Homeಕರ್ನಾಟಕಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

- Advertisement -
- Advertisement -

“ಮಹಾತ್ಮ ಗಾಂಧೀಜಿಯವರು ಭಾರತದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಇಂದು, ಗುಜರಾತ್‌ನ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಂದಿಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಾಗಿತ್ತು. ಗಾಂಧೀಜಿಯವರ ಜೀವನದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಅವಕಾಶ ಸಿಕ್ಕಿತು” ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮಾಡಿರುವ ಪೋಸ್ಟ್‌ ಚರ್ಚೆಗೆ ಗ್ರಾಸವಾಗಿದೆ.

ಚರಕದ ಮುಂದೆ ಕೂತು ನೂಲು ಸುತ್ತುತ್ತಿರುವಂತೆ ತೇಜಸ್ವಿ ಸೂರ್ಯ ಅವರು ಫೋಟೋ ತೆಗೆಸಿಕೊಂಡಿದ್ದು, ಗಾಂಧೀಜಿಯವರನ್ನು ಬಣ್ಣಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನು “ಮಿತಿಮೀರಿದ ಬೂಟಾಟಿಕೆ (ಹಿಪೊಕ್ರಸಿ)” ಎಂದು ಜನರು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಂದು ಕಡೆ ಬಿಜೆಪಿ ನಾಯಕರು ಹಿಂದುತ್ವವನ್ನು ಹೇಳುತ್ತಾ, ಗಾಂಧಿ ಹಂತಕ ಗೋಡ್ಸೆ ಪರ ನಿಲುವು ವ್ಯಕ್ತಪಡಿಸುತ್ತಾರೆ. ಮತ್ತೊಂದೆಡೆ ಗಾಂಧೀಜಿಯನ್ನು ಶ್ಲಾಘಿಸುತ್ತಾರೆ. ಎರಡೂ ರೀತಿಯ ನಿಲುವುಗಳನ್ನು ಬಿಜೆಪಿ ತಾಳುವುದು ಏತಕ್ಕೆ ಎಂಬ ಚರ್ಚೆಗಳು ಮೊದಲಿನಿಂದಲೂ ನಡೆಯುತ್ತಿವೆ.

ಇದನ್ನೂ ಓದಿರಿ: ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಗಾಂಧೀಜಿಯರನ್ನು ಬಿಜೆಪಿಯ ಬೆಂಬಲಿಗರು ಬಹಳ ಕೆಟ್ಟದ್ದಾಗಿ ನಿಂದಿಸುವುದು, ಗೋಡ್ಸೆಯನ್ನು ಹೊಗಳುವುದು ಎಗ್ಗಿಲ್ಲದೆ ನಡೆಯುತ್ತಿದೆ. ಇದರ ವಿರುದ್ಧ ಬಿಜೆಪಿಯ ಹಲವು ನಾಯಕರು ಮಾತನಾಡುವುದಿಲ್ಲ ಎಂಬುದು ತೇಜಸ್ವಿ ಸೂರ್ಯ ಅವರ ಪೋಸ್ಟ್‌ಗೆ ಬಂದಿರುವ ಕಮೆಂಟ್‌ಗಳಲ್ಲಿ ವ್ಯಕ್ತವಾಗುತ್ತದೆ.

ಗಾಂಧೀಜಿಯವರು ಅಹಿಂಸಾ ಮಾರ್ಗದ ಬಹುದೊಡ್ಡ ಸಂಕೇತ. ಸರ್ವಧರ್ಮ ಸಹಿಷ್ಠುತೆಯ ಪ್ರತೀಕ. ಒಂದು ಕೋಮಿನ ವಿರುದ್ಧ ನಿರಂತರ ದ್ವೇಷ ಹರಡುತ್ತಿರುವ ಮತೀಯ ಶಕ್ತಿಗಳು ಹೆಚ್ಚಾಗುತ್ತಿದ್ದು ಸರ್ಕಾರ ಮೌನವಾಗಿದೆ. ಬಿಜೆಪಿ ನಾಯಕರು ಮೌನ ಸಮ್ಮತಿ ನೀಡುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ತೇಜಸ್ವಿ ಸೂರ್ಯ ಅವರು ಈ ಹಿಂದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ಸಾಕಷ್ಟು ನೀಡಿದ್ದು ಚರ್ಚೆಯಾಗಿದೆ. ಆದರೆ ಹಿಂದೂ ಮುಸ್ಲಿಂ ಏಕತೆಯನ್ನು ಸಾರಿದ ಗಾಂಧೀಜಿಯವರನ್ನು ತೇಜಸ್ವಿ ಸೂರ್ಯ ಬಣ್ಣಿಸಿರುವುದು ಟೀಕೆಗೆ ಒಳಗಾಗಿದೆ.

ತೇಜಸ್ವಿ ಸೂರ್ಯರ ಪೋಸ್ಟ್‌ಗೆ ಬಂದ ಕೆಲವು ಕಮೆಂಟ್‌ಗಳು

“ಕೇಜ್ರಿವಾಲ್ ಅವರ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳು ವಾಸಿಸುವ ಮನೆಯ ಮೇಲೆ ದಾಳಿ ಮಾಡಿದ ಹಿಂಸಾಚಾರದ ಗುಂಪಿನ ನಾಯಕ ನೀವು. ನಾಚಿಕೆ ಆಗುತ್ತಿದೆ ತೇಜಸ್ವಿ ಎಂದು ರಾಜೀವ್ ಕುಮಾರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

‘ಖಾತಾಬುಕ್‌’ ಸಂಸ್ಥಾಪಕ ರವೀಶ್‌ನರೇಶ್‌ ಇತ್ತೀಚೆಗೆ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಮೂಲಸೌಕರ್ಯಗಳ ಕೊರತೆ ಬಗ್ಗೆ ಹಂಚಿಕೊಂಡಿದ್ದರು. ಅದನ್ನು ಉಲ್ಲೇಖಿಸಿ ಕಮೆಂಟ್ ಮಾಡಿರುವ ವಿವೇಕಾನಂದ ರೆಡ್ಡಿ, “ನಕಲಿ ಭಾಷಣ ಮತ್ತು ಪ್ರಚಾರಕ್ಕಾಗಿ ಭಾರತದಾದ್ಯಂತ ಅಲೆದಾಡಬೇಡಿ. ನಮ್ಮ ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು ಬಹಳಷ್ಟಿವೆ. ಬೆಂಗಳೂರು ದಕ್ಷಿಣದಲ್ಲಿ ಪ್ರಮುಖ ಐಟಿ ಕಂಪನಿಗಳು ಮತ್ತು ಟೆಕ್ ಪಾರ್ಕ್‌ಗಳು ಬರುತ್ತವೆ. ಮೊದಲು ನಿಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿ. ಸಮಸ್ಯೆಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ. ಮೂಲಸೌಕರ್ಯಗಳನ್ನು ಸುಧಾರಿಸಲು, ಸ್ಟಾರ್ಟ್‌ಅಪ್‌ಗಳು ಮತ್ತು ಕಂಪನಿಗಳನ್ನು ಬೆಂಗಳೂರಿಗೆ ತರಲು ಸೌಕರ್ಯ ಒದಗಿಸಿ…” ಎಂದು ಕೋರಿದ್ದಾರೆ.

“ಅತ್ಯಂತ ಕೆಟ್ಟ ರಾಜಕಾರಣಿ. ಭಾರತದ ಇತಿಹಾಸದಲ್ಲೇ ಕೆಟ್ಟ ರಾಜಕಾರಣಿ. ಮಹಾತ್ಮರ ಸ್ಥಾನದಲ್ಲಿ ಕುಳಿತುಕೊಳ್ಳಬೇಡಿ. ನೀವು ಅದಕ್ಕೆ ಅರ್ಹರಲ್ಲ” ಎಂದು ಕಿರಣ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

“ಗೋಡ್ಸೆ ಕೋಪಗೊಳ್ಳುತ್ತಾನೆ ಗಾಂಧಿಯನ್ನು ಹೆಚ್ಚು ಹೊಗಳಬೇಡಿ” ಎಂದು ತನ್‌ಹಕ್‌ ಎಂಬವರು ತಿಳಿಸಿದ್ದಾರೆ.

“ಗೋಡ್ಸೆ ಮುರ್ದಾಬಾದ್ ಎಂದು ಒಮ್ಮೆಯಾದರೂ ಹೇಳಿ” ರಾಜು ಟಾಕೂರ್‌ ಒತ್ತಾಯಿಸಿದ್ದಾರೆ.

“ಗಾಂಧಿ ತತ್ವ ಸಿದ್ಧಾಂತವನ್ನು ವಿರೋಧ ಮಾಡಿ ಅವರ ಸಾವನ್ನು ಸಂಭ್ರಮಿಸುವ ಯಾವ ವ್ಯಕ್ತಿಯಾದರೂ ಅಲ್ಲಿಗೆ ಹೋಗಬಾರದು” ಎಂದು ಡಿ.ಎಸ್.ಗೌರೀಶ್‌ ತಿಳಿಸಿದ್ದಾರೆ.

“ತಮ್ಮ ಹೇಳಿಕೆಗಳ ಬಗ್ಗೆ ಪ್ರಾಯಶ್ಚಿತ ಮಾಡಿಕೊಳ್ಳಲು ತೇಜಸ್ವಿ ಸೂರ್ಯ ಅವರು ಸಬರಮತಿ ಆಶ್ರಮಕ್ಕೆ ಹೋಗಿದ್ದಾರೆ ಅನ್ನಿಸುತ್ತದೆ. ಲೋಕಸಭೆ ಸದಸ್ಯರಾಗಿ ಮನಪರಿವರ್ತನೆ ಮಾಡಿಕೊಳ್ಳುವುದು ಒಳ್ಳೆಯ ಬೆಳವಣಿಗೆ” ಎಂದು ಡಿ.ಎಸ್.ದೊರೆಸ್ವಾಮಿ ಅಭಿಪ್ರಾಯಪಟ್ಟಿದ್ದರೆ.

“ಭಾರತದ ಪ್ರಪ್ರಥಮ ಭಯೋತ್ಪಾದಕ ಗೋಡ್ಸೆಯನ್ನು ಏನೆನ್ನುವಿರಿ” ಎಂದು ಮಾರುತಿ ಸೂರಕುಂಟೆ ಪ್ರಶ್ನಿಸಿದ್ದಾರೆ.

“ಹೈ ಲೆವೆಲ್‌ ಆಫ್ ಹಿಪೊಕ್ರಸಿ” ಎಂದು ಅನಿಲ್‌ಕುಮಾರ್‌ ಚಿಕ್ಕದಾಳವಟ್ಟ ಟೀಕಿಸಿದ್ದಾರೆ.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬೆಂಬಲಿಸುವ ಹಲವಾರು ಪ್ರೊಪೈಲ್‌ಗಳು ತೇಜಸ್ವಿ ಸೂರ್ಯರನ್ನು ಹಾಗೂ ಗಾಂಧೀಜಿಯನ್ನು ನಿಂದಿಸಿ ಕಮೆಂಟ್ ಮಾಡಿವೆ. ಪೋಸ್ಟ್‌ಅನ್ನು ವಿರೋಧಿಸುವ ನೆಪದಲ್ಲಿ ರಾಷ್ಟ್ರಪಿತ ಗಾಂಧೀಜಿಯವರನ್ನು ಹೀಯಾಳಿಸಿರುವುದನ್ನು, ಅಸಂವಿಧಾನಿಕ ಪದಗಳನ್ನು ಬಳಸಿರುವುದನ್ನು ಇಲ್ಲಿನ ಕಮೆಂಟ್‌ಗಳಲ್ಲಿ ಕಾಣಬಹುದು.

ಬಿಜೆಪಿ ಫಾಲೋಯರ್ಸ್‌‌ಗಳ ಕಮೆಂಟ್‌ಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಚಿದಾನಂದ ಎಂ.ಪಡುವರಹಳ್ಳಿ, “ನೀವು ನೋಡುದ್ರೆ ಗಾಂಧೀಜಿ ಆಶ್ರಮಕ್ಕೆ ಭೇಟಿ ಕೊಟ್ಟಿದ್ದೀರಿ. ಜೊತೆಗೆ ಗುಜರಾತ್‌ನಲ್ಲಿ ಗಾಂಧೀಜಿಯ ಜೀವನದ ಪಾಠವನ್ನು ಕಲಿಯೋಕೆ ಹೋಗಿದ್ದೀರಿ. ಗಾಂಧೀಜಿ ಆಶ್ರಮಕ್ಕೆ ಹೋಗಿರುವ ಉದ್ದೇಶ, ಗಾಂಧೀಜಿ ಅವರ ಮೇಲಿನ ಪ್ರೀತಿಯೋ ಅಥವಾ ದ್ವೇಷವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಏಕೆಂದರೆ ನಿಮ್ಮ ಈ ಪೋಸ್ಟ್‌ನಲ್ಲಿ ಹಾಕಿರುವ ಕಾಮೆಂಟ್ ಗಳನ್ನು ಒಮ್ಮೆ ನೋಡಿ. ಗಾಂಧೀಜಿ ಅವರ ಬಗ್ಗೆ ಎಷ್ಟು ಅಸಹ್ಯ ಪದಬಳಕೆ ಮಾಡಿದ್ದಾರೆ! ಹಾಗಾಗಿ ನನಗೆ ಅನುಮಾನ ಇದೆ ಬಗೆಹರಿಸಿ. ಇನ್ನೊಂದು ಮುಖ್ಯವಾದ ವಿಷಯವೆಂದರೆ ಗಾಂಧೀಜಿ ಅವರ ಬಗ್ಗೆ ಹಗುರವಾಗಿ ಕಮೆಂಟ್ ಮಾಡ್ತಿರೋರಲ್ಲಿ ನೂರಕ್ಕೆ ತೊಂಬತ್ತು ಭಾಗ ನಿಮ್ಮವರೆ ಅನ್ನೋದು ಅಷ್ಟೆ ಸತ್ಯ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಸೀದಿಯಿಂದ ಬಲವಂತವಾಗಿ ಧ್ವನಿವರ್ಧಕ ತೆಗೆಯುವುದಿಲ್ಲ: ಸಿಎಂ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತೇಜಸ್ವಿಯವರೆ. ನಿಮ್ಮ ಯೋಚನಾಲಹರಿಗಳೇ ಬೇರೆ. ಮಹಾತ್ಮಾ ಗಾಂಧೀಜಿಯವರ ತೃಣಕ್ಕೂ ನೀವು ಸಮಾನರಲ್ಲಾ. ಅದು ಹೇಗೆ ನಿಮ್ಮನ್ನ ಅಲ್ಲಿ ಕೂಡಲು ಬಿಟ್ಟರು..?

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...