Homeಕರ್ನಾಟಕಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

- Advertisement -
- Advertisement -

“ಮಹಾತ್ಮ ಗಾಂಧೀಜಿಯವರು ಭಾರತದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಇಂದು, ಗುಜರಾತ್‌ನ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಂದಿಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಾಗಿತ್ತು. ಗಾಂಧೀಜಿಯವರ ಜೀವನದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಅವಕಾಶ ಸಿಕ್ಕಿತು” ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮಾಡಿರುವ ಪೋಸ್ಟ್‌ ಚರ್ಚೆಗೆ ಗ್ರಾಸವಾಗಿದೆ.

ಚರಕದ ಮುಂದೆ ಕೂತು ನೂಲು ಸುತ್ತುತ್ತಿರುವಂತೆ ತೇಜಸ್ವಿ ಸೂರ್ಯ ಅವರು ಫೋಟೋ ತೆಗೆಸಿಕೊಂಡಿದ್ದು, ಗಾಂಧೀಜಿಯವರನ್ನು ಬಣ್ಣಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನು “ಮಿತಿಮೀರಿದ ಬೂಟಾಟಿಕೆ (ಹಿಪೊಕ್ರಸಿ)” ಎಂದು ಜನರು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಂದು ಕಡೆ ಬಿಜೆಪಿ ನಾಯಕರು ಹಿಂದುತ್ವವನ್ನು ಹೇಳುತ್ತಾ, ಗಾಂಧಿ ಹಂತಕ ಗೋಡ್ಸೆ ಪರ ನಿಲುವು ವ್ಯಕ್ತಪಡಿಸುತ್ತಾರೆ. ಮತ್ತೊಂದೆಡೆ ಗಾಂಧೀಜಿಯನ್ನು ಶ್ಲಾಘಿಸುತ್ತಾರೆ. ಎರಡೂ ರೀತಿಯ ನಿಲುವುಗಳನ್ನು ಬಿಜೆಪಿ ತಾಳುವುದು ಏತಕ್ಕೆ ಎಂಬ ಚರ್ಚೆಗಳು ಮೊದಲಿನಿಂದಲೂ ನಡೆಯುತ್ತಿವೆ.

ಇದನ್ನೂ ಓದಿರಿ: ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಗಾಂಧೀಜಿಯರನ್ನು ಬಿಜೆಪಿಯ ಬೆಂಬಲಿಗರು ಬಹಳ ಕೆಟ್ಟದ್ದಾಗಿ ನಿಂದಿಸುವುದು, ಗೋಡ್ಸೆಯನ್ನು ಹೊಗಳುವುದು ಎಗ್ಗಿಲ್ಲದೆ ನಡೆಯುತ್ತಿದೆ. ಇದರ ವಿರುದ್ಧ ಬಿಜೆಪಿಯ ಹಲವು ನಾಯಕರು ಮಾತನಾಡುವುದಿಲ್ಲ ಎಂಬುದು ತೇಜಸ್ವಿ ಸೂರ್ಯ ಅವರ ಪೋಸ್ಟ್‌ಗೆ ಬಂದಿರುವ ಕಮೆಂಟ್‌ಗಳಲ್ಲಿ ವ್ಯಕ್ತವಾಗುತ್ತದೆ.

ಗಾಂಧೀಜಿಯವರು ಅಹಿಂಸಾ ಮಾರ್ಗದ ಬಹುದೊಡ್ಡ ಸಂಕೇತ. ಸರ್ವಧರ್ಮ ಸಹಿಷ್ಠುತೆಯ ಪ್ರತೀಕ. ಒಂದು ಕೋಮಿನ ವಿರುದ್ಧ ನಿರಂತರ ದ್ವೇಷ ಹರಡುತ್ತಿರುವ ಮತೀಯ ಶಕ್ತಿಗಳು ಹೆಚ್ಚಾಗುತ್ತಿದ್ದು ಸರ್ಕಾರ ಮೌನವಾಗಿದೆ. ಬಿಜೆಪಿ ನಾಯಕರು ಮೌನ ಸಮ್ಮತಿ ನೀಡುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ತೇಜಸ್ವಿ ಸೂರ್ಯ ಅವರು ಈ ಹಿಂದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ಸಾಕಷ್ಟು ನೀಡಿದ್ದು ಚರ್ಚೆಯಾಗಿದೆ. ಆದರೆ ಹಿಂದೂ ಮುಸ್ಲಿಂ ಏಕತೆಯನ್ನು ಸಾರಿದ ಗಾಂಧೀಜಿಯವರನ್ನು ತೇಜಸ್ವಿ ಸೂರ್ಯ ಬಣ್ಣಿಸಿರುವುದು ಟೀಕೆಗೆ ಒಳಗಾಗಿದೆ.

ತೇಜಸ್ವಿ ಸೂರ್ಯರ ಪೋಸ್ಟ್‌ಗೆ ಬಂದ ಕೆಲವು ಕಮೆಂಟ್‌ಗಳು

“ಕೇಜ್ರಿವಾಲ್ ಅವರ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳು ವಾಸಿಸುವ ಮನೆಯ ಮೇಲೆ ದಾಳಿ ಮಾಡಿದ ಹಿಂಸಾಚಾರದ ಗುಂಪಿನ ನಾಯಕ ನೀವು. ನಾಚಿಕೆ ಆಗುತ್ತಿದೆ ತೇಜಸ್ವಿ ಎಂದು ರಾಜೀವ್ ಕುಮಾರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

‘ಖಾತಾಬುಕ್‌’ ಸಂಸ್ಥಾಪಕ ರವೀಶ್‌ನರೇಶ್‌ ಇತ್ತೀಚೆಗೆ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಮೂಲಸೌಕರ್ಯಗಳ ಕೊರತೆ ಬಗ್ಗೆ ಹಂಚಿಕೊಂಡಿದ್ದರು. ಅದನ್ನು ಉಲ್ಲೇಖಿಸಿ ಕಮೆಂಟ್ ಮಾಡಿರುವ ವಿವೇಕಾನಂದ ರೆಡ್ಡಿ, “ನಕಲಿ ಭಾಷಣ ಮತ್ತು ಪ್ರಚಾರಕ್ಕಾಗಿ ಭಾರತದಾದ್ಯಂತ ಅಲೆದಾಡಬೇಡಿ. ನಮ್ಮ ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು ಬಹಳಷ್ಟಿವೆ. ಬೆಂಗಳೂರು ದಕ್ಷಿಣದಲ್ಲಿ ಪ್ರಮುಖ ಐಟಿ ಕಂಪನಿಗಳು ಮತ್ತು ಟೆಕ್ ಪಾರ್ಕ್‌ಗಳು ಬರುತ್ತವೆ. ಮೊದಲು ನಿಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿ. ಸಮಸ್ಯೆಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ. ಮೂಲಸೌಕರ್ಯಗಳನ್ನು ಸುಧಾರಿಸಲು, ಸ್ಟಾರ್ಟ್‌ಅಪ್‌ಗಳು ಮತ್ತು ಕಂಪನಿಗಳನ್ನು ಬೆಂಗಳೂರಿಗೆ ತರಲು ಸೌಕರ್ಯ ಒದಗಿಸಿ…” ಎಂದು ಕೋರಿದ್ದಾರೆ.

“ಅತ್ಯಂತ ಕೆಟ್ಟ ರಾಜಕಾರಣಿ. ಭಾರತದ ಇತಿಹಾಸದಲ್ಲೇ ಕೆಟ್ಟ ರಾಜಕಾರಣಿ. ಮಹಾತ್ಮರ ಸ್ಥಾನದಲ್ಲಿ ಕುಳಿತುಕೊಳ್ಳಬೇಡಿ. ನೀವು ಅದಕ್ಕೆ ಅರ್ಹರಲ್ಲ” ಎಂದು ಕಿರಣ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

“ಗೋಡ್ಸೆ ಕೋಪಗೊಳ್ಳುತ್ತಾನೆ ಗಾಂಧಿಯನ್ನು ಹೆಚ್ಚು ಹೊಗಳಬೇಡಿ” ಎಂದು ತನ್‌ಹಕ್‌ ಎಂಬವರು ತಿಳಿಸಿದ್ದಾರೆ.

“ಗೋಡ್ಸೆ ಮುರ್ದಾಬಾದ್ ಎಂದು ಒಮ್ಮೆಯಾದರೂ ಹೇಳಿ” ರಾಜು ಟಾಕೂರ್‌ ಒತ್ತಾಯಿಸಿದ್ದಾರೆ.

“ಗಾಂಧಿ ತತ್ವ ಸಿದ್ಧಾಂತವನ್ನು ವಿರೋಧ ಮಾಡಿ ಅವರ ಸಾವನ್ನು ಸಂಭ್ರಮಿಸುವ ಯಾವ ವ್ಯಕ್ತಿಯಾದರೂ ಅಲ್ಲಿಗೆ ಹೋಗಬಾರದು” ಎಂದು ಡಿ.ಎಸ್.ಗೌರೀಶ್‌ ತಿಳಿಸಿದ್ದಾರೆ.

“ತಮ್ಮ ಹೇಳಿಕೆಗಳ ಬಗ್ಗೆ ಪ್ರಾಯಶ್ಚಿತ ಮಾಡಿಕೊಳ್ಳಲು ತೇಜಸ್ವಿ ಸೂರ್ಯ ಅವರು ಸಬರಮತಿ ಆಶ್ರಮಕ್ಕೆ ಹೋಗಿದ್ದಾರೆ ಅನ್ನಿಸುತ್ತದೆ. ಲೋಕಸಭೆ ಸದಸ್ಯರಾಗಿ ಮನಪರಿವರ್ತನೆ ಮಾಡಿಕೊಳ್ಳುವುದು ಒಳ್ಳೆಯ ಬೆಳವಣಿಗೆ” ಎಂದು ಡಿ.ಎಸ್.ದೊರೆಸ್ವಾಮಿ ಅಭಿಪ್ರಾಯಪಟ್ಟಿದ್ದರೆ.

“ಭಾರತದ ಪ್ರಪ್ರಥಮ ಭಯೋತ್ಪಾದಕ ಗೋಡ್ಸೆಯನ್ನು ಏನೆನ್ನುವಿರಿ” ಎಂದು ಮಾರುತಿ ಸೂರಕುಂಟೆ ಪ್ರಶ್ನಿಸಿದ್ದಾರೆ.

“ಹೈ ಲೆವೆಲ್‌ ಆಫ್ ಹಿಪೊಕ್ರಸಿ” ಎಂದು ಅನಿಲ್‌ಕುಮಾರ್‌ ಚಿಕ್ಕದಾಳವಟ್ಟ ಟೀಕಿಸಿದ್ದಾರೆ.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬೆಂಬಲಿಸುವ ಹಲವಾರು ಪ್ರೊಪೈಲ್‌ಗಳು ತೇಜಸ್ವಿ ಸೂರ್ಯರನ್ನು ಹಾಗೂ ಗಾಂಧೀಜಿಯನ್ನು ನಿಂದಿಸಿ ಕಮೆಂಟ್ ಮಾಡಿವೆ. ಪೋಸ್ಟ್‌ಅನ್ನು ವಿರೋಧಿಸುವ ನೆಪದಲ್ಲಿ ರಾಷ್ಟ್ರಪಿತ ಗಾಂಧೀಜಿಯವರನ್ನು ಹೀಯಾಳಿಸಿರುವುದನ್ನು, ಅಸಂವಿಧಾನಿಕ ಪದಗಳನ್ನು ಬಳಸಿರುವುದನ್ನು ಇಲ್ಲಿನ ಕಮೆಂಟ್‌ಗಳಲ್ಲಿ ಕಾಣಬಹುದು.

ಬಿಜೆಪಿ ಫಾಲೋಯರ್ಸ್‌‌ಗಳ ಕಮೆಂಟ್‌ಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಚಿದಾನಂದ ಎಂ.ಪಡುವರಹಳ್ಳಿ, “ನೀವು ನೋಡುದ್ರೆ ಗಾಂಧೀಜಿ ಆಶ್ರಮಕ್ಕೆ ಭೇಟಿ ಕೊಟ್ಟಿದ್ದೀರಿ. ಜೊತೆಗೆ ಗುಜರಾತ್‌ನಲ್ಲಿ ಗಾಂಧೀಜಿಯ ಜೀವನದ ಪಾಠವನ್ನು ಕಲಿಯೋಕೆ ಹೋಗಿದ್ದೀರಿ. ಗಾಂಧೀಜಿ ಆಶ್ರಮಕ್ಕೆ ಹೋಗಿರುವ ಉದ್ದೇಶ, ಗಾಂಧೀಜಿ ಅವರ ಮೇಲಿನ ಪ್ರೀತಿಯೋ ಅಥವಾ ದ್ವೇಷವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಏಕೆಂದರೆ ನಿಮ್ಮ ಈ ಪೋಸ್ಟ್‌ನಲ್ಲಿ ಹಾಕಿರುವ ಕಾಮೆಂಟ್ ಗಳನ್ನು ಒಮ್ಮೆ ನೋಡಿ. ಗಾಂಧೀಜಿ ಅವರ ಬಗ್ಗೆ ಎಷ್ಟು ಅಸಹ್ಯ ಪದಬಳಕೆ ಮಾಡಿದ್ದಾರೆ! ಹಾಗಾಗಿ ನನಗೆ ಅನುಮಾನ ಇದೆ ಬಗೆಹರಿಸಿ. ಇನ್ನೊಂದು ಮುಖ್ಯವಾದ ವಿಷಯವೆಂದರೆ ಗಾಂಧೀಜಿ ಅವರ ಬಗ್ಗೆ ಹಗುರವಾಗಿ ಕಮೆಂಟ್ ಮಾಡ್ತಿರೋರಲ್ಲಿ ನೂರಕ್ಕೆ ತೊಂಬತ್ತು ಭಾಗ ನಿಮ್ಮವರೆ ಅನ್ನೋದು ಅಷ್ಟೆ ಸತ್ಯ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಸೀದಿಯಿಂದ ಬಲವಂತವಾಗಿ ಧ್ವನಿವರ್ಧಕ ತೆಗೆಯುವುದಿಲ್ಲ: ಸಿಎಂ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತೇಜಸ್ವಿಯವರೆ. ನಿಮ್ಮ ಯೋಚನಾಲಹರಿಗಳೇ ಬೇರೆ. ಮಹಾತ್ಮಾ ಗಾಂಧೀಜಿಯವರ ತೃಣಕ್ಕೂ ನೀವು ಸಮಾನರಲ್ಲಾ. ಅದು ಹೇಗೆ ನಿಮ್ಮನ್ನ ಅಲ್ಲಿ ಕೂಡಲು ಬಿಟ್ಟರು..?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...