Homeಕರ್ನಾಟಕಮಾಸ್ಕ್ ಧರಿಸದ ಕಾರಣ 250 ರೂ ದಂಡ ಕಟ್ಟಿದ ಸಂಸದ ತೇಜಸ್ವಿ ಸೂರ್ಯ!

ಮಾಸ್ಕ್ ಧರಿಸದ ಕಾರಣ 250 ರೂ ದಂಡ ಕಟ್ಟಿದ ಸಂಸದ ತೇಜಸ್ವಿ ಸೂರ್ಯ!

ಮಾಸ್ಕ್‌ ಧರಿಸದೇ ಇರುವುದಕ್ಕೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಹಾಗೂ ಇತರ ರಾಜಕೀಯ ಮುಖಂಡರಿಂದ ನೀವು ದಂಡ ಸಂಗ್ರಹಿಸಿದ್ದೀರಾ? ರಾಜಕಾರಣಿಗಳ ವಿರುದ್ಧ ಏಕೆ ಎಫ್‌ಐಆರ್‌ ದಾಖಲಿಸಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

- Advertisement -
- Advertisement -

ಸೆಪ್ಟೆಂಬರ್ 30 ರಂದು ನಡೆದ ರಾಜಕೀಯ ರ್‍ಯಾಲಿಯಲ್ಲಿ ಮಾಸ್ಕ್ ಧರಿಸದೇ ಇದ್ದ ತಪ್ಪಿಗಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯಗೆ 250 ರೂ.ಗಳ ದಂಡ ವಿಧಿಸಲಾಗಿದೆ ಮತ್ತು ದಂಡ ವಸೂಲಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸುವ ಸಾಮಾನ್ಯ ಜನರಿಗೆ ಮಾತ್ರ ದಂಡ ವಿಧಿಸುತ್ತೀರಿ. ಅದೇ ನಿಯಮಗಳು ರಾಜಕೀಯ ರ್‍ಯಾಲಿಗಳಲ್ಲಿ ಭಾಗವಹಿಸುವ ರಾಜಕೀಯ ನಾಯಕರಿಗ್ಯಾಕಿಲ್ಲ? ಮಾಸ್ಕ್‌ ಧರಿಸದೇ ಇರುವುದಕ್ಕೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಹಾಗೂ ಇತರ ರಾಜಕೀಯ ಮುಖಂಡರಿಂದ ನೀವು ದಂಡ ಸಂಗ್ರಹಿಸಿದ್ದೀರಾ? ರಾಜಕಾರಣಿಗಳ ವಿರುದ್ಧ ಏಕೆ ಎಫ್‌ಐಆರ್‌ ದಾಖಲಿಸಿಲ್ಲ? ಕಠಿಣ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿರುವ ಸರ್ಕಾರವು ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತಿದೆ ಎಂದು ನವೆಂಬರ್ 6 ರಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿತ್ತು.

ಈ ಕುರಿತು ನ್ಯಾಯಾಲಯಕ್ಕೆ ಇಂದು ಮಾಹಿತಿ ನೀಡಿರುವ ರಾಜ್ಯ ಸರ್ಕಾರ ಸಂಸದ ತೇಜಸ್ವಿ ಸೂರ್ಯ ಮಾಸ್ಕ್ ಧರಿಸದೇ ಇದ್ದ ತಪ್ಪಿಗಾಗಿ ನವೆಂಬರ್ 7 ರಂದು 250 ರೂ ದಂಡ ಪಾವತಿಸಿದ್ದಾರೆ ಎಂದು ತಿಳಿಸಿದೆ.

ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಲೆಟ್ಜ್ ಕಿಟ್‌ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನವೆಂಬರ್ 06 ರಂದು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಅವರ ನೇತೃತ್ವದ ವಿಭಾಗೀಯ ಪೀಠ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಸೆ.30 ರಂದು ಸಂಸದ ತೇಜಸ್ವಿ ಸೂರ್ಯರನ್ನು ವಿಮಾನ ನಿಲ್ದಾಣದಿಂದ ಪಕ್ಷದ ಕಚೇರಿಗೆ ಸ್ವಾಗತಿಸುವ ವೇಳೆ ನಡೆದ ರ್‍ಯಾಲಿಯಲ್ಲಿ ತೇಜಸ್ವಿ ಮಾಸ್ಕ್ ಧರಿಸಿರಲಿಲ್ಲ. ಅಲ್ಲಿದ್ದ ಕಾರ್ಯಕರ್ತರು ಮಾಸ್ಕ್ ಧರಿಸದೇ ಇರುವುದು ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳದೇ ಇರುವುದು ಕಂಡುಬಂದಿದೆ ಎಂದು ವಕೀಲ ಜಿ.ಆರ್. ಮೋಹನ್ ಪೋಟೊಗಳ ಸಹಿತ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಉತ್ತರಿಸಿರುವ ಸರ್ಕಾರದ ಪರ ವಕೀಲರು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ನಡೆಸಿದ ರ್‍ಯಾಲಿಯಲ್ಲಿ ಭಾಗವಹಿಸಿದ್ದವರ ವಿರುದ್ಧ ಹಾಗೂ ಆರ್‌.ಆರ್‌.ನಗರ ಚುನಾವಣಾ ಪ್ರಚಾರದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಮಾಸ್ಕ್ ಇಲ್ಲದ ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ಏಕಿಲ್ಲ? ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...