Homeಮುಖಪುಟತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

ತೇಜಸ್‌ನಲ್ಲಿ ತೇಜಸ್ವಿ ಸೂರ್ಯ ವಿಹಾರ: ಪಕ್ಷದ ಹಲವು ಹಿರಿಯರ ಆಕ್ಷೇಪ

- Advertisement -
- Advertisement -

ಏರೋ ಇಂಡಿಯಾ ಸಮಯದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಎಲ್‌ಸಿಎ ತೇಜಸ್ ಯುದ್ಧ ವಿಮಾನದಲ್ಲಿ ವಿಹಾರ ನಡೆಸಿದ್ದು ಬಿಜೆಪಿ ಪಕ್ಷದಲ್ಲೇ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2021 ರ ಸಂದರ್ಭದಲ್ಲಿ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರು ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (ಎಲ್‌ಸಿಎ) ತೇಜಸ್‌ನಲ್ಲಿ ಹಾರಾಟ ನಡೆಸಿ, ವಿಹರಿಸಿದ್ದರ ಬಗ್ಗೆ ಬಿಜೆಪಿಯಲ್ಲಿ ಎದೆಯುರಿ ಇದೆ.

ಬೆಂಗಳೂರು ದಕ್ಷಿಣ ಸಂಸದರಿಗೆ ಆ ಸವಲತ್ತು ಯಾವ ಸಾಮರ್ಥ್ಯದಲ್ಲಿದೆ ಎಂದು ಅನೇಕ ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಏರೋ ಇಂಡಿಯಾ ನಡೆದ ಸ್ಥಳವು ಅವರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೂಡ ಬರುವುದಿಲ್ಲ ಎಂದು ಹಿರಿಯ ನಾಯಕರು ಆಕ್ಷೇಪ ವ್ಯಕ್ತ ಮಾಡಿದ್ದಾರೆ ಎಂದು ದಿ ಪ್ರಿಂಟ್ ಹೇಳಿದೆ.

‘ಅವರು ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರಾಗಿದ್ದರೂ ಸಹ ಅದಕ್ಕೆ ಅವಕಾಶ ಸುಲಭವಲ್ಲ. ಅದೂ ತೇಜಸ್ವಿ ರಕ್ಷಣಾ ಸಂಸದೀಯ ಸಮಿತಿಯ ಸದಸ್ಯರೂ ಅಲ್ಲ” ಎಂದು ಪಕ್ಷದ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.

ತೇಜಸ್ ಮೇಲೆ ಹಾರಾಟ ನಡೆಸಲೆಂದೇ ಪಕ್ಷದ ನಾಯಕತ್ವವು ಹಲವಾರು ದಿನಗಳವರೆಗೆ ಲೋಕಸಭೆಗೆ ಗೈರುಹಾಜರಾಗಲು ತೇಜಸ್ವಿಗೆ ಅವಕಾಶ ನೀಡಿರುವುದು ಮತ್ತಷ್ಟು ಅಸಮಾಧಾನ ಮೂಡಿಸಿದೆ.

ಇಂತಹ ಸವಾರಿಗಳನ್ನು ಸಾಮಾನ್ಯವಾಗಿ ಪ್ರಮುಖ ಗಣ್ಯರು, ಸರ್ಕಾರದ ಉನ್ನತ ನಾಯಕತ್ವ, ಹಿರಿಯ ಅಧಿಕಾರಿಗಳು ಮತ್ತು ಇಂತಹ ವ್ಯವಸ್ಥೆಯ ಬಗ್ಗೆ ಬರೆಯುವಲ್ಲಿ ಪರಿಣತಿ ಹೊಂದಿರುವ ಪತ್ರಕರ್ತರಿಗೆ ಆಯೋಜಿಸಲಾಗುತ್ತದೆ.

ಕೆಲವು ನಾಯಕರು, ತೇಜಸ್ವಿಯ ಹಾರಾಟವು ತೆರಿಗೆದಾರರ ಹಣವನ್ನು ವ್ಯರ್ಥ ಮಾಡಿದೆ ಎಂದು ಟೀಕಿಸಿದ್ದಾರೆ. ಅವಳಿ ಆಸನಗಳ ತೇಜಸ್‌ನ ಒಂದು ಸಣ್ಣ ಅವಧಿಯ ಹಾರಾಟಕ್ಕೆ 8-10 ಲಕ್ಷ ರೂ. ವೆಚ್ಚವಾಗುತ್ತದೆ. ಇದು ಸಾರ್ವಜನಿಕರ ಹಣ ಪೋಲು ಮಾಡಿದಂತೆ ಅಲ್ಲವೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಅಂತಹ ಜಾಯ್ ರೈಡ್‌ಗಳಿಗೆ ಅನುಮತಿಯನ್ನು ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಏಜೆನ್ಸಿ ನೀಡುತ್ತದೆ. ತೇಜಸ್ವಿ ಈ ಅನುಮತಿ ಪಡೆದಿದ್ದರೆ? ಇದಕ್ಕೆ ಅವರು ಅರ್ಹರೆ? ಎಂಬ ಪ್ರಶ್ನೆಗಳು ಎದ್ದಿವೆ.


ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...