Homeಕರ್ನಾಟಕತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವುದು ನಿಮ್ಮದು ಕೊಳಕು ಬುದ್ದಿ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವದು ಬುಧವಾರ ಕಿಡಿ ಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ, ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು,‌ ಸಚಿವರು ಮತ್ತು ಬಿಜೆಪಿ‌ ಶಾಸಕರು‌ ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

“ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ‌ ಮೇಲೆ ಒತ್ತಡ ಹೇರಿ” ಎಂದು ಅವರು ಸಲಹೆ ನೀಡಿದ್ದಾರೆ.

“ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು?” ಎಂದು ಅವರು ಕೇಳಿದ್ದಾರೆ.

“ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ರಣಾವತ್‌ ಖಾತೆಯನ್ನು ಶಾಶ್ವತವಾಗಿ ಅಮಾನತು ಮಾಡಿದ ಟ್ವಿಟರ್‌!

“ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ” ಎಂದು ಅವರು ಹೇಳಿದ್ದಾರೆ.

“‘ಯಥಾ ರಾಜಾ ತಥಾ‌ ಮಂತ್ರಿ, ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ನರೇಂದ್ರ ಮೋದಿಯವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ” ಎಂದು ಅವರು ಹೇಳಿದ್ದಾರೆ.

“ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು‌ ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ?. ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದುಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

“ಕೇಂದ್ರ ಮತ್ತು ರಾಜ್ಯದಲ್ಲಿ‌ ಬಿಜೆಪಿಯೇ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ,‌ ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರ ಅಚ್ಚೇ ದಿನ್? ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು‌ ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ವೆಂಟಿಲೇಟರ್,‌ ಐಸಿಯು,‌ ಆಕ್ಸಿಜನ್ ರಾಜ್ಯಕ್ಕೆ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ಮೋದಿ ರಕ್ಷಿಸುತ್ತಿರುವುದು ಯಾರನ್ನು? ತಮ್ಮನ್ನೋ? ಅಧಿಕಾರಿಗಳನ್ನೋ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಹಾಕಿದ್ದಾರೆ.

“ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿಗಳು ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ‌ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. Nimma rajakeeyana ivaga thorisbedi..
    Thu nim janmakke..
    Ashtu neravagi sikkakondidru avrannella vahoskondu mathadthiyalla hottege yen thinthiya..
    Thakath idre yar yar hana hodithidare hidkodu..
    Manasika kushtarogi neenu…

  2. ಸಿದ್ಧರಾಮಯ್ಯ ಬಹಳ ಕರಾರುವಾಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಂದೊಂದು ವಾಕ್ಯವೂ ನಿಖರವಾಗಿದೆ. ಅವರ ಪಕ್ಷದವರೂ ಹೀಗೇ ಎಲ್ಲಾ ಕಡೆ ಬಾಯಿ ಬಿಟ್ಟಿದ್ದಲ್ಲಿ ಬಿಜೆಪಿಗರ ಆಟಾಟೋಪ ಸ್ವಲ್ಪವಾದರೂ ತಗ್ಗುತ್ತಿತ್ತು.

    ಹ್ಯಾಟ್ಸಾಫ್ ಸಿದ್ಧರಾಮಯ್ಯ!

  3. ಸತ್ಯ ಹೇಳಿದರೆ ಪಿತ್ತ ನೆತ್ತಿಗೇರ ಬಹುದು ತೇಜಸ್ವಿಗೆ.

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...