Homeಕರ್ನಾಟಕಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯರಿಂದ ನೊಂದಿದ್ದೇನೆಂದೂ, ತಾನು ಮೊದಲ ವ್ಯಕ್ತಿಯೂ ಅಲ್ಲ, ಕಡೆಯವಳೂ ಅಲ್ಲ ಎಂದು ಮಹಿಳಾ ಉದ್ಯಮಿಯೊಬ್ಬರು ಮಾಡಿದ ಟ್ವೀಟ್‍ನ ನಂತರ, ಅದನ್ನು ಒಂದು ಸುದ್ದಿಯಾಗಿ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಟ್ವೀಟ್ ಮಾಡಿದ್ದು ನಿಜ, ಹಾಗಾಗಿ ಸುದ್ದಿಯೂ ಆಯಿತು. ಆದರೆ, ತನ್ನ ವಿರುದ್ಧ ಮಾಧ್ಯಮಗಳು ಏನನ್ನೂ ಪ್ರಕಟಿಸಬಾರದೆಂದು ತೇಜಸ್ವಿ ಕೋರ್ಟಿಗೆ ಹೋದರು.

ತಮಾಷೆಯೆಂದರೆ ಆತ ಮೊಕದ್ದಮೆ ಹೂಡಿದ ಮಾಧ್ಯಮಗಳ ಪಟ್ಟಿಯಲ್ಲಿ ನಾಲ್ಕು ಅಸ್ತಿತ್ವದಲ್ಲೇ ಇಲ್ಲ!
ಯಾವ ಮಾಧ್ಯಮಗಳು ತನ್ನ ಬಗ್ಗೆ ಸುದ್ದಿ ಪ್ರಕಟಿಸುತ್ತಿವೆಯೋ ಆ ಮಾಧ್ಯಮಗಳನ್ನೆಲ್ಲಾ ವಿರುದ್ಧ ಸುದ್ದಿ ಪ್ರಕಟಿಸುವುದು ಎಂದು ಒಬ್ಬ ವಕೀಲ ತಿಳಿದದ್ದೇ ವಿಚಿತ್ರ. ತೇಜಸ್ವಿ ಸೂರ್ಯ ಯಾವೆಲ್ಲಾ ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿಸಿದ್ದಾರೋ ಅವುಗಳಲ್ಲಿ ಹಲವು ಸುದ್ದಿಯನ್ನೇ ಪ್ರಕಟಿಸಿರಲಿಲ್ಲ. ಇನ್ನು ಮೂರು ಮಾಧ್ಯಮ ಸಂಸ್ಥೆಗಳು ಅಸ್ತಿತ್ವದಲ್ಲೇ ಇಲ್ಲ.

ಹಿಂದಿನ ಯಾವುದೋ ಸಮಯದ ಮಾಧ್ಯಮಗಳ ಪಟ್ಟಿಯನ್ನು ಎಲ್ಲಿಂದಲೋ ತೆಗೆದುಕೊಂಡರು, ಆ ಪಟ್ಟಿಯನ್ನು ಯಥಾವತ್ತಾಗಿ ಪ್ರತಿವಾದಿಗಳನ್ನಾಗಿ ಮಾಡಿದರು. ಅಷ್ಟೇ ಅಲ್ಲ ವಾಟ್ಸಾಪ್, ಫೇಸ್‍ಬುಕ್, ಯೂಟ್ಯೂಬ್, ಯಾಹೂ, ಗೂಗಲ್‍ಗಳನ್ನೂ ಪ್ರತಿವಾದಿಗಳನ್ನಾಗಿಸಿದರು.

ಈ ಮೂಲಕ ಅವರು ತನ್ನ ನಿಜಮುಖವನ್ನು ವಾಟ್ಸಾಪ್ ಮೂಲಕ ಯಾರಾದರೂ ಫಾರ್ವರ್ಡ್ ಮಾಡಿದರೆ, ವಾಟ್ಸಾಪ್‍ಅನ್ನೇ ಅದಕ್ಕೆ ಹೊಣೆಗಾರನನ್ನಾಗಿಸುತ್ತೇನೆಂಬ ಸಂದೇಶ, ಇ-ಮೇಲ್ ಮೂಲಕ ಯಾರಾದರೂ ಯಾರಿಗಾದರೂ ಕಳಿಸಿದರೂ ಯಾಹೂ ಅಥವಾ ಗೂಗಲ್‍ಗಳನ್ನೂ ಹೊಣೆಗಾರರನ್ನಾಗಿಸುತ್ತೇನೆಂಬ ಬೆದರಿಕೆ ಒಡ್ಡಿದಂತಾಗಿದೆ!! ನ್ಯಾಷನಲ್ ಲಾ ಸ್ಕೂಲ್‍ನಂತಹ ದೇಶದ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ಕಾನೂನು ಓದಿರುವ ತೇಜಸ್ವಿ ಕೋರ್ಟಿನಲ್ಲಿ ಈ ರೀತಿಯ ತನ್ನ ಬಾಲಚೇಷ್ಟೆಗಳ ಮೂಲಕ ಸಂಸ್ಥೆಯ ಮರ್ಯಾದೆಯನ್ನೂ ಕಳೆಯುತ್ತಿದ್ದಂತಿದೆ.

ಅಂದರೆ ಕೋಟಿ ಕೋಟಿ ಜನರು ಬಳಸುತ್ತಿರುವ, ಖಾಸಗಿ ಸಂದೇಶಗಳನ್ನೂ ಕಳಿಸಲು ಬಳಸುವ ಇಮೇಲ್, ವಾಟ್ಸಾಪ್‍ಗಳನ್ನು ಯಾರಾದರೂ ಮಾನಿಟರ್ ಮಾಡಲು ಸಾಧ್ಯವೇ? ಈ ರೀತಿ ಖಾಸಗಿ ಸಂದೇಶಗಳನ್ನೂ ನಿರ್ಬಂಧಿಸಬೇಕೆಂದು ಒಬ್ಬ ವಕೀಲ ಭಾವಿಸುತ್ತಾರೆಯೇ?
ಇಂತಹ ಕೇಸುಗಳು ಪ್ರತಿವಾದಿಗಳ ಗೈರುಹಾಜರಿಯಲ್ಲಿ – ಎಕ್ಸ್ ಪಾರ್ಟೇ – ತಕ್ಷಣದ ಆದೇಶ ಪಡೆದುಕೊಳ್ಳುತ್ತವಾದ್ದರಿಂದ, ಅದರ ಲಾಭ ಪಡೆಯಲು ದುರುದ್ದೇಶಪೂರ್ವಕವಾದ ಕ್ರಮಕ್ಕೆ ತೇಜಸ್ವಿ ಮುಂದಾಗಿದ್ದಾರೆ. ಹಾಗೆ ಮಾಡುವಾಗ, ಇಲ್ಲದ ಪ್ರತಿವಾದಿಗಳನ್ನೂ ಹೆಸರಿಸುವ ಅಜ್ಞಾನವೂ ವ್ಯಕ್ತವಾಗಿದೆ.
ಈಗಾಗಲೇ ಇಂಡಿಯನ್ ಎಕ್ಸ್‍ಪ್ರೆಸ್ ಸದರಿ ಕೇಸಿನ ಕುರಿತು ಸಂಪಾದಕೀಯವನ್ನೇ ಬರೆದು ಖಂಡಿಸಿದೆ. ದೇಶಾದ್ಯಂತ ಕೋಟಿ ಕೋಟಿ ಫೇಕ್ ನ್ಯೂಸ್‍ಗಳನ್ನು ಹಬ್ಬಿಸುವ ಜಾಲದ ಪ್ರಮುಖರಾಗಿರುವ ತೇಜಸ್ವಿ ತನ್ನ ವಿರುದ್ಧ ಸತ್ಯವನ್ನೂ ಬರೆಯದಂತೆ ಕೋರ್ಟಿನ ಮೊರೆ ಹೋಗಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...