Homeಕರ್ನಾಟಕಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

- Advertisement -
- Advertisement -

“ಮಹಾತ್ಮ ಗಾಂಧೀಜಿಯವರು ಭಾರತದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಇಂದು, ಗುಜರಾತ್‌ನ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಂದಿಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಾಗಿತ್ತು. ಗಾಂಧೀಜಿಯವರ ಜೀವನದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಅವಕಾಶ ಸಿಕ್ಕಿತು” ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮಾಡಿರುವ ಪೋಸ್ಟ್‌ ಚರ್ಚೆಗೆ ಗ್ರಾಸವಾಗಿದೆ.

ಚರಕದ ಮುಂದೆ ಕೂತು ನೂಲು ಸುತ್ತುತ್ತಿರುವಂತೆ ತೇಜಸ್ವಿ ಸೂರ್ಯ ಅವರು ಫೋಟೋ ತೆಗೆಸಿಕೊಂಡಿದ್ದು, ಗಾಂಧೀಜಿಯವರನ್ನು ಬಣ್ಣಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನು “ಮಿತಿಮೀರಿದ ಬೂಟಾಟಿಕೆ (ಹಿಪೊಕ್ರಸಿ)” ಎಂದು ಜನರು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಂದು ಕಡೆ ಬಿಜೆಪಿ ನಾಯಕರು ಹಿಂದುತ್ವವನ್ನು ಹೇಳುತ್ತಾ, ಗಾಂಧಿ ಹಂತಕ ಗೋಡ್ಸೆ ಪರ ನಿಲುವು ವ್ಯಕ್ತಪಡಿಸುತ್ತಾರೆ. ಮತ್ತೊಂದೆಡೆ ಗಾಂಧೀಜಿಯನ್ನು ಶ್ಲಾಘಿಸುತ್ತಾರೆ. ಎರಡೂ ರೀತಿಯ ನಿಲುವುಗಳನ್ನು ಬಿಜೆಪಿ ತಾಳುವುದು ಏತಕ್ಕೆ ಎಂಬ ಚರ್ಚೆಗಳು ಮೊದಲಿನಿಂದಲೂ ನಡೆಯುತ್ತಿವೆ.

ಇದನ್ನೂ ಓದಿರಿ: ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಗಾಂಧೀಜಿಯರನ್ನು ಬಿಜೆಪಿಯ ಬೆಂಬಲಿಗರು ಬಹಳ ಕೆಟ್ಟದ್ದಾಗಿ ನಿಂದಿಸುವುದು, ಗೋಡ್ಸೆಯನ್ನು ಹೊಗಳುವುದು ಎಗ್ಗಿಲ್ಲದೆ ನಡೆಯುತ್ತಿದೆ. ಇದರ ವಿರುದ್ಧ ಬಿಜೆಪಿಯ ಹಲವು ನಾಯಕರು ಮಾತನಾಡುವುದಿಲ್ಲ ಎಂಬುದು ತೇಜಸ್ವಿ ಸೂರ್ಯ ಅವರ ಪೋಸ್ಟ್‌ಗೆ ಬಂದಿರುವ ಕಮೆಂಟ್‌ಗಳಲ್ಲಿ ವ್ಯಕ್ತವಾಗುತ್ತದೆ.

ಗಾಂಧೀಜಿಯವರು ಅಹಿಂಸಾ ಮಾರ್ಗದ ಬಹುದೊಡ್ಡ ಸಂಕೇತ. ಸರ್ವಧರ್ಮ ಸಹಿಷ್ಠುತೆಯ ಪ್ರತೀಕ. ಒಂದು ಕೋಮಿನ ವಿರುದ್ಧ ನಿರಂತರ ದ್ವೇಷ ಹರಡುತ್ತಿರುವ ಮತೀಯ ಶಕ್ತಿಗಳು ಹೆಚ್ಚಾಗುತ್ತಿದ್ದು ಸರ್ಕಾರ ಮೌನವಾಗಿದೆ. ಬಿಜೆಪಿ ನಾಯಕರು ಮೌನ ಸಮ್ಮತಿ ನೀಡುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ತೇಜಸ್ವಿ ಸೂರ್ಯ ಅವರು ಈ ಹಿಂದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ಸಾಕಷ್ಟು ನೀಡಿದ್ದು ಚರ್ಚೆಯಾಗಿದೆ. ಆದರೆ ಹಿಂದೂ ಮುಸ್ಲಿಂ ಏಕತೆಯನ್ನು ಸಾರಿದ ಗಾಂಧೀಜಿಯವರನ್ನು ತೇಜಸ್ವಿ ಸೂರ್ಯ ಬಣ್ಣಿಸಿರುವುದು ಟೀಕೆಗೆ ಒಳಗಾಗಿದೆ.

ತೇಜಸ್ವಿ ಸೂರ್ಯರ ಪೋಸ್ಟ್‌ಗೆ ಬಂದ ಕೆಲವು ಕಮೆಂಟ್‌ಗಳು

“ಕೇಜ್ರಿವಾಲ್ ಅವರ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳು ವಾಸಿಸುವ ಮನೆಯ ಮೇಲೆ ದಾಳಿ ಮಾಡಿದ ಹಿಂಸಾಚಾರದ ಗುಂಪಿನ ನಾಯಕ ನೀವು. ನಾಚಿಕೆ ಆಗುತ್ತಿದೆ ತೇಜಸ್ವಿ ಎಂದು ರಾಜೀವ್ ಕುಮಾರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

‘ಖಾತಾಬುಕ್‌’ ಸಂಸ್ಥಾಪಕ ರವೀಶ್‌ನರೇಶ್‌ ಇತ್ತೀಚೆಗೆ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಮೂಲಸೌಕರ್ಯಗಳ ಕೊರತೆ ಬಗ್ಗೆ ಹಂಚಿಕೊಂಡಿದ್ದರು. ಅದನ್ನು ಉಲ್ಲೇಖಿಸಿ ಕಮೆಂಟ್ ಮಾಡಿರುವ ವಿವೇಕಾನಂದ ರೆಡ್ಡಿ, “ನಕಲಿ ಭಾಷಣ ಮತ್ತು ಪ್ರಚಾರಕ್ಕಾಗಿ ಭಾರತದಾದ್ಯಂತ ಅಲೆದಾಡಬೇಡಿ. ನಮ್ಮ ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು ಬಹಳಷ್ಟಿವೆ. ಬೆಂಗಳೂರು ದಕ್ಷಿಣದಲ್ಲಿ ಪ್ರಮುಖ ಐಟಿ ಕಂಪನಿಗಳು ಮತ್ತು ಟೆಕ್ ಪಾರ್ಕ್‌ಗಳು ಬರುತ್ತವೆ. ಮೊದಲು ನಿಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿ. ಸಮಸ್ಯೆಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ. ಮೂಲಸೌಕರ್ಯಗಳನ್ನು ಸುಧಾರಿಸಲು, ಸ್ಟಾರ್ಟ್‌ಅಪ್‌ಗಳು ಮತ್ತು ಕಂಪನಿಗಳನ್ನು ಬೆಂಗಳೂರಿಗೆ ತರಲು ಸೌಕರ್ಯ ಒದಗಿಸಿ…” ಎಂದು ಕೋರಿದ್ದಾರೆ.

“ಅತ್ಯಂತ ಕೆಟ್ಟ ರಾಜಕಾರಣಿ. ಭಾರತದ ಇತಿಹಾಸದಲ್ಲೇ ಕೆಟ್ಟ ರಾಜಕಾರಣಿ. ಮಹಾತ್ಮರ ಸ್ಥಾನದಲ್ಲಿ ಕುಳಿತುಕೊಳ್ಳಬೇಡಿ. ನೀವು ಅದಕ್ಕೆ ಅರ್ಹರಲ್ಲ” ಎಂದು ಕಿರಣ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

“ಗೋಡ್ಸೆ ಕೋಪಗೊಳ್ಳುತ್ತಾನೆ ಗಾಂಧಿಯನ್ನು ಹೆಚ್ಚು ಹೊಗಳಬೇಡಿ” ಎಂದು ತನ್‌ಹಕ್‌ ಎಂಬವರು ತಿಳಿಸಿದ್ದಾರೆ.

“ಗೋಡ್ಸೆ ಮುರ್ದಾಬಾದ್ ಎಂದು ಒಮ್ಮೆಯಾದರೂ ಹೇಳಿ” ರಾಜು ಟಾಕೂರ್‌ ಒತ್ತಾಯಿಸಿದ್ದಾರೆ.

“ಗಾಂಧಿ ತತ್ವ ಸಿದ್ಧಾಂತವನ್ನು ವಿರೋಧ ಮಾಡಿ ಅವರ ಸಾವನ್ನು ಸಂಭ್ರಮಿಸುವ ಯಾವ ವ್ಯಕ್ತಿಯಾದರೂ ಅಲ್ಲಿಗೆ ಹೋಗಬಾರದು” ಎಂದು ಡಿ.ಎಸ್.ಗೌರೀಶ್‌ ತಿಳಿಸಿದ್ದಾರೆ.

“ತಮ್ಮ ಹೇಳಿಕೆಗಳ ಬಗ್ಗೆ ಪ್ರಾಯಶ್ಚಿತ ಮಾಡಿಕೊಳ್ಳಲು ತೇಜಸ್ವಿ ಸೂರ್ಯ ಅವರು ಸಬರಮತಿ ಆಶ್ರಮಕ್ಕೆ ಹೋಗಿದ್ದಾರೆ ಅನ್ನಿಸುತ್ತದೆ. ಲೋಕಸಭೆ ಸದಸ್ಯರಾಗಿ ಮನಪರಿವರ್ತನೆ ಮಾಡಿಕೊಳ್ಳುವುದು ಒಳ್ಳೆಯ ಬೆಳವಣಿಗೆ” ಎಂದು ಡಿ.ಎಸ್.ದೊರೆಸ್ವಾಮಿ ಅಭಿಪ್ರಾಯಪಟ್ಟಿದ್ದರೆ.

“ಭಾರತದ ಪ್ರಪ್ರಥಮ ಭಯೋತ್ಪಾದಕ ಗೋಡ್ಸೆಯನ್ನು ಏನೆನ್ನುವಿರಿ” ಎಂದು ಮಾರುತಿ ಸೂರಕುಂಟೆ ಪ್ರಶ್ನಿಸಿದ್ದಾರೆ.

“ಹೈ ಲೆವೆಲ್‌ ಆಫ್ ಹಿಪೊಕ್ರಸಿ” ಎಂದು ಅನಿಲ್‌ಕುಮಾರ್‌ ಚಿಕ್ಕದಾಳವಟ್ಟ ಟೀಕಿಸಿದ್ದಾರೆ.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬೆಂಬಲಿಸುವ ಹಲವಾರು ಪ್ರೊಪೈಲ್‌ಗಳು ತೇಜಸ್ವಿ ಸೂರ್ಯರನ್ನು ಹಾಗೂ ಗಾಂಧೀಜಿಯನ್ನು ನಿಂದಿಸಿ ಕಮೆಂಟ್ ಮಾಡಿವೆ. ಪೋಸ್ಟ್‌ಅನ್ನು ವಿರೋಧಿಸುವ ನೆಪದಲ್ಲಿ ರಾಷ್ಟ್ರಪಿತ ಗಾಂಧೀಜಿಯವರನ್ನು ಹೀಯಾಳಿಸಿರುವುದನ್ನು, ಅಸಂವಿಧಾನಿಕ ಪದಗಳನ್ನು ಬಳಸಿರುವುದನ್ನು ಇಲ್ಲಿನ ಕಮೆಂಟ್‌ಗಳಲ್ಲಿ ಕಾಣಬಹುದು.

ಬಿಜೆಪಿ ಫಾಲೋಯರ್ಸ್‌‌ಗಳ ಕಮೆಂಟ್‌ಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಚಿದಾನಂದ ಎಂ.ಪಡುವರಹಳ್ಳಿ, “ನೀವು ನೋಡುದ್ರೆ ಗಾಂಧೀಜಿ ಆಶ್ರಮಕ್ಕೆ ಭೇಟಿ ಕೊಟ್ಟಿದ್ದೀರಿ. ಜೊತೆಗೆ ಗುಜರಾತ್‌ನಲ್ಲಿ ಗಾಂಧೀಜಿಯ ಜೀವನದ ಪಾಠವನ್ನು ಕಲಿಯೋಕೆ ಹೋಗಿದ್ದೀರಿ. ಗಾಂಧೀಜಿ ಆಶ್ರಮಕ್ಕೆ ಹೋಗಿರುವ ಉದ್ದೇಶ, ಗಾಂಧೀಜಿ ಅವರ ಮೇಲಿನ ಪ್ರೀತಿಯೋ ಅಥವಾ ದ್ವೇಷವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಏಕೆಂದರೆ ನಿಮ್ಮ ಈ ಪೋಸ್ಟ್‌ನಲ್ಲಿ ಹಾಕಿರುವ ಕಾಮೆಂಟ್ ಗಳನ್ನು ಒಮ್ಮೆ ನೋಡಿ. ಗಾಂಧೀಜಿ ಅವರ ಬಗ್ಗೆ ಎಷ್ಟು ಅಸಹ್ಯ ಪದಬಳಕೆ ಮಾಡಿದ್ದಾರೆ! ಹಾಗಾಗಿ ನನಗೆ ಅನುಮಾನ ಇದೆ ಬಗೆಹರಿಸಿ. ಇನ್ನೊಂದು ಮುಖ್ಯವಾದ ವಿಷಯವೆಂದರೆ ಗಾಂಧೀಜಿ ಅವರ ಬಗ್ಗೆ ಹಗುರವಾಗಿ ಕಮೆಂಟ್ ಮಾಡ್ತಿರೋರಲ್ಲಿ ನೂರಕ್ಕೆ ತೊಂಬತ್ತು ಭಾಗ ನಿಮ್ಮವರೆ ಅನ್ನೋದು ಅಷ್ಟೆ ಸತ್ಯ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಸೀದಿಯಿಂದ ಬಲವಂತವಾಗಿ ಧ್ವನಿವರ್ಧಕ ತೆಗೆಯುವುದಿಲ್ಲ: ಸಿಎಂ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತೇಜಸ್ವಿಯವರೆ. ನಿಮ್ಮ ಯೋಚನಾಲಹರಿಗಳೇ ಬೇರೆ. ಮಹಾತ್ಮಾ ಗಾಂಧೀಜಿಯವರ ತೃಣಕ್ಕೂ ನೀವು ಸಮಾನರಲ್ಲಾ. ಅದು ಹೇಗೆ ನಿಮ್ಮನ್ನ ಅಲ್ಲಿ ಕೂಡಲು ಬಿಟ್ಟರು..?

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....