Homeಮುಖಪುಟತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

ತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

- Advertisement -
- Advertisement -

ಏರೋ ಇಂಡಿಯಾ ಸಮಯದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಎಲ್‌ಸಿಎ ತೇಜಸ್ ಯುದ್ಧ ವಿಮಾನದಲ್ಲಿ ವಿಹಾರ ನಡೆಸಿದ್ದು ಬಿಜೆಪಿ ಪಕ್ಷದಲ್ಲೇ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2021 ರ ಸಂದರ್ಭದಲ್ಲಿ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರು ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (ಎಲ್‌ಸಿಎ) ತೇಜಸ್‌ನಲ್ಲಿ ಹಾರಾಟ ನಡೆಸಿ, ವಿಹರಿಸಿದ್ದರ ಬಗ್ಗೆ ಬಿಜೆಪಿಯಲ್ಲಿ ಎದೆಯುರಿ ಇದೆ.

ಬೆಂಗಳೂರು ದಕ್ಷಿಣ ಸಂಸದರಿಗೆ ಆ ಸವಲತ್ತು ಯಾವ ಸಾಮರ್ಥ್ಯದಲ್ಲಿದೆ ಎಂದು ಅನೇಕ ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಏರೋ ಇಂಡಿಯಾ ನಡೆದ ಸ್ಥಳವು ಅವರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೂಡ ಬರುವುದಿಲ್ಲ ಎಂದು ಹಿರಿಯ ನಾಯಕರು ಆಕ್ಷೇಪ ವ್ಯಕ್ತ ಮಾಡಿದ್ದಾರೆ ಎಂದು ದಿ ಪ್ರಿಂಟ್ ಹೇಳಿದೆ.

‘ಅವರು ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರಾಗಿದ್ದರೂ ಸಹ ಅದಕ್ಕೆ ಅವಕಾಶ ಸುಲಭವಲ್ಲ. ಅದೂ ತೇಜಸ್ವಿ ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರೂ ಅಲ್ಲ” ಎಂದು ಪಕ್ಷದ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.

ತೇಜಸ್ ಮೇಲೆ ಹಾರಾಟ ನಡೆಸಲೆಂದೇ ಪಕ್ಷದ ನಾಯಕತ್ವವು ಹಲವಾರು ದಿನಗಳವರೆಗೆ ಲೋಕಸಭೆಗೆ ಗೈರುಹಾಜರಾಗಲು ತೇಜಸ್ವಿಗೆ ಅವಕಾಶ ನೀಡಿರುವುದು ಮತ್ತಷ್ಟು ಅಸಮಾಧಾನ ಮೂಡಿಸಿದೆ.

ಇಂತಹ ಸವಾರಿಗಳನ್ನು ಸಾಮಾನ್ಯವಾಗಿ ಪ್ರಮುಖ ಗಣ್ಯರು, ಸರ್ಕಾರದ ಉನ್ನತ ನಾಯಕತ್ವ, ಹಿರಿಯ ಅಧಿಕಾರಿಗಳು ಮತ್ತು ಇಂತಹ ವ್ಯವಸ್ಥೆಯ ಬಗ್ಗೆ ಬರೆಯುವಲ್ಲಿ ಪರಿಣತಿ ಹೊಂದಿರುವ ಪತ್ರಕರ್ತರಿಗೆ ಆಯೋಜಿಸಲಾಗುತ್ತದೆ.

ಕೆಲವು ನಾಯಕರು, ತೇಜಸ್ವಿಯ ಹಾರಾಟವು ತೆರಿಗೆದಾರರ ಹಣವನ್ನು ವ್ಯರ್ಥ ಮಾಡಿದೆ ಎಂದು ಟೀಕಿಸಿದ್ದಾರೆ. ಅವಳಿ ಆಸನಗಳ ತೇಜಸ್‌ನ ಒಂದು ಸಣ್ಣ ಅವಧಿಯ ಹಾರಾಟಕ್ಕೆ 8-10 ಲಕ್ಷ ರೂ. ವೆಚ್ಚವಾಗುತ್ತದೆ. ಇದು ಸಾರ್ವಜನಿಕರ ಹಣ ಪೋಲು ಮಾಡಿದಂತೆ ಅಲ್ಲವೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಅಂತಹ ಜಾಯ್ ರೈಡ್‌ಗಳಿಗೆ ಅನುಮತಿಯನ್ನು ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಏಜೆನ್ಸಿ ನೀಡುತ್ತದೆ. ತೇಜಸ್ವಿ ಈ ಅನುಮತಿ ಪಡೆದಿದ್ದರೆ? ಇದಕ್ಕೆ ಅವರು ಅರ್ಹರೆ? ಎಂಬ ಪ್ರಶ್ನೆಗಳು ಎದ್ದಿವೆ.


ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...