Homeಮುಖಪುಟತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

ತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

- Advertisement -
- Advertisement -

ಏರೋ ಇಂಡಿಯಾ ಸಮಯದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಎಲ್‌ಸಿಎ ತೇಜಸ್ ಯುದ್ಧ ವಿಮಾನದಲ್ಲಿ ವಿಹಾರ ನಡೆಸಿದ್ದು ಬಿಜೆಪಿ ಪಕ್ಷದಲ್ಲೇ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2021 ರ ಸಂದರ್ಭದಲ್ಲಿ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರು ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (ಎಲ್‌ಸಿಎ) ತೇಜಸ್‌ನಲ್ಲಿ ಹಾರಾಟ ನಡೆಸಿ, ವಿಹರಿಸಿದ್ದರ ಬಗ್ಗೆ ಬಿಜೆಪಿಯಲ್ಲಿ ಎದೆಯುರಿ ಇದೆ.

ಬೆಂಗಳೂರು ದಕ್ಷಿಣ ಸಂಸದರಿಗೆ ಆ ಸವಲತ್ತು ಯಾವ ಸಾಮರ್ಥ್ಯದಲ್ಲಿದೆ ಎಂದು ಅನೇಕ ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಏರೋ ಇಂಡಿಯಾ ನಡೆದ ಸ್ಥಳವು ಅವರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೂಡ ಬರುವುದಿಲ್ಲ ಎಂದು ಹಿರಿಯ ನಾಯಕರು ಆಕ್ಷೇಪ ವ್ಯಕ್ತ ಮಾಡಿದ್ದಾರೆ ಎಂದು ದಿ ಪ್ರಿಂಟ್ ಹೇಳಿದೆ.

‘ಅವರು ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರಾಗಿದ್ದರೂ ಸಹ ಅದಕ್ಕೆ ಅವಕಾಶ ಸುಲಭವಲ್ಲ. ಅದೂ ತೇಜಸ್ವಿ ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರೂ ಅಲ್ಲ” ಎಂದು ಪಕ್ಷದ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.

ತೇಜಸ್ ಮೇಲೆ ಹಾರಾಟ ನಡೆಸಲೆಂದೇ ಪಕ್ಷದ ನಾಯಕತ್ವವು ಹಲವಾರು ದಿನಗಳವರೆಗೆ ಲೋಕಸಭೆಗೆ ಗೈರುಹಾಜರಾಗಲು ತೇಜಸ್ವಿಗೆ ಅವಕಾಶ ನೀಡಿರುವುದು ಮತ್ತಷ್ಟು ಅಸಮಾಧಾನ ಮೂಡಿಸಿದೆ.

ಇಂತಹ ಸವಾರಿಗಳನ್ನು ಸಾಮಾನ್ಯವಾಗಿ ಪ್ರಮುಖ ಗಣ್ಯರು, ಸರ್ಕಾರದ ಉನ್ನತ ನಾಯಕತ್ವ, ಹಿರಿಯ ಅಧಿಕಾರಿಗಳು ಮತ್ತು ಇಂತಹ ವ್ಯವಸ್ಥೆಯ ಬಗ್ಗೆ ಬರೆಯುವಲ್ಲಿ ಪರಿಣತಿ ಹೊಂದಿರುವ ಪತ್ರಕರ್ತರಿಗೆ ಆಯೋಜಿಸಲಾಗುತ್ತದೆ.

ಕೆಲವು ನಾಯಕರು, ತೇಜಸ್ವಿಯ ಹಾರಾಟವು ತೆರಿಗೆದಾರರ ಹಣವನ್ನು ವ್ಯರ್ಥ ಮಾಡಿದೆ ಎಂದು ಟೀಕಿಸಿದ್ದಾರೆ. ಅವಳಿ ಆಸನಗಳ ತೇಜಸ್‌ನ ಒಂದು ಸಣ್ಣ ಅವಧಿಯ ಹಾರಾಟಕ್ಕೆ 8-10 ಲಕ್ಷ ರೂ. ವೆಚ್ಚವಾಗುತ್ತದೆ. ಇದು ಸಾರ್ವಜನಿಕರ ಹಣ ಪೋಲು ಮಾಡಿದಂತೆ ಅಲ್ಲವೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಅಂತಹ ಜಾಯ್ ರೈಡ್‌ಗಳಿಗೆ ಅನುಮತಿಯನ್ನು ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಏಜೆನ್ಸಿ ನೀಡುತ್ತದೆ. ತೇಜಸ್ವಿ ಈ ಅನುಮತಿ ಪಡೆದಿದ್ದರೆ? ಇದಕ್ಕೆ ಅವರು ಅರ್ಹರೆ? ಎಂಬ ಪ್ರಶ್ನೆಗಳು ಎದ್ದಿವೆ.


ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...