Homeಕರ್ನಾಟಕಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯರಿಂದ ನೊಂದಿದ್ದೇನೆಂದೂ, ತಾನು ಮೊದಲ ವ್ಯಕ್ತಿಯೂ ಅಲ್ಲ, ಕಡೆಯವಳೂ ಅಲ್ಲ ಎಂದು ಮಹಿಳಾ ಉದ್ಯಮಿಯೊಬ್ಬರು ಮಾಡಿದ ಟ್ವೀಟ್‍ನ ನಂತರ, ಅದನ್ನು ಒಂದು ಸುದ್ದಿಯಾಗಿ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಟ್ವೀಟ್ ಮಾಡಿದ್ದು ನಿಜ, ಹಾಗಾಗಿ ಸುದ್ದಿಯೂ ಆಯಿತು. ಆದರೆ, ತನ್ನ ವಿರುದ್ಧ ಮಾಧ್ಯಮಗಳು ಏನನ್ನೂ ಪ್ರಕಟಿಸಬಾರದೆಂದು ತೇಜಸ್ವಿ ಕೋರ್ಟಿಗೆ ಹೋದರು.

ತಮಾಷೆಯೆಂದರೆ ಆತ ಮೊಕದ್ದಮೆ ಹೂಡಿದ ಮಾಧ್ಯಮಗಳ ಪಟ್ಟಿಯಲ್ಲಿ ನಾಲ್ಕು ಅಸ್ತಿತ್ವದಲ್ಲೇ ಇಲ್ಲ!
ಯಾವ ಮಾಧ್ಯಮಗಳು ತನ್ನ ಬಗ್ಗೆ ಸುದ್ದಿ ಪ್ರಕಟಿಸುತ್ತಿವೆಯೋ ಆ ಮಾಧ್ಯಮಗಳನ್ನೆಲ್ಲಾ ವಿರುದ್ಧ ಸುದ್ದಿ ಪ್ರಕಟಿಸುವುದು ಎಂದು ಒಬ್ಬ ವಕೀಲ ತಿಳಿದದ್ದೇ ವಿಚಿತ್ರ. ತೇಜಸ್ವಿ ಸೂರ್ಯ ಯಾವೆಲ್ಲಾ ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿಸಿದ್ದಾರೋ ಅವುಗಳಲ್ಲಿ ಹಲವು ಸುದ್ದಿಯನ್ನೇ ಪ್ರಕಟಿಸಿರಲಿಲ್ಲ. ಇನ್ನು ಮೂರು ಮಾಧ್ಯಮ ಸಂಸ್ಥೆಗಳು ಅಸ್ತಿತ್ವದಲ್ಲೇ ಇಲ್ಲ.

ಹಿಂದಿನ ಯಾವುದೋ ಸಮಯದ ಮಾಧ್ಯಮಗಳ ಪಟ್ಟಿಯನ್ನು ಎಲ್ಲಿಂದಲೋ ತೆಗೆದುಕೊಂಡರು, ಆ ಪಟ್ಟಿಯನ್ನು ಯಥಾವತ್ತಾಗಿ ಪ್ರತಿವಾದಿಗಳನ್ನಾಗಿ ಮಾಡಿದರು. ಅಷ್ಟೇ ಅಲ್ಲ ವಾಟ್ಸಾಪ್, ಫೇಸ್‍ಬುಕ್, ಯೂಟ್ಯೂಬ್, ಯಾಹೂ, ಗೂಗಲ್‍ಗಳನ್ನೂ ಪ್ರತಿವಾದಿಗಳನ್ನಾಗಿಸಿದರು.

ಈ ಮೂಲಕ ಅವರು ತನ್ನ ನಿಜಮುಖವನ್ನು ವಾಟ್ಸಾಪ್ ಮೂಲಕ ಯಾರಾದರೂ ಫಾರ್ವರ್ಡ್ ಮಾಡಿದರೆ, ವಾಟ್ಸಾಪ್‍ಅನ್ನೇ ಅದಕ್ಕೆ ಹೊಣೆಗಾರನನ್ನಾಗಿಸುತ್ತೇನೆಂಬ ಸಂದೇಶ, ಇ-ಮೇಲ್ ಮೂಲಕ ಯಾರಾದರೂ ಯಾರಿಗಾದರೂ ಕಳಿಸಿದರೂ ಯಾಹೂ ಅಥವಾ ಗೂಗಲ್‍ಗಳನ್ನೂ ಹೊಣೆಗಾರರನ್ನಾಗಿಸುತ್ತೇನೆಂಬ ಬೆದರಿಕೆ ಒಡ್ಡಿದಂತಾಗಿದೆ!! ನ್ಯಾಷನಲ್ ಲಾ ಸ್ಕೂಲ್‍ನಂತಹ ದೇಶದ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ಕಾನೂನು ಓದಿರುವ ತೇಜಸ್ವಿ ಕೋರ್ಟಿನಲ್ಲಿ ಈ ರೀತಿಯ ತನ್ನ ಬಾಲಚೇಷ್ಟೆಗಳ ಮೂಲಕ ಸಂಸ್ಥೆಯ ಮರ್ಯಾದೆಯನ್ನೂ ಕಳೆಯುತ್ತಿದ್ದಂತಿದೆ.

ಅಂದರೆ ಕೋಟಿ ಕೋಟಿ ಜನರು ಬಳಸುತ್ತಿರುವ, ಖಾಸಗಿ ಸಂದೇಶಗಳನ್ನೂ ಕಳಿಸಲು ಬಳಸುವ ಇಮೇಲ್, ವಾಟ್ಸಾಪ್‍ಗಳನ್ನು ಯಾರಾದರೂ ಮಾನಿಟರ್ ಮಾಡಲು ಸಾಧ್ಯವೇ? ಈ ರೀತಿ ಖಾಸಗಿ ಸಂದೇಶಗಳನ್ನೂ ನಿರ್ಬಂಧಿಸಬೇಕೆಂದು ಒಬ್ಬ ವಕೀಲ ಭಾವಿಸುತ್ತಾರೆಯೇ?
ಇಂತಹ ಕೇಸುಗಳು ಪ್ರತಿವಾದಿಗಳ ಗೈರುಹಾಜರಿಯಲ್ಲಿ – ಎಕ್ಸ್ ಪಾರ್ಟೇ – ತಕ್ಷಣದ ಆದೇಶ ಪಡೆದುಕೊಳ್ಳುತ್ತವಾದ್ದರಿಂದ, ಅದರ ಲಾಭ ಪಡೆಯಲು ದುರುದ್ದೇಶಪೂರ್ವಕವಾದ ಕ್ರಮಕ್ಕೆ ತೇಜಸ್ವಿ ಮುಂದಾಗಿದ್ದಾರೆ. ಹಾಗೆ ಮಾಡುವಾಗ, ಇಲ್ಲದ ಪ್ರತಿವಾದಿಗಳನ್ನೂ ಹೆಸರಿಸುವ ಅಜ್ಞಾನವೂ ವ್ಯಕ್ತವಾಗಿದೆ.
ಈಗಾಗಲೇ ಇಂಡಿಯನ್ ಎಕ್ಸ್‍ಪ್ರೆಸ್ ಸದರಿ ಕೇಸಿನ ಕುರಿತು ಸಂಪಾದಕೀಯವನ್ನೇ ಬರೆದು ಖಂಡಿಸಿದೆ. ದೇಶಾದ್ಯಂತ ಕೋಟಿ ಕೋಟಿ ಫೇಕ್ ನ್ಯೂಸ್‍ಗಳನ್ನು ಹಬ್ಬಿಸುವ ಜಾಲದ ಪ್ರಮುಖರಾಗಿರುವ ತೇಜಸ್ವಿ ತನ್ನ ವಿರುದ್ಧ ಸತ್ಯವನ್ನೂ ಬರೆಯದಂತೆ ಕೋರ್ಟಿನ ಮೊರೆ ಹೋಗಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...