Homeಕರ್ನಾಟಕಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯರಿಂದ ನೊಂದಿದ್ದೇನೆಂದೂ, ತಾನು ಮೊದಲ ವ್ಯಕ್ತಿಯೂ ಅಲ್ಲ, ಕಡೆಯವಳೂ ಅಲ್ಲ ಎಂದು ಮಹಿಳಾ ಉದ್ಯಮಿಯೊಬ್ಬರು ಮಾಡಿದ ಟ್ವೀಟ್‍ನ ನಂತರ, ಅದನ್ನು ಒಂದು ಸುದ್ದಿಯಾಗಿ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಟ್ವೀಟ್ ಮಾಡಿದ್ದು ನಿಜ, ಹಾಗಾಗಿ ಸುದ್ದಿಯೂ ಆಯಿತು. ಆದರೆ, ತನ್ನ ವಿರುದ್ಧ ಮಾಧ್ಯಮಗಳು ಏನನ್ನೂ ಪ್ರಕಟಿಸಬಾರದೆಂದು ತೇಜಸ್ವಿ ಕೋರ್ಟಿಗೆ ಹೋದರು.

ತಮಾಷೆಯೆಂದರೆ ಆತ ಮೊಕದ್ದಮೆ ಹೂಡಿದ ಮಾಧ್ಯಮಗಳ ಪಟ್ಟಿಯಲ್ಲಿ ನಾಲ್ಕು ಅಸ್ತಿತ್ವದಲ್ಲೇ ಇಲ್ಲ!
ಯಾವ ಮಾಧ್ಯಮಗಳು ತನ್ನ ಬಗ್ಗೆ ಸುದ್ದಿ ಪ್ರಕಟಿಸುತ್ತಿವೆಯೋ ಆ ಮಾಧ್ಯಮಗಳನ್ನೆಲ್ಲಾ ವಿರುದ್ಧ ಸುದ್ದಿ ಪ್ರಕಟಿಸುವುದು ಎಂದು ಒಬ್ಬ ವಕೀಲ ತಿಳಿದದ್ದೇ ವಿಚಿತ್ರ. ತೇಜಸ್ವಿ ಸೂರ್ಯ ಯಾವೆಲ್ಲಾ ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿಸಿದ್ದಾರೋ ಅವುಗಳಲ್ಲಿ ಹಲವು ಸುದ್ದಿಯನ್ನೇ ಪ್ರಕಟಿಸಿರಲಿಲ್ಲ. ಇನ್ನು ಮೂರು ಮಾಧ್ಯಮ ಸಂಸ್ಥೆಗಳು ಅಸ್ತಿತ್ವದಲ್ಲೇ ಇಲ್ಲ.

ಹಿಂದಿನ ಯಾವುದೋ ಸಮಯದ ಮಾಧ್ಯಮಗಳ ಪಟ್ಟಿಯನ್ನು ಎಲ್ಲಿಂದಲೋ ತೆಗೆದುಕೊಂಡರು, ಆ ಪಟ್ಟಿಯನ್ನು ಯಥಾವತ್ತಾಗಿ ಪ್ರತಿವಾದಿಗಳನ್ನಾಗಿ ಮಾಡಿದರು. ಅಷ್ಟೇ ಅಲ್ಲ ವಾಟ್ಸಾಪ್, ಫೇಸ್‍ಬುಕ್, ಯೂಟ್ಯೂಬ್, ಯಾಹೂ, ಗೂಗಲ್‍ಗಳನ್ನೂ ಪ್ರತಿವಾದಿಗಳನ್ನಾಗಿಸಿದರು.

ಈ ಮೂಲಕ ಅವರು ತನ್ನ ನಿಜಮುಖವನ್ನು ವಾಟ್ಸಾಪ್ ಮೂಲಕ ಯಾರಾದರೂ ಫಾರ್ವರ್ಡ್ ಮಾಡಿದರೆ, ವಾಟ್ಸಾಪ್‍ಅನ್ನೇ ಅದಕ್ಕೆ ಹೊಣೆಗಾರನನ್ನಾಗಿಸುತ್ತೇನೆಂಬ ಸಂದೇಶ, ಇ-ಮೇಲ್ ಮೂಲಕ ಯಾರಾದರೂ ಯಾರಿಗಾದರೂ ಕಳಿಸಿದರೂ ಯಾಹೂ ಅಥವಾ ಗೂಗಲ್‍ಗಳನ್ನೂ ಹೊಣೆಗಾರರನ್ನಾಗಿಸುತ್ತೇನೆಂಬ ಬೆದರಿಕೆ ಒಡ್ಡಿದಂತಾಗಿದೆ!! ನ್ಯಾಷನಲ್ ಲಾ ಸ್ಕೂಲ್‍ನಂತಹ ದೇಶದ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ಕಾನೂನು ಓದಿರುವ ತೇಜಸ್ವಿ ಕೋರ್ಟಿನಲ್ಲಿ ಈ ರೀತಿಯ ತನ್ನ ಬಾಲಚೇಷ್ಟೆಗಳ ಮೂಲಕ ಸಂಸ್ಥೆಯ ಮರ್ಯಾದೆಯನ್ನೂ ಕಳೆಯುತ್ತಿದ್ದಂತಿದೆ.

ಅಂದರೆ ಕೋಟಿ ಕೋಟಿ ಜನರು ಬಳಸುತ್ತಿರುವ, ಖಾಸಗಿ ಸಂದೇಶಗಳನ್ನೂ ಕಳಿಸಲು ಬಳಸುವ ಇಮೇಲ್, ವಾಟ್ಸಾಪ್‍ಗಳನ್ನು ಯಾರಾದರೂ ಮಾನಿಟರ್ ಮಾಡಲು ಸಾಧ್ಯವೇ? ಈ ರೀತಿ ಖಾಸಗಿ ಸಂದೇಶಗಳನ್ನೂ ನಿರ್ಬಂಧಿಸಬೇಕೆಂದು ಒಬ್ಬ ವಕೀಲ ಭಾವಿಸುತ್ತಾರೆಯೇ?
ಇಂತಹ ಕೇಸುಗಳು ಪ್ರತಿವಾದಿಗಳ ಗೈರುಹಾಜರಿಯಲ್ಲಿ – ಎಕ್ಸ್ ಪಾರ್ಟೇ – ತಕ್ಷಣದ ಆದೇಶ ಪಡೆದುಕೊಳ್ಳುತ್ತವಾದ್ದರಿಂದ, ಅದರ ಲಾಭ ಪಡೆಯಲು ದುರುದ್ದೇಶಪೂರ್ವಕವಾದ ಕ್ರಮಕ್ಕೆ ತೇಜಸ್ವಿ ಮುಂದಾಗಿದ್ದಾರೆ. ಹಾಗೆ ಮಾಡುವಾಗ, ಇಲ್ಲದ ಪ್ರತಿವಾದಿಗಳನ್ನೂ ಹೆಸರಿಸುವ ಅಜ್ಞಾನವೂ ವ್ಯಕ್ತವಾಗಿದೆ.
ಈಗಾಗಲೇ ಇಂಡಿಯನ್ ಎಕ್ಸ್‍ಪ್ರೆಸ್ ಸದರಿ ಕೇಸಿನ ಕುರಿತು ಸಂಪಾದಕೀಯವನ್ನೇ ಬರೆದು ಖಂಡಿಸಿದೆ. ದೇಶಾದ್ಯಂತ ಕೋಟಿ ಕೋಟಿ ಫೇಕ್ ನ್ಯೂಸ್‍ಗಳನ್ನು ಹಬ್ಬಿಸುವ ಜಾಲದ ಪ್ರಮುಖರಾಗಿರುವ ತೇಜಸ್ವಿ ತನ್ನ ವಿರುದ್ಧ ಸತ್ಯವನ್ನೂ ಬರೆಯದಂತೆ ಕೋರ್ಟಿನ ಮೊರೆ ಹೋಗಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...