Homeಕರ್ನಾಟಕಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

- Advertisement -
- Advertisement -

“ಮಹಾತ್ಮ ಗಾಂಧೀಜಿಯವರು ಭಾರತದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಇಂದು, ಗುಜರಾತ್‌ನ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಂದಿಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಾಗಿತ್ತು. ಗಾಂಧೀಜಿಯವರ ಜೀವನದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಅವಕಾಶ ಸಿಕ್ಕಿತು” ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮಾಡಿರುವ ಪೋಸ್ಟ್‌ ಚರ್ಚೆಗೆ ಗ್ರಾಸವಾಗಿದೆ.

ಚರಕದ ಮುಂದೆ ಕೂತು ನೂಲು ಸುತ್ತುತ್ತಿರುವಂತೆ ತೇಜಸ್ವಿ ಸೂರ್ಯ ಅವರು ಫೋಟೋ ತೆಗೆಸಿಕೊಂಡಿದ್ದು, ಗಾಂಧೀಜಿಯವರನ್ನು ಬಣ್ಣಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನು “ಮಿತಿಮೀರಿದ ಬೂಟಾಟಿಕೆ (ಹಿಪೊಕ್ರಸಿ)” ಎಂದು ಜನರು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಂದು ಕಡೆ ಬಿಜೆಪಿ ನಾಯಕರು ಹಿಂದುತ್ವವನ್ನು ಹೇಳುತ್ತಾ, ಗಾಂಧಿ ಹಂತಕ ಗೋಡ್ಸೆ ಪರ ನಿಲುವು ವ್ಯಕ್ತಪಡಿಸುತ್ತಾರೆ. ಮತ್ತೊಂದೆಡೆ ಗಾಂಧೀಜಿಯನ್ನು ಶ್ಲಾಘಿಸುತ್ತಾರೆ. ಎರಡೂ ರೀತಿಯ ನಿಲುವುಗಳನ್ನು ಬಿಜೆಪಿ ತಾಳುವುದು ಏತಕ್ಕೆ ಎಂಬ ಚರ್ಚೆಗಳು ಮೊದಲಿನಿಂದಲೂ ನಡೆಯುತ್ತಿವೆ.

ಇದನ್ನೂ ಓದಿರಿ: ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಗಾಂಧೀಜಿಯರನ್ನು ಬಿಜೆಪಿಯ ಬೆಂಬಲಿಗರು ಬಹಳ ಕೆಟ್ಟದ್ದಾಗಿ ನಿಂದಿಸುವುದು, ಗೋಡ್ಸೆಯನ್ನು ಹೊಗಳುವುದು ಎಗ್ಗಿಲ್ಲದೆ ನಡೆಯುತ್ತಿದೆ. ಇದರ ವಿರುದ್ಧ ಬಿಜೆಪಿಯ ಹಲವು ನಾಯಕರು ಮಾತನಾಡುವುದಿಲ್ಲ ಎಂಬುದು ತೇಜಸ್ವಿ ಸೂರ್ಯ ಅವರ ಪೋಸ್ಟ್‌ಗೆ ಬಂದಿರುವ ಕಮೆಂಟ್‌ಗಳಲ್ಲಿ ವ್ಯಕ್ತವಾಗುತ್ತದೆ.

ಗಾಂಧೀಜಿಯವರು ಅಹಿಂಸಾ ಮಾರ್ಗದ ಬಹುದೊಡ್ಡ ಸಂಕೇತ. ಸರ್ವಧರ್ಮ ಸಹಿಷ್ಠುತೆಯ ಪ್ರತೀಕ. ಒಂದು ಕೋಮಿನ ವಿರುದ್ಧ ನಿರಂತರ ದ್ವೇಷ ಹರಡುತ್ತಿರುವ ಮತೀಯ ಶಕ್ತಿಗಳು ಹೆಚ್ಚಾಗುತ್ತಿದ್ದು ಸರ್ಕಾರ ಮೌನವಾಗಿದೆ. ಬಿಜೆಪಿ ನಾಯಕರು ಮೌನ ಸಮ್ಮತಿ ನೀಡುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ತೇಜಸ್ವಿ ಸೂರ್ಯ ಅವರು ಈ ಹಿಂದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ಸಾಕಷ್ಟು ನೀಡಿದ್ದು ಚರ್ಚೆಯಾಗಿದೆ. ಆದರೆ ಹಿಂದೂ ಮುಸ್ಲಿಂ ಏಕತೆಯನ್ನು ಸಾರಿದ ಗಾಂಧೀಜಿಯವರನ್ನು ತೇಜಸ್ವಿ ಸೂರ್ಯ ಬಣ್ಣಿಸಿರುವುದು ಟೀಕೆಗೆ ಒಳಗಾಗಿದೆ.

ತೇಜಸ್ವಿ ಸೂರ್ಯರ ಪೋಸ್ಟ್‌ಗೆ ಬಂದ ಕೆಲವು ಕಮೆಂಟ್‌ಗಳು

“ಕೇಜ್ರಿವಾಲ್ ಅವರ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳು ವಾಸಿಸುವ ಮನೆಯ ಮೇಲೆ ದಾಳಿ ಮಾಡಿದ ಹಿಂಸಾಚಾರದ ಗುಂಪಿನ ನಾಯಕ ನೀವು. ನಾಚಿಕೆ ಆಗುತ್ತಿದೆ ತೇಜಸ್ವಿ ಎಂದು ರಾಜೀವ್ ಕುಮಾರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

‘ಖಾತಾಬುಕ್‌’ ಸಂಸ್ಥಾಪಕ ರವೀಶ್‌ನರೇಶ್‌ ಇತ್ತೀಚೆಗೆ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಮೂಲಸೌಕರ್ಯಗಳ ಕೊರತೆ ಬಗ್ಗೆ ಹಂಚಿಕೊಂಡಿದ್ದರು. ಅದನ್ನು ಉಲ್ಲೇಖಿಸಿ ಕಮೆಂಟ್ ಮಾಡಿರುವ ವಿವೇಕಾನಂದ ರೆಡ್ಡಿ, “ನಕಲಿ ಭಾಷಣ ಮತ್ತು ಪ್ರಚಾರಕ್ಕಾಗಿ ಭಾರತದಾದ್ಯಂತ ಅಲೆದಾಡಬೇಡಿ. ನಮ್ಮ ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು ಬಹಳಷ್ಟಿವೆ. ಬೆಂಗಳೂರು ದಕ್ಷಿಣದಲ್ಲಿ ಪ್ರಮುಖ ಐಟಿ ಕಂಪನಿಗಳು ಮತ್ತು ಟೆಕ್ ಪಾರ್ಕ್‌ಗಳು ಬರುತ್ತವೆ. ಮೊದಲು ನಿಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿ. ಸಮಸ್ಯೆಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ. ಮೂಲಸೌಕರ್ಯಗಳನ್ನು ಸುಧಾರಿಸಲು, ಸ್ಟಾರ್ಟ್‌ಅಪ್‌ಗಳು ಮತ್ತು ಕಂಪನಿಗಳನ್ನು ಬೆಂಗಳೂರಿಗೆ ತರಲು ಸೌಕರ್ಯ ಒದಗಿಸಿ…” ಎಂದು ಕೋರಿದ್ದಾರೆ.

“ಅತ್ಯಂತ ಕೆಟ್ಟ ರಾಜಕಾರಣಿ. ಭಾರತದ ಇತಿಹಾಸದಲ್ಲೇ ಕೆಟ್ಟ ರಾಜಕಾರಣಿ. ಮಹಾತ್ಮರ ಸ್ಥಾನದಲ್ಲಿ ಕುಳಿತುಕೊಳ್ಳಬೇಡಿ. ನೀವು ಅದಕ್ಕೆ ಅರ್ಹರಲ್ಲ” ಎಂದು ಕಿರಣ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

“ಗೋಡ್ಸೆ ಕೋಪಗೊಳ್ಳುತ್ತಾನೆ ಗಾಂಧಿಯನ್ನು ಹೆಚ್ಚು ಹೊಗಳಬೇಡಿ” ಎಂದು ತನ್‌ಹಕ್‌ ಎಂಬವರು ತಿಳಿಸಿದ್ದಾರೆ.

“ಗೋಡ್ಸೆ ಮುರ್ದಾಬಾದ್ ಎಂದು ಒಮ್ಮೆಯಾದರೂ ಹೇಳಿ” ರಾಜು ಟಾಕೂರ್‌ ಒತ್ತಾಯಿಸಿದ್ದಾರೆ.

“ಗಾಂಧಿ ತತ್ವ ಸಿದ್ಧಾಂತವನ್ನು ವಿರೋಧ ಮಾಡಿ ಅವರ ಸಾವನ್ನು ಸಂಭ್ರಮಿಸುವ ಯಾವ ವ್ಯಕ್ತಿಯಾದರೂ ಅಲ್ಲಿಗೆ ಹೋಗಬಾರದು” ಎಂದು ಡಿ.ಎಸ್.ಗೌರೀಶ್‌ ತಿಳಿಸಿದ್ದಾರೆ.

“ತಮ್ಮ ಹೇಳಿಕೆಗಳ ಬಗ್ಗೆ ಪ್ರಾಯಶ್ಚಿತ ಮಾಡಿಕೊಳ್ಳಲು ತೇಜಸ್ವಿ ಸೂರ್ಯ ಅವರು ಸಬರಮತಿ ಆಶ್ರಮಕ್ಕೆ ಹೋಗಿದ್ದಾರೆ ಅನ್ನಿಸುತ್ತದೆ. ಲೋಕಸಭೆ ಸದಸ್ಯರಾಗಿ ಮನಪರಿವರ್ತನೆ ಮಾಡಿಕೊಳ್ಳುವುದು ಒಳ್ಳೆಯ ಬೆಳವಣಿಗೆ” ಎಂದು ಡಿ.ಎಸ್.ದೊರೆಸ್ವಾಮಿ ಅಭಿಪ್ರಾಯಪಟ್ಟಿದ್ದರೆ.

“ಭಾರತದ ಪ್ರಪ್ರಥಮ ಭಯೋತ್ಪಾದಕ ಗೋಡ್ಸೆಯನ್ನು ಏನೆನ್ನುವಿರಿ” ಎಂದು ಮಾರುತಿ ಸೂರಕುಂಟೆ ಪ್ರಶ್ನಿಸಿದ್ದಾರೆ.

“ಹೈ ಲೆವೆಲ್‌ ಆಫ್ ಹಿಪೊಕ್ರಸಿ” ಎಂದು ಅನಿಲ್‌ಕುಮಾರ್‌ ಚಿಕ್ಕದಾಳವಟ್ಟ ಟೀಕಿಸಿದ್ದಾರೆ.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬೆಂಬಲಿಸುವ ಹಲವಾರು ಪ್ರೊಪೈಲ್‌ಗಳು ತೇಜಸ್ವಿ ಸೂರ್ಯರನ್ನು ಹಾಗೂ ಗಾಂಧೀಜಿಯನ್ನು ನಿಂದಿಸಿ ಕಮೆಂಟ್ ಮಾಡಿವೆ. ಪೋಸ್ಟ್‌ಅನ್ನು ವಿರೋಧಿಸುವ ನೆಪದಲ್ಲಿ ರಾಷ್ಟ್ರಪಿತ ಗಾಂಧೀಜಿಯವರನ್ನು ಹೀಯಾಳಿಸಿರುವುದನ್ನು, ಅಸಂವಿಧಾನಿಕ ಪದಗಳನ್ನು ಬಳಸಿರುವುದನ್ನು ಇಲ್ಲಿನ ಕಮೆಂಟ್‌ಗಳಲ್ಲಿ ಕಾಣಬಹುದು.

ಬಿಜೆಪಿ ಫಾಲೋಯರ್ಸ್‌‌ಗಳ ಕಮೆಂಟ್‌ಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಚಿದಾನಂದ ಎಂ.ಪಡುವರಹಳ್ಳಿ, “ನೀವು ನೋಡುದ್ರೆ ಗಾಂಧೀಜಿ ಆಶ್ರಮಕ್ಕೆ ಭೇಟಿ ಕೊಟ್ಟಿದ್ದೀರಿ. ಜೊತೆಗೆ ಗುಜರಾತ್‌ನಲ್ಲಿ ಗಾಂಧೀಜಿಯ ಜೀವನದ ಪಾಠವನ್ನು ಕಲಿಯೋಕೆ ಹೋಗಿದ್ದೀರಿ. ಗಾಂಧೀಜಿ ಆಶ್ರಮಕ್ಕೆ ಹೋಗಿರುವ ಉದ್ದೇಶ, ಗಾಂಧೀಜಿ ಅವರ ಮೇಲಿನ ಪ್ರೀತಿಯೋ ಅಥವಾ ದ್ವೇಷವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಏಕೆಂದರೆ ನಿಮ್ಮ ಈ ಪೋಸ್ಟ್‌ನಲ್ಲಿ ಹಾಕಿರುವ ಕಾಮೆಂಟ್ ಗಳನ್ನು ಒಮ್ಮೆ ನೋಡಿ. ಗಾಂಧೀಜಿ ಅವರ ಬಗ್ಗೆ ಎಷ್ಟು ಅಸಹ್ಯ ಪದಬಳಕೆ ಮಾಡಿದ್ದಾರೆ! ಹಾಗಾಗಿ ನನಗೆ ಅನುಮಾನ ಇದೆ ಬಗೆಹರಿಸಿ. ಇನ್ನೊಂದು ಮುಖ್ಯವಾದ ವಿಷಯವೆಂದರೆ ಗಾಂಧೀಜಿ ಅವರ ಬಗ್ಗೆ ಹಗುರವಾಗಿ ಕಮೆಂಟ್ ಮಾಡ್ತಿರೋರಲ್ಲಿ ನೂರಕ್ಕೆ ತೊಂಬತ್ತು ಭಾಗ ನಿಮ್ಮವರೆ ಅನ್ನೋದು ಅಷ್ಟೆ ಸತ್ಯ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಸೀದಿಯಿಂದ ಬಲವಂತವಾಗಿ ಧ್ವನಿವರ್ಧಕ ತೆಗೆಯುವುದಿಲ್ಲ: ಸಿಎಂ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತೇಜಸ್ವಿಯವರೆ. ನಿಮ್ಮ ಯೋಚನಾಲಹರಿಗಳೇ ಬೇರೆ. ಮಹಾತ್ಮಾ ಗಾಂಧೀಜಿಯವರ ತೃಣಕ್ಕೂ ನೀವು ಸಮಾನರಲ್ಲಾ. ಅದು ಹೇಗೆ ನಿಮ್ಮನ್ನ ಅಲ್ಲಿ ಕೂಡಲು ಬಿಟ್ಟರು..?

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....