Homeಮುಖಪುಟತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

ತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

- Advertisement -
- Advertisement -

ಏರೋ ಇಂಡಿಯಾ ಸಮಯದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಎಲ್‌ಸಿಎ ತೇಜಸ್ ಯುದ್ಧ ವಿಮಾನದಲ್ಲಿ ವಿಹಾರ ನಡೆಸಿದ್ದು ಬಿಜೆಪಿ ಪಕ್ಷದಲ್ಲೇ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2021 ರ ಸಂದರ್ಭದಲ್ಲಿ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರು ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (ಎಲ್‌ಸಿಎ) ತೇಜಸ್‌ನಲ್ಲಿ ಹಾರಾಟ ನಡೆಸಿ, ವಿಹರಿಸಿದ್ದರ ಬಗ್ಗೆ ಬಿಜೆಪಿಯಲ್ಲಿ ಎದೆಯುರಿ ಇದೆ.

ಬೆಂಗಳೂರು ದಕ್ಷಿಣ ಸಂಸದರಿಗೆ ಆ ಸವಲತ್ತು ಯಾವ ಸಾಮರ್ಥ್ಯದಲ್ಲಿದೆ ಎಂದು ಅನೇಕ ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಏರೋ ಇಂಡಿಯಾ ನಡೆದ ಸ್ಥಳವು ಅವರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೂಡ ಬರುವುದಿಲ್ಲ ಎಂದು ಹಿರಿಯ ನಾಯಕರು ಆಕ್ಷೇಪ ವ್ಯಕ್ತ ಮಾಡಿದ್ದಾರೆ ಎಂದು ದಿ ಪ್ರಿಂಟ್ ಹೇಳಿದೆ.

‘ಅವರು ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರಾಗಿದ್ದರೂ ಸಹ ಅದಕ್ಕೆ ಅವಕಾಶ ಸುಲಭವಲ್ಲ. ಅದೂ ತೇಜಸ್ವಿ ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರೂ ಅಲ್ಲ” ಎಂದು ಪಕ್ಷದ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.

ತೇಜಸ್ ಮೇಲೆ ಹಾರಾಟ ನಡೆಸಲೆಂದೇ ಪಕ್ಷದ ನಾಯಕತ್ವವು ಹಲವಾರು ದಿನಗಳವರೆಗೆ ಲೋಕಸಭೆಗೆ ಗೈರುಹಾಜರಾಗಲು ತೇಜಸ್ವಿಗೆ ಅವಕಾಶ ನೀಡಿರುವುದು ಮತ್ತಷ್ಟು ಅಸಮಾಧಾನ ಮೂಡಿಸಿದೆ.

ಇಂತಹ ಸವಾರಿಗಳನ್ನು ಸಾಮಾನ್ಯವಾಗಿ ಪ್ರಮುಖ ಗಣ್ಯರು, ಸರ್ಕಾರದ ಉನ್ನತ ನಾಯಕತ್ವ, ಹಿರಿಯ ಅಧಿಕಾರಿಗಳು ಮತ್ತು ಇಂತಹ ವ್ಯವಸ್ಥೆಯ ಬಗ್ಗೆ ಬರೆಯುವಲ್ಲಿ ಪರಿಣತಿ ಹೊಂದಿರುವ ಪತ್ರಕರ್ತರಿಗೆ ಆಯೋಜಿಸಲಾಗುತ್ತದೆ.

ಕೆಲವು ನಾಯಕರು, ತೇಜಸ್ವಿಯ ಹಾರಾಟವು ತೆರಿಗೆದಾರರ ಹಣವನ್ನು ವ್ಯರ್ಥ ಮಾಡಿದೆ ಎಂದು ಟೀಕಿಸಿದ್ದಾರೆ. ಅವಳಿ ಆಸನಗಳ ತೇಜಸ್‌ನ ಒಂದು ಸಣ್ಣ ಅವಧಿಯ ಹಾರಾಟಕ್ಕೆ 8-10 ಲಕ್ಷ ರೂ. ವೆಚ್ಚವಾಗುತ್ತದೆ. ಇದು ಸಾರ್ವಜನಿಕರ ಹಣ ಪೋಲು ಮಾಡಿದಂತೆ ಅಲ್ಲವೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಅಂತಹ ಜಾಯ್ ರೈಡ್‌ಗಳಿಗೆ ಅನುಮತಿಯನ್ನು ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಏಜೆನ್ಸಿ ನೀಡುತ್ತದೆ. ತೇಜಸ್ವಿ ಈ ಅನುಮತಿ ಪಡೆದಿದ್ದರೆ? ಇದಕ್ಕೆ ಅವರು ಅರ್ಹರೆ? ಎಂಬ ಪ್ರಶ್ನೆಗಳು ಎದ್ದಿವೆ.


ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...