Homeಕರ್ನಾಟಕಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯರಿಂದ ನೊಂದಿದ್ದೇನೆಂದೂ, ತಾನು ಮೊದಲ ವ್ಯಕ್ತಿಯೂ ಅಲ್ಲ, ಕಡೆಯವಳೂ ಅಲ್ಲ ಎಂದು ಮಹಿಳಾ ಉದ್ಯಮಿಯೊಬ್ಬರು ಮಾಡಿದ ಟ್ವೀಟ್‍ನ ನಂತರ, ಅದನ್ನು ಒಂದು ಸುದ್ದಿಯಾಗಿ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಟ್ವೀಟ್ ಮಾಡಿದ್ದು ನಿಜ, ಹಾಗಾಗಿ ಸುದ್ದಿಯೂ ಆಯಿತು. ಆದರೆ, ತನ್ನ ವಿರುದ್ಧ ಮಾಧ್ಯಮಗಳು ಏನನ್ನೂ ಪ್ರಕಟಿಸಬಾರದೆಂದು ತೇಜಸ್ವಿ ಕೋರ್ಟಿಗೆ ಹೋದರು.

ತಮಾಷೆಯೆಂದರೆ ಆತ ಮೊಕದ್ದಮೆ ಹೂಡಿದ ಮಾಧ್ಯಮಗಳ ಪಟ್ಟಿಯಲ್ಲಿ ನಾಲ್ಕು ಅಸ್ತಿತ್ವದಲ್ಲೇ ಇಲ್ಲ!
ಯಾವ ಮಾಧ್ಯಮಗಳು ತನ್ನ ಬಗ್ಗೆ ಸುದ್ದಿ ಪ್ರಕಟಿಸುತ್ತಿವೆಯೋ ಆ ಮಾಧ್ಯಮಗಳನ್ನೆಲ್ಲಾ ವಿರುದ್ಧ ಸುದ್ದಿ ಪ್ರಕಟಿಸುವುದು ಎಂದು ಒಬ್ಬ ವಕೀಲ ತಿಳಿದದ್ದೇ ವಿಚಿತ್ರ. ತೇಜಸ್ವಿ ಸೂರ್ಯ ಯಾವೆಲ್ಲಾ ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿಸಿದ್ದಾರೋ ಅವುಗಳಲ್ಲಿ ಹಲವು ಸುದ್ದಿಯನ್ನೇ ಪ್ರಕಟಿಸಿರಲಿಲ್ಲ. ಇನ್ನು ಮೂರು ಮಾಧ್ಯಮ ಸಂಸ್ಥೆಗಳು ಅಸ್ತಿತ್ವದಲ್ಲೇ ಇಲ್ಲ.

ಹಿಂದಿನ ಯಾವುದೋ ಸಮಯದ ಮಾಧ್ಯಮಗಳ ಪಟ್ಟಿಯನ್ನು ಎಲ್ಲಿಂದಲೋ ತೆಗೆದುಕೊಂಡರು, ಆ ಪಟ್ಟಿಯನ್ನು ಯಥಾವತ್ತಾಗಿ ಪ್ರತಿವಾದಿಗಳನ್ನಾಗಿ ಮಾಡಿದರು. ಅಷ್ಟೇ ಅಲ್ಲ ವಾಟ್ಸಾಪ್, ಫೇಸ್‍ಬುಕ್, ಯೂಟ್ಯೂಬ್, ಯಾಹೂ, ಗೂಗಲ್‍ಗಳನ್ನೂ ಪ್ರತಿವಾದಿಗಳನ್ನಾಗಿಸಿದರು.

ಈ ಮೂಲಕ ಅವರು ತನ್ನ ನಿಜಮುಖವನ್ನು ವಾಟ್ಸಾಪ್ ಮೂಲಕ ಯಾರಾದರೂ ಫಾರ್ವರ್ಡ್ ಮಾಡಿದರೆ, ವಾಟ್ಸಾಪ್‍ಅನ್ನೇ ಅದಕ್ಕೆ ಹೊಣೆಗಾರನನ್ನಾಗಿಸುತ್ತೇನೆಂಬ ಸಂದೇಶ, ಇ-ಮೇಲ್ ಮೂಲಕ ಯಾರಾದರೂ ಯಾರಿಗಾದರೂ ಕಳಿಸಿದರೂ ಯಾಹೂ ಅಥವಾ ಗೂಗಲ್‍ಗಳನ್ನೂ ಹೊಣೆಗಾರರನ್ನಾಗಿಸುತ್ತೇನೆಂಬ ಬೆದರಿಕೆ ಒಡ್ಡಿದಂತಾಗಿದೆ!! ನ್ಯಾಷನಲ್ ಲಾ ಸ್ಕೂಲ್‍ನಂತಹ ದೇಶದ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ಕಾನೂನು ಓದಿರುವ ತೇಜಸ್ವಿ ಕೋರ್ಟಿನಲ್ಲಿ ಈ ರೀತಿಯ ತನ್ನ ಬಾಲಚೇಷ್ಟೆಗಳ ಮೂಲಕ ಸಂಸ್ಥೆಯ ಮರ್ಯಾದೆಯನ್ನೂ ಕಳೆಯುತ್ತಿದ್ದಂತಿದೆ.

ಅಂದರೆ ಕೋಟಿ ಕೋಟಿ ಜನರು ಬಳಸುತ್ತಿರುವ, ಖಾಸಗಿ ಸಂದೇಶಗಳನ್ನೂ ಕಳಿಸಲು ಬಳಸುವ ಇಮೇಲ್, ವಾಟ್ಸಾಪ್‍ಗಳನ್ನು ಯಾರಾದರೂ ಮಾನಿಟರ್ ಮಾಡಲು ಸಾಧ್ಯವೇ? ಈ ರೀತಿ ಖಾಸಗಿ ಸಂದೇಶಗಳನ್ನೂ ನಿರ್ಬಂಧಿಸಬೇಕೆಂದು ಒಬ್ಬ ವಕೀಲ ಭಾವಿಸುತ್ತಾರೆಯೇ?
ಇಂತಹ ಕೇಸುಗಳು ಪ್ರತಿವಾದಿಗಳ ಗೈರುಹಾಜರಿಯಲ್ಲಿ – ಎಕ್ಸ್ ಪಾರ್ಟೇ – ತಕ್ಷಣದ ಆದೇಶ ಪಡೆದುಕೊಳ್ಳುತ್ತವಾದ್ದರಿಂದ, ಅದರ ಲಾಭ ಪಡೆಯಲು ದುರುದ್ದೇಶಪೂರ್ವಕವಾದ ಕ್ರಮಕ್ಕೆ ತೇಜಸ್ವಿ ಮುಂದಾಗಿದ್ದಾರೆ. ಹಾಗೆ ಮಾಡುವಾಗ, ಇಲ್ಲದ ಪ್ರತಿವಾದಿಗಳನ್ನೂ ಹೆಸರಿಸುವ ಅಜ್ಞಾನವೂ ವ್ಯಕ್ತವಾಗಿದೆ.
ಈಗಾಗಲೇ ಇಂಡಿಯನ್ ಎಕ್ಸ್‍ಪ್ರೆಸ್ ಸದರಿ ಕೇಸಿನ ಕುರಿತು ಸಂಪಾದಕೀಯವನ್ನೇ ಬರೆದು ಖಂಡಿಸಿದೆ. ದೇಶಾದ್ಯಂತ ಕೋಟಿ ಕೋಟಿ ಫೇಕ್ ನ್ಯೂಸ್‍ಗಳನ್ನು ಹಬ್ಬಿಸುವ ಜಾಲದ ಪ್ರಮುಖರಾಗಿರುವ ತೇಜಸ್ವಿ ತನ್ನ ವಿರುದ್ಧ ಸತ್ಯವನ್ನೂ ಬರೆಯದಂತೆ ಕೋರ್ಟಿನ ಮೊರೆ ಹೋಗಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...