Homeಕರ್ನಾಟಕಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯರಿಂದ ನೊಂದಿದ್ದೇನೆಂದೂ, ತಾನು ಮೊದಲ ವ್ಯಕ್ತಿಯೂ ಅಲ್ಲ, ಕಡೆಯವಳೂ ಅಲ್ಲ ಎಂದು ಮಹಿಳಾ ಉದ್ಯಮಿಯೊಬ್ಬರು ಮಾಡಿದ ಟ್ವೀಟ್‍ನ ನಂತರ, ಅದನ್ನು ಒಂದು ಸುದ್ದಿಯಾಗಿ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಟ್ವೀಟ್ ಮಾಡಿದ್ದು ನಿಜ, ಹಾಗಾಗಿ ಸುದ್ದಿಯೂ ಆಯಿತು. ಆದರೆ, ತನ್ನ ವಿರುದ್ಧ ಮಾಧ್ಯಮಗಳು ಏನನ್ನೂ ಪ್ರಕಟಿಸಬಾರದೆಂದು ತೇಜಸ್ವಿ ಕೋರ್ಟಿಗೆ ಹೋದರು.

ತಮಾಷೆಯೆಂದರೆ ಆತ ಮೊಕದ್ದಮೆ ಹೂಡಿದ ಮಾಧ್ಯಮಗಳ ಪಟ್ಟಿಯಲ್ಲಿ ನಾಲ್ಕು ಅಸ್ತಿತ್ವದಲ್ಲೇ ಇಲ್ಲ!
ಯಾವ ಮಾಧ್ಯಮಗಳು ತನ್ನ ಬಗ್ಗೆ ಸುದ್ದಿ ಪ್ರಕಟಿಸುತ್ತಿವೆಯೋ ಆ ಮಾಧ್ಯಮಗಳನ್ನೆಲ್ಲಾ ವಿರುದ್ಧ ಸುದ್ದಿ ಪ್ರಕಟಿಸುವುದು ಎಂದು ಒಬ್ಬ ವಕೀಲ ತಿಳಿದದ್ದೇ ವಿಚಿತ್ರ. ತೇಜಸ್ವಿ ಸೂರ್ಯ ಯಾವೆಲ್ಲಾ ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿಸಿದ್ದಾರೋ ಅವುಗಳಲ್ಲಿ ಹಲವು ಸುದ್ದಿಯನ್ನೇ ಪ್ರಕಟಿಸಿರಲಿಲ್ಲ. ಇನ್ನು ಮೂರು ಮಾಧ್ಯಮ ಸಂಸ್ಥೆಗಳು ಅಸ್ತಿತ್ವದಲ್ಲೇ ಇಲ್ಲ.

ಹಿಂದಿನ ಯಾವುದೋ ಸಮಯದ ಮಾಧ್ಯಮಗಳ ಪಟ್ಟಿಯನ್ನು ಎಲ್ಲಿಂದಲೋ ತೆಗೆದುಕೊಂಡರು, ಆ ಪಟ್ಟಿಯನ್ನು ಯಥಾವತ್ತಾಗಿ ಪ್ರತಿವಾದಿಗಳನ್ನಾಗಿ ಮಾಡಿದರು. ಅಷ್ಟೇ ಅಲ್ಲ ವಾಟ್ಸಾಪ್, ಫೇಸ್‍ಬುಕ್, ಯೂಟ್ಯೂಬ್, ಯಾಹೂ, ಗೂಗಲ್‍ಗಳನ್ನೂ ಪ್ರತಿವಾದಿಗಳನ್ನಾಗಿಸಿದರು.

ಈ ಮೂಲಕ ಅವರು ತನ್ನ ನಿಜಮುಖವನ್ನು ವಾಟ್ಸಾಪ್ ಮೂಲಕ ಯಾರಾದರೂ ಫಾರ್ವರ್ಡ್ ಮಾಡಿದರೆ, ವಾಟ್ಸಾಪ್‍ಅನ್ನೇ ಅದಕ್ಕೆ ಹೊಣೆಗಾರನನ್ನಾಗಿಸುತ್ತೇನೆಂಬ ಸಂದೇಶ, ಇ-ಮೇಲ್ ಮೂಲಕ ಯಾರಾದರೂ ಯಾರಿಗಾದರೂ ಕಳಿಸಿದರೂ ಯಾಹೂ ಅಥವಾ ಗೂಗಲ್‍ಗಳನ್ನೂ ಹೊಣೆಗಾರರನ್ನಾಗಿಸುತ್ತೇನೆಂಬ ಬೆದರಿಕೆ ಒಡ್ಡಿದಂತಾಗಿದೆ!! ನ್ಯಾಷನಲ್ ಲಾ ಸ್ಕೂಲ್‍ನಂತಹ ದೇಶದ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ಕಾನೂನು ಓದಿರುವ ತೇಜಸ್ವಿ ಕೋರ್ಟಿನಲ್ಲಿ ಈ ರೀತಿಯ ತನ್ನ ಬಾಲಚೇಷ್ಟೆಗಳ ಮೂಲಕ ಸಂಸ್ಥೆಯ ಮರ್ಯಾದೆಯನ್ನೂ ಕಳೆಯುತ್ತಿದ್ದಂತಿದೆ.

ಅಂದರೆ ಕೋಟಿ ಕೋಟಿ ಜನರು ಬಳಸುತ್ತಿರುವ, ಖಾಸಗಿ ಸಂದೇಶಗಳನ್ನೂ ಕಳಿಸಲು ಬಳಸುವ ಇಮೇಲ್, ವಾಟ್ಸಾಪ್‍ಗಳನ್ನು ಯಾರಾದರೂ ಮಾನಿಟರ್ ಮಾಡಲು ಸಾಧ್ಯವೇ? ಈ ರೀತಿ ಖಾಸಗಿ ಸಂದೇಶಗಳನ್ನೂ ನಿರ್ಬಂಧಿಸಬೇಕೆಂದು ಒಬ್ಬ ವಕೀಲ ಭಾವಿಸುತ್ತಾರೆಯೇ?
ಇಂತಹ ಕೇಸುಗಳು ಪ್ರತಿವಾದಿಗಳ ಗೈರುಹಾಜರಿಯಲ್ಲಿ – ಎಕ್ಸ್ ಪಾರ್ಟೇ – ತಕ್ಷಣದ ಆದೇಶ ಪಡೆದುಕೊಳ್ಳುತ್ತವಾದ್ದರಿಂದ, ಅದರ ಲಾಭ ಪಡೆಯಲು ದುರುದ್ದೇಶಪೂರ್ವಕವಾದ ಕ್ರಮಕ್ಕೆ ತೇಜಸ್ವಿ ಮುಂದಾಗಿದ್ದಾರೆ. ಹಾಗೆ ಮಾಡುವಾಗ, ಇಲ್ಲದ ಪ್ರತಿವಾದಿಗಳನ್ನೂ ಹೆಸರಿಸುವ ಅಜ್ಞಾನವೂ ವ್ಯಕ್ತವಾಗಿದೆ.
ಈಗಾಗಲೇ ಇಂಡಿಯನ್ ಎಕ್ಸ್‍ಪ್ರೆಸ್ ಸದರಿ ಕೇಸಿನ ಕುರಿತು ಸಂಪಾದಕೀಯವನ್ನೇ ಬರೆದು ಖಂಡಿಸಿದೆ. ದೇಶಾದ್ಯಂತ ಕೋಟಿ ಕೋಟಿ ಫೇಕ್ ನ್ಯೂಸ್‍ಗಳನ್ನು ಹಬ್ಬಿಸುವ ಜಾಲದ ಪ್ರಮುಖರಾಗಿರುವ ತೇಜಸ್ವಿ ತನ್ನ ವಿರುದ್ಧ ಸತ್ಯವನ್ನೂ ಬರೆಯದಂತೆ ಕೋರ್ಟಿನ ಮೊರೆ ಹೋಗಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...