Homeಮುಖಪುಟತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

ತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

- Advertisement -
- Advertisement -

ಏರೋ ಇಂಡಿಯಾ ಸಮಯದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಎಲ್‌ಸಿಎ ತೇಜಸ್ ಯುದ್ಧ ವಿಮಾನದಲ್ಲಿ ವಿಹಾರ ನಡೆಸಿದ್ದು ಬಿಜೆಪಿ ಪಕ್ಷದಲ್ಲೇ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2021 ರ ಸಂದರ್ಭದಲ್ಲಿ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರು ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (ಎಲ್‌ಸಿಎ) ತೇಜಸ್‌ನಲ್ಲಿ ಹಾರಾಟ ನಡೆಸಿ, ವಿಹರಿಸಿದ್ದರ ಬಗ್ಗೆ ಬಿಜೆಪಿಯಲ್ಲಿ ಎದೆಯುರಿ ಇದೆ.

ಬೆಂಗಳೂರು ದಕ್ಷಿಣ ಸಂಸದರಿಗೆ ಆ ಸವಲತ್ತು ಯಾವ ಸಾಮರ್ಥ್ಯದಲ್ಲಿದೆ ಎಂದು ಅನೇಕ ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಏರೋ ಇಂಡಿಯಾ ನಡೆದ ಸ್ಥಳವು ಅವರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೂಡ ಬರುವುದಿಲ್ಲ ಎಂದು ಹಿರಿಯ ನಾಯಕರು ಆಕ್ಷೇಪ ವ್ಯಕ್ತ ಮಾಡಿದ್ದಾರೆ ಎಂದು ದಿ ಪ್ರಿಂಟ್ ಹೇಳಿದೆ.

‘ಅವರು ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರಾಗಿದ್ದರೂ ಸಹ ಅದಕ್ಕೆ ಅವಕಾಶ ಸುಲಭವಲ್ಲ. ಅದೂ ತೇಜಸ್ವಿ ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರೂ ಅಲ್ಲ” ಎಂದು ಪಕ್ಷದ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.

ತೇಜಸ್ ಮೇಲೆ ಹಾರಾಟ ನಡೆಸಲೆಂದೇ ಪಕ್ಷದ ನಾಯಕತ್ವವು ಹಲವಾರು ದಿನಗಳವರೆಗೆ ಲೋಕಸಭೆಗೆ ಗೈರುಹಾಜರಾಗಲು ತೇಜಸ್ವಿಗೆ ಅವಕಾಶ ನೀಡಿರುವುದು ಮತ್ತಷ್ಟು ಅಸಮಾಧಾನ ಮೂಡಿಸಿದೆ.

ಇಂತಹ ಸವಾರಿಗಳನ್ನು ಸಾಮಾನ್ಯವಾಗಿ ಪ್ರಮುಖ ಗಣ್ಯರು, ಸರ್ಕಾರದ ಉನ್ನತ ನಾಯಕತ್ವ, ಹಿರಿಯ ಅಧಿಕಾರಿಗಳು ಮತ್ತು ಇಂತಹ ವ್ಯವಸ್ಥೆಯ ಬಗ್ಗೆ ಬರೆಯುವಲ್ಲಿ ಪರಿಣತಿ ಹೊಂದಿರುವ ಪತ್ರಕರ್ತರಿಗೆ ಆಯೋಜಿಸಲಾಗುತ್ತದೆ.

ಕೆಲವು ನಾಯಕರು, ತೇಜಸ್ವಿಯ ಹಾರಾಟವು ತೆರಿಗೆದಾರರ ಹಣವನ್ನು ವ್ಯರ್ಥ ಮಾಡಿದೆ ಎಂದು ಟೀಕಿಸಿದ್ದಾರೆ. ಅವಳಿ ಆಸನಗಳ ತೇಜಸ್‌ನ ಒಂದು ಸಣ್ಣ ಅವಧಿಯ ಹಾರಾಟಕ್ಕೆ 8-10 ಲಕ್ಷ ರೂ. ವೆಚ್ಚವಾಗುತ್ತದೆ. ಇದು ಸಾರ್ವಜನಿಕರ ಹಣ ಪೋಲು ಮಾಡಿದಂತೆ ಅಲ್ಲವೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಅಂತಹ ಜಾಯ್ ರೈಡ್‌ಗಳಿಗೆ ಅನುಮತಿಯನ್ನು ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಏಜೆನ್ಸಿ ನೀಡುತ್ತದೆ. ತೇಜಸ್ವಿ ಈ ಅನುಮತಿ ಪಡೆದಿದ್ದರೆ? ಇದಕ್ಕೆ ಅವರು ಅರ್ಹರೆ? ಎಂಬ ಪ್ರಶ್ನೆಗಳು ಎದ್ದಿವೆ.


ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...