್ದಿ ಪ್ರಕಟಿಸುವುದು ಎಂದು ಒಬ್ಬ ವಕೀಲ ತಿಳಿದದ್ದೇ ವಿಚಿತ್ರ. ತೇಜಸ್ವಿ ಸೂರ್ಯ ಯಾವೆಲ್ಲಾ ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿಸಿದ್ದಾರೋ ಅವುಗಳಲ್ಲಿ ಹಲವು ಸುದ್ದಿಯನ್ನೇ ಪ್ರಕಟಿಸಿರಲಿಲ್ಲ. ಇನ್ನು ಮೂರು ಮಾಧ್ಯಮ ಸಂಸ್ಥೆಗಳು ಅಸ್ತಿತ್ವದಲ್ಲೇ ಇಲ್ಲ.

ಹಿಂದಿನ ಯಾವುದೋ ಸಮಯದ ಮಾಧ್ಯಮಗಳ ಪಟ್ಟಿಯನ್ನು ಎಲ್ಲಿಂದಲೋ ತೆಗೆದುಕೊಂಡರು, ಆ ಪಟ್ಟಿಯನ್ನು ಯಥಾವತ್ತಾಗಿ ಪ್ರತಿವಾದಿಗಳನ್ನಾಗಿ ಮಾಡಿದರು. ಅಷ್ಟೇ ಅಲ್ಲ ವಾಟ್ಸಾಪ್, ಫೇಸ್‍ಬುಕ್, ಯೂಟ್ಯೂಬ್, ಯಾಹೂ, ಗೂಗಲ್‍ಗಳನ್ನೂ ಪ್ರತಿವಾದಿಗಳನ್ನಾಗಿಸಿದರು.

ಈ ಮೂಲಕ ಅವರು ತನ್ನ ನಿಜಮುಖವನ್ನು ವಾಟ್ಸಾಪ್ ಮೂಲಕ ಯಾರಾದರೂ ಫಾರ್ವರ್ಡ್ ಮಾಡಿದರೆ, ವಾಟ್ಸಾಪ್‍ಅನ್ನೇ ಅದಕ್ಕೆ ಹೊಣೆಗಾರನನ್ನಾಗಿಸುತ್ತೇನೆಂಬ ಸಂದೇಶ, ಇ-ಮೇಲ್ ಮೂಲಕ ಯಾರಾದರೂ ಯಾರಿಗಾದರೂ ಕಳಿಸಿದರೂ ಯಾಹೂ ಅಥವಾ ಗೂಗಲ್‍ಗಳನ್ನೂ ಹೊಣೆಗಾರರನ್ನಾಗಿಸುತ್ತೇನೆಂಬ ಬೆದರಿಕೆ ಒಡ್ಡಿದಂತಾಗಿದೆ!! ನ್ಯಾಷನಲ್ ಲಾ ಸ್ಕೂಲ್‍ನಂತಹ ದೇಶದ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ಕಾನೂನು ಓದಿರುವ ತೇಜಸ್ವಿ ಕೋರ್ಟಿನಲ್ಲಿ ಈ ರೀತಿಯ ತನ್ನ ಬಾಲಚೇಷ್ಟೆಗಳ ಮೂಲಕ ಸಂಸ್ಥೆಯ ಮರ್ಯಾದೆಯನ್ನೂ ಕಳೆಯುತ್ತಿದ್ದಂತಿದೆ.

ಅಂದರೆ ಕೋಟಿ ಕೋಟಿ ಜನರು ಬಳಸುತ್ತಿರುವ, ಖಾಸಗಿ ಸಂದೇಶಗಳನ್ನೂ ಕಳಿಸಲು ಬಳಸುವ ಇಮೇಲ್, ವಾಟ್ಸಾಪ್‍ಗಳನ್ನು ಯಾರಾದರೂ ಮಾನಿಟರ್ ಮಾಡಲು ಸಾಧ್ಯವೇ? ಈ ರೀತಿ ಖಾಸಗಿ ಸಂದೇಶಗಳನ್ನೂ ನಿರ್ಬಂಧಿಸಬೇಕೆಂದು ಒಬ್ಬ ವಕೀಲ ಭಾವಿಸುತ್ತಾರೆಯೇ?
ಇಂತಹ ಕೇಸುಗಳು ಪ್ರತಿವಾದಿಗಳ ಗೈರುಹಾಜರಿಯಲ್ಲಿ – ಎಕ್ಸ್ ಪಾರ್ಟೇ – ತಕ್ಷಣದ ಆದೇಶ ಪಡೆದುಕೊಳ್ಳುತ್ತವಾದ್ದರಿಂದ, ಅದರ ಲಾಭ ಪಡೆಯಲು ದುರುದ್ದೇಶಪೂರ್ವಕವಾದ ಕ್ರಮಕ್ಕೆ ತೇಜಸ್ವಿ ಮುಂದಾಗಿದ್ದಾರೆ. ಹಾಗೆ ಮಾಡುವಾಗ, ಇಲ್ಲದ ಪ್ರತಿವಾದಿಗಳನ್ನೂ ಹೆಸರಿಸುವ ಅಜ್ಞಾನವೂ ವ್ಯಕ್ತವಾಗಿದೆ.
ಈಗಾಗಲೇ ಇಂಡಿಯನ್ ಎಕ್ಸ್‍ಪ್ರೆಸ್ ಸದರಿ ಕೇಸಿನ ಕುರಿತು ಸಂಪಾದಕೀಯವನ್ನೇ ಬರೆದು ಖಂಡಿಸಿದೆ. ದೇಶಾದ್ಯಂತ ಕೋಟಿ ಕೋಟಿ ಫೇಕ್ ನ್ಯೂಸ್‍ಗಳನ್ನು ಹಬ್ಬಿಸುವ ಜಾಲದ ಪ್ರಮುಖರಾಗಿರುವ ತೇಜಸ್ವಿ ತನ್ನ ವಿರುದ್ಧ ಸತ್ಯವನ್ನೂ ಬರೆಯದಂತೆ ಕೋರ್ಟಿನ ಮೊರೆ ಹೋಗಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...