Homeಕರ್ನಾಟಕಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

- Advertisement -
- Advertisement -

“ಮಹಾತ್ಮ ಗಾಂಧೀಜಿಯವರು ಭಾರತದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಇಂದು, ಗುಜರಾತ್‌ನ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಂದಿಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಾಗಿತ್ತು. ಗಾಂಧೀಜಿಯವರ ಜೀವನದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಅವಕಾಶ ಸಿಕ್ಕಿತು” ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮಾಡಿರುವ ಪೋಸ್ಟ್‌ ಚರ್ಚೆಗೆ ಗ್ರಾಸವಾಗಿದೆ.

ಚರಕದ ಮುಂದೆ ಕೂತು ನೂಲು ಸುತ್ತುತ್ತಿರುವಂತೆ ತೇಜಸ್ವಿ ಸೂರ್ಯ ಅವರು ಫೋಟೋ ತೆಗೆಸಿಕೊಂಡಿದ್ದು, ಗಾಂಧೀಜಿಯವರನ್ನು ಬಣ್ಣಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನು “ಮಿತಿಮೀರಿದ ಬೂಟಾಟಿಕೆ (ಹಿಪೊಕ್ರಸಿ)” ಎಂದು ಜನರು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಂದು ಕಡೆ ಬಿಜೆಪಿ ನಾಯಕರು ಹಿಂದುತ್ವವನ್ನು ಹೇಳುತ್ತಾ, ಗಾಂಧಿ ಹಂತಕ ಗೋಡ್ಸೆ ಪರ ನಿಲುವು ವ್ಯಕ್ತಪಡಿಸುತ್ತಾರೆ. ಮತ್ತೊಂದೆಡೆ ಗಾಂಧೀಜಿಯನ್ನು ಶ್ಲಾಘಿಸುತ್ತಾರೆ. ಎರಡೂ ರೀತಿಯ ನಿಲುವುಗಳನ್ನು ಬಿಜೆಪಿ ತಾಳುವುದು ಏತಕ್ಕೆ ಎಂಬ ಚರ್ಚೆಗಳು ಮೊದಲಿನಿಂದಲೂ ನಡೆಯುತ್ತಿವೆ.

ಇದನ್ನೂ ಓದಿರಿ: ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಗಾಂಧೀಜಿಯರನ್ನು ಬಿಜೆಪಿಯ ಬೆಂಬಲಿಗರು ಬಹಳ ಕೆಟ್ಟದ್ದಾಗಿ ನಿಂದಿಸುವುದು, ಗೋಡ್ಸೆಯನ್ನು ಹೊಗಳುವುದು ಎಗ್ಗಿಲ್ಲದೆ ನಡೆಯುತ್ತಿದೆ. ಇದರ ವಿರುದ್ಧ ಬಿಜೆಪಿಯ ಹಲವು ನಾಯಕರು ಮಾತನಾಡುವುದಿಲ್ಲ ಎಂಬುದು ತೇಜಸ್ವಿ ಸೂರ್ಯ ಅವರ ಪೋಸ್ಟ್‌ಗೆ ಬಂದಿರುವ ಕಮೆಂಟ್‌ಗಳಲ್ಲಿ ವ್ಯಕ್ತವಾಗುತ್ತದೆ.

ಗಾಂಧೀಜಿಯವರು ಅಹಿಂಸಾ ಮಾರ್ಗದ ಬಹುದೊಡ್ಡ ಸಂಕೇತ. ಸರ್ವಧರ್ಮ ಸಹಿಷ್ಠುತೆಯ ಪ್ರತೀಕ. ಒಂದು ಕೋಮಿನ ವಿರುದ್ಧ ನಿರಂತರ ದ್ವೇಷ ಹರಡುತ್ತಿರುವ ಮತೀಯ ಶಕ್ತಿಗಳು ಹೆಚ್ಚಾಗುತ್ತಿದ್ದು ಸರ್ಕಾರ ಮೌನವಾಗಿದೆ. ಬಿಜೆಪಿ ನಾಯಕರು ಮೌನ ಸಮ್ಮತಿ ನೀಡುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ತೇಜಸ್ವಿ ಸೂರ್ಯ ಅವರು ಈ ಹಿಂದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ಸಾಕಷ್ಟು ನೀಡಿದ್ದು ಚರ್ಚೆಯಾಗಿದೆ. ಆದರೆ ಹಿಂದೂ ಮುಸ್ಲಿಂ ಏಕತೆಯನ್ನು ಸಾರಿದ ಗಾಂಧೀಜಿಯವರನ್ನು ತೇಜಸ್ವಿ ಸೂರ್ಯ ಬಣ್ಣಿಸಿರುವುದು ಟೀಕೆಗೆ ಒಳಗಾಗಿದೆ.

ತೇಜಸ್ವಿ ಸೂರ್ಯರ ಪೋಸ್ಟ್‌ಗೆ ಬಂದ ಕೆಲವು ಕಮೆಂಟ್‌ಗಳು

“ಕೇಜ್ರಿವಾಲ್ ಅವರ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳು ವಾಸಿಸುವ ಮನೆಯ ಮೇಲೆ ದಾಳಿ ಮಾಡಿದ ಹಿಂಸಾಚಾರದ ಗುಂಪಿನ ನಾಯಕ ನೀವು. ನಾಚಿಕೆ ಆಗುತ್ತಿದೆ ತೇಜಸ್ವಿ ಎಂದು ರಾಜೀವ್ ಕುಮಾರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

‘ಖಾತಾಬುಕ್‌’ ಸಂಸ್ಥಾಪಕ ರವೀಶ್‌ನರೇಶ್‌ ಇತ್ತೀಚೆಗೆ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಮೂಲಸೌಕರ್ಯಗಳ ಕೊರತೆ ಬಗ್ಗೆ ಹಂಚಿಕೊಂಡಿದ್ದರು. ಅದನ್ನು ಉಲ್ಲೇಖಿಸಿ ಕಮೆಂಟ್ ಮಾಡಿರುವ ವಿವೇಕಾನಂದ ರೆಡ್ಡಿ, “ನಕಲಿ ಭಾಷಣ ಮತ್ತು ಪ್ರಚಾರಕ್ಕಾಗಿ ಭಾರತದಾದ್ಯಂತ ಅಲೆದಾಡಬೇಡಿ. ನಮ್ಮ ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು ಬಹಳಷ್ಟಿವೆ. ಬೆಂಗಳೂರು ದಕ್ಷಿಣದಲ್ಲಿ ಪ್ರಮುಖ ಐಟಿ ಕಂಪನಿಗಳು ಮತ್ತು ಟೆಕ್ ಪಾರ್ಕ್‌ಗಳು ಬರುತ್ತವೆ. ಮೊದಲು ನಿಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿ. ಸಮಸ್ಯೆಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ. ಮೂಲಸೌಕರ್ಯಗಳನ್ನು ಸುಧಾರಿಸಲು, ಸ್ಟಾರ್ಟ್‌ಅಪ್‌ಗಳು ಮತ್ತು ಕಂಪನಿಗಳನ್ನು ಬೆಂಗಳೂರಿಗೆ ತರಲು ಸೌಕರ್ಯ ಒದಗಿಸಿ…” ಎಂದು ಕೋರಿದ್ದಾರೆ.

“ಅತ್ಯಂತ ಕೆಟ್ಟ ರಾಜಕಾರಣಿ. ಭಾರತದ ಇತಿಹಾಸದಲ್ಲೇ ಕೆಟ್ಟ ರಾಜಕಾರಣಿ. ಮಹಾತ್ಮರ ಸ್ಥಾನದಲ್ಲಿ ಕುಳಿತುಕೊಳ್ಳಬೇಡಿ. ನೀವು ಅದಕ್ಕೆ ಅರ್ಹರಲ್ಲ” ಎಂದು ಕಿರಣ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

“ಗೋಡ್ಸೆ ಕೋಪಗೊಳ್ಳುತ್ತಾನೆ ಗಾಂಧಿಯನ್ನು ಹೆಚ್ಚು ಹೊಗಳಬೇಡಿ” ಎಂದು ತನ್‌ಹಕ್‌ ಎಂಬವರು ತಿಳಿಸಿದ್ದಾರೆ.

“ಗೋಡ್ಸೆ ಮುರ್ದಾಬಾದ್ ಎಂದು ಒಮ್ಮೆಯಾದರೂ ಹೇಳಿ” ರಾಜು ಟಾಕೂರ್‌ ಒತ್ತಾಯಿಸಿದ್ದಾರೆ.

“ಗಾಂಧಿ ತತ್ವ ಸಿದ್ಧಾಂತವನ್ನು ವಿರೋಧ ಮಾಡಿ ಅವರ ಸಾವನ್ನು ಸಂಭ್ರಮಿಸುವ ಯಾವ ವ್ಯಕ್ತಿಯಾದರೂ ಅಲ್ಲಿಗೆ ಹೋಗಬಾರದು” ಎಂದು ಡಿ.ಎಸ್.ಗೌರೀಶ್‌ ತಿಳಿಸಿದ್ದಾರೆ.

“ತಮ್ಮ ಹೇಳಿಕೆಗಳ ಬಗ್ಗೆ ಪ್ರಾಯಶ್ಚಿತ ಮಾಡಿಕೊಳ್ಳಲು ತೇಜಸ್ವಿ ಸೂರ್ಯ ಅವರು ಸಬರಮತಿ ಆಶ್ರಮಕ್ಕೆ ಹೋಗಿದ್ದಾರೆ ಅನ್ನಿಸುತ್ತದೆ. ಲೋಕಸಭೆ ಸದಸ್ಯರಾಗಿ ಮನಪರಿವರ್ತನೆ ಮಾಡಿಕೊಳ್ಳುವುದು ಒಳ್ಳೆಯ ಬೆಳವಣಿಗೆ” ಎಂದು ಡಿ.ಎಸ್.ದೊರೆಸ್ವಾಮಿ ಅಭಿಪ್ರಾಯಪಟ್ಟಿದ್ದರೆ.

“ಭಾರತದ ಪ್ರಪ್ರಥಮ ಭಯೋತ್ಪಾದಕ ಗೋಡ್ಸೆಯನ್ನು ಏನೆನ್ನುವಿರಿ” ಎಂದು ಮಾರುತಿ ಸೂರಕುಂಟೆ ಪ್ರಶ್ನಿಸಿದ್ದಾರೆ.

“ಹೈ ಲೆವೆಲ್‌ ಆಫ್ ಹಿಪೊಕ್ರಸಿ” ಎಂದು ಅನಿಲ್‌ಕುಮಾರ್‌ ಚಿಕ್ಕದಾಳವಟ್ಟ ಟೀಕಿಸಿದ್ದಾರೆ.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬೆಂಬಲಿಸುವ ಹಲವಾರು ಪ್ರೊಪೈಲ್‌ಗಳು ತೇಜಸ್ವಿ ಸೂರ್ಯರನ್ನು ಹಾಗೂ ಗಾಂಧೀಜಿಯನ್ನು ನಿಂದಿಸಿ ಕಮೆಂಟ್ ಮಾಡಿವೆ. ಪೋಸ್ಟ್‌ಅನ್ನು ವಿರೋಧಿಸುವ ನೆಪದಲ್ಲಿ ರಾಷ್ಟ್ರಪಿತ ಗಾಂಧೀಜಿಯವರನ್ನು ಹೀಯಾಳಿಸಿರುವುದನ್ನು, ಅಸಂವಿಧಾನಿಕ ಪದಗಳನ್ನು ಬಳಸಿರುವುದನ್ನು ಇಲ್ಲಿನ ಕಮೆಂಟ್‌ಗಳಲ್ಲಿ ಕಾಣಬಹುದು.

ಬಿಜೆಪಿ ಫಾಲೋಯರ್ಸ್‌‌ಗಳ ಕಮೆಂಟ್‌ಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಚಿದಾನಂದ ಎಂ.ಪಡುವರಹಳ್ಳಿ, “ನೀವು ನೋಡುದ್ರೆ ಗಾಂಧೀಜಿ ಆಶ್ರಮಕ್ಕೆ ಭೇಟಿ ಕೊಟ್ಟಿದ್ದೀರಿ. ಜೊತೆಗೆ ಗುಜರಾತ್‌ನಲ್ಲಿ ಗಾಂಧೀಜಿಯ ಜೀವನದ ಪಾಠವನ್ನು ಕಲಿಯೋಕೆ ಹೋಗಿದ್ದೀರಿ. ಗಾಂಧೀಜಿ ಆಶ್ರಮಕ್ಕೆ ಹೋಗಿರುವ ಉದ್ದೇಶ, ಗಾಂಧೀಜಿ ಅವರ ಮೇಲಿನ ಪ್ರೀತಿಯೋ ಅಥವಾ ದ್ವೇಷವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಏಕೆಂದರೆ ನಿಮ್ಮ ಈ ಪೋಸ್ಟ್‌ನಲ್ಲಿ ಹಾಕಿರುವ ಕಾಮೆಂಟ್ ಗಳನ್ನು ಒಮ್ಮೆ ನೋಡಿ. ಗಾಂಧೀಜಿ ಅವರ ಬಗ್ಗೆ ಎಷ್ಟು ಅಸಹ್ಯ ಪದಬಳಕೆ ಮಾಡಿದ್ದಾರೆ! ಹಾಗಾಗಿ ನನಗೆ ಅನುಮಾನ ಇದೆ ಬಗೆಹರಿಸಿ. ಇನ್ನೊಂದು ಮುಖ್ಯವಾದ ವಿಷಯವೆಂದರೆ ಗಾಂಧೀಜಿ ಅವರ ಬಗ್ಗೆ ಹಗುರವಾಗಿ ಕಮೆಂಟ್ ಮಾಡ್ತಿರೋರಲ್ಲಿ ನೂರಕ್ಕೆ ತೊಂಬತ್ತು ಭಾಗ ನಿಮ್ಮವರೆ ಅನ್ನೋದು ಅಷ್ಟೆ ಸತ್ಯ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಸೀದಿಯಿಂದ ಬಲವಂತವಾಗಿ ಧ್ವನಿವರ್ಧಕ ತೆಗೆಯುವುದಿಲ್ಲ: ಸಿಎಂ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತೇಜಸ್ವಿಯವರೆ. ನಿಮ್ಮ ಯೋಚನಾಲಹರಿಗಳೇ ಬೇರೆ. ಮಹಾತ್ಮಾ ಗಾಂಧೀಜಿಯವರ ತೃಣಕ್ಕೂ ನೀವು ಸಮಾನರಲ್ಲಾ. ಅದು ಹೇಗೆ ನಿಮ್ಮನ್ನ ಅಲ್ಲಿ ಕೂಡಲು ಬಿಟ್ಟರು..?

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...