Homeಕರ್ನಾಟಕಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯರಿಂದ ನೊಂದಿದ್ದೇನೆಂದೂ, ತಾನು ಮೊದಲ ವ್ಯಕ್ತಿಯೂ ಅಲ್ಲ, ಕಡೆಯವಳೂ ಅಲ್ಲ ಎಂದು ಮಹಿಳಾ ಉದ್ಯಮಿಯೊಬ್ಬರು ಮಾಡಿದ ಟ್ವೀಟ್‍ನ ನಂತರ, ಅದನ್ನು ಒಂದು ಸುದ್ದಿಯಾಗಿ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಟ್ವೀಟ್ ಮಾಡಿದ್ದು ನಿಜ, ಹಾಗಾಗಿ ಸುದ್ದಿಯೂ ಆಯಿತು. ಆದರೆ, ತನ್ನ ವಿರುದ್ಧ ಮಾಧ್ಯಮಗಳು ಏನನ್ನೂ ಪ್ರಕಟಿಸಬಾರದೆಂದು ತೇಜಸ್ವಿ ಕೋರ್ಟಿಗೆ ಹೋದರು.

ತಮಾಷೆಯೆಂದರೆ ಆತ ಮೊಕದ್ದಮೆ ಹೂಡಿದ ಮಾಧ್ಯಮಗಳ ಪಟ್ಟಿಯಲ್ಲಿ ನಾಲ್ಕು ಅಸ್ತಿತ್ವದಲ್ಲೇ ಇಲ್ಲ!
ಯಾವ ಮಾಧ್ಯಮಗಳು ತನ್ನ ಬಗ್ಗೆ ಸುದ್ದಿ ಪ್ರಕಟಿಸುತ್ತಿವೆಯೋ ಆ ಮಾಧ್ಯಮಗಳನ್ನೆಲ್ಲಾ ವಿರುದ್ಧ ಸುದ್ದಿ ಪ್ರಕಟಿಸುವುದು ಎಂದು ಒಬ್ಬ ವಕೀಲ ತಿಳಿದದ್ದೇ ವಿಚಿತ್ರ. ತೇಜಸ್ವಿ ಸೂರ್ಯ ಯಾವೆಲ್ಲಾ ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿಸಿದ್ದಾರೋ ಅವುಗಳಲ್ಲಿ ಹಲವು ಸುದ್ದಿಯನ್ನೇ ಪ್ರಕಟಿಸಿರಲಿಲ್ಲ. ಇನ್ನು ಮೂರು ಮಾಧ್ಯಮ ಸಂಸ್ಥೆಗಳು ಅಸ್ತಿತ್ವದಲ್ಲೇ ಇಲ್ಲ.

ಹಿಂದಿನ ಯಾವುದೋ ಸಮಯದ ಮಾಧ್ಯಮಗಳ ಪಟ್ಟಿಯನ್ನು ಎಲ್ಲಿಂದಲೋ ತೆಗೆದುಕೊಂಡರು, ಆ ಪಟ್ಟಿಯನ್ನು ಯಥಾವತ್ತಾಗಿ ಪ್ರತಿವಾದಿಗಳನ್ನಾಗಿ ಮಾಡಿದರು. ಅಷ್ಟೇ ಅಲ್ಲ ವಾಟ್ಸಾಪ್, ಫೇಸ್‍ಬುಕ್, ಯೂಟ್ಯೂಬ್, ಯಾಹೂ, ಗೂಗಲ್‍ಗಳನ್ನೂ ಪ್ರತಿವಾದಿಗಳನ್ನಾಗಿಸಿದರು.

ಈ ಮೂಲಕ ಅವರು ತನ್ನ ನಿಜಮುಖವನ್ನು ವಾಟ್ಸಾಪ್ ಮೂಲಕ ಯಾರಾದರೂ ಫಾರ್ವರ್ಡ್ ಮಾಡಿದರೆ, ವಾಟ್ಸಾಪ್‍ಅನ್ನೇ ಅದಕ್ಕೆ ಹೊಣೆಗಾರನನ್ನಾಗಿಸುತ್ತೇನೆಂಬ ಸಂದೇಶ, ಇ-ಮೇಲ್ ಮೂಲಕ ಯಾರಾದರೂ ಯಾರಿಗಾದರೂ ಕಳಿಸಿದರೂ ಯಾಹೂ ಅಥವಾ ಗೂಗಲ್‍ಗಳನ್ನೂ ಹೊಣೆಗಾರರನ್ನಾಗಿಸುತ್ತೇನೆಂಬ ಬೆದರಿಕೆ ಒಡ್ಡಿದಂತಾಗಿದೆ!! ನ್ಯಾಷನಲ್ ಲಾ ಸ್ಕೂಲ್‍ನಂತಹ ದೇಶದ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ಕಾನೂನು ಓದಿರುವ ತೇಜಸ್ವಿ ಕೋರ್ಟಿನಲ್ಲಿ ಈ ರೀತಿಯ ತನ್ನ ಬಾಲಚೇಷ್ಟೆಗಳ ಮೂಲಕ ಸಂಸ್ಥೆಯ ಮರ್ಯಾದೆಯನ್ನೂ ಕಳೆಯುತ್ತಿದ್ದಂತಿದೆ.

ಅಂದರೆ ಕೋಟಿ ಕೋಟಿ ಜನರು ಬಳಸುತ್ತಿರುವ, ಖಾಸಗಿ ಸಂದೇಶಗಳನ್ನೂ ಕಳಿಸಲು ಬಳಸುವ ಇಮೇಲ್, ವಾಟ್ಸಾಪ್‍ಗಳನ್ನು ಯಾರಾದರೂ ಮಾನಿಟರ್ ಮಾಡಲು ಸಾಧ್ಯವೇ? ಈ ರೀತಿ ಖಾಸಗಿ ಸಂದೇಶಗಳನ್ನೂ ನಿರ್ಬಂಧಿಸಬೇಕೆಂದು ಒಬ್ಬ ವಕೀಲ ಭಾವಿಸುತ್ತಾರೆಯೇ?
ಇಂತಹ ಕೇಸುಗಳು ಪ್ರತಿವಾದಿಗಳ ಗೈರುಹಾಜರಿಯಲ್ಲಿ – ಎಕ್ಸ್ ಪಾರ್ಟೇ – ತಕ್ಷಣದ ಆದೇಶ ಪಡೆದುಕೊಳ್ಳುತ್ತವಾದ್ದರಿಂದ, ಅದರ ಲಾಭ ಪಡೆಯಲು ದುರುದ್ದೇಶಪೂರ್ವಕವಾದ ಕ್ರಮಕ್ಕೆ ತೇಜಸ್ವಿ ಮುಂದಾಗಿದ್ದಾರೆ. ಹಾಗೆ ಮಾಡುವಾಗ, ಇಲ್ಲದ ಪ್ರತಿವಾದಿಗಳನ್ನೂ ಹೆಸರಿಸುವ ಅಜ್ಞಾನವೂ ವ್ಯಕ್ತವಾಗಿದೆ.
ಈಗಾಗಲೇ ಇಂಡಿಯನ್ ಎಕ್ಸ್‍ಪ್ರೆಸ್ ಸದರಿ ಕೇಸಿನ ಕುರಿತು ಸಂಪಾದಕೀಯವನ್ನೇ ಬರೆದು ಖಂಡಿಸಿದೆ. ದೇಶಾದ್ಯಂತ ಕೋಟಿ ಕೋಟಿ ಫೇಕ್ ನ್ಯೂಸ್‍ಗಳನ್ನು ಹಬ್ಬಿಸುವ ಜಾಲದ ಪ್ರಮುಖರಾಗಿರುವ ತೇಜಸ್ವಿ ತನ್ನ ವಿರುದ್ಧ ಸತ್ಯವನ್ನೂ ಬರೆಯದಂತೆ ಕೋರ್ಟಿನ ಮೊರೆ ಹೋಗಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...