Homeಕರ್ನಾಟಕತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವುದು ನಿಮ್ಮದು ಕೊಳಕು ಬುದ್ದಿ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವದು ಬುಧವಾರ ಕಿಡಿ ಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ, ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು,‌ ಸಚಿವರು ಮತ್ತು ಬಿಜೆಪಿ‌ ಶಾಸಕರು‌ ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

“ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ‌ ಮೇಲೆ ಒತ್ತಡ ಹೇರಿ” ಎಂದು ಅವರು ಸಲಹೆ ನೀಡಿದ್ದಾರೆ.

“ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು?” ಎಂದು ಅವರು ಕೇಳಿದ್ದಾರೆ.

“ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ರಣಾವತ್‌ ಖಾತೆಯನ್ನು ಶಾಶ್ವತವಾಗಿ ಅಮಾನತು ಮಾಡಿದ ಟ್ವಿಟರ್‌!

“ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ” ಎಂದು ಅವರು ಹೇಳಿದ್ದಾರೆ.

“‘ಯಥಾ ರಾಜಾ ತಥಾ‌ ಮಂತ್ರಿ, ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ನರೇಂದ್ರ ಮೋದಿಯವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ” ಎಂದು ಅವರು ಹೇಳಿದ್ದಾರೆ.

“ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು‌ ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ?. ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದುಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

“ಕೇಂದ್ರ ಮತ್ತು ರಾಜ್ಯದಲ್ಲಿ‌ ಬಿಜೆಪಿಯೇ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ,‌ ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರ ಅಚ್ಚೇ ದಿನ್? ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು‌ ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ವೆಂಟಿಲೇಟರ್,‌ ಐಸಿಯು,‌ ಆಕ್ಸಿಜನ್ ರಾಜ್ಯಕ್ಕೆ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ಮೋದಿ ರಕ್ಷಿಸುತ್ತಿರುವುದು ಯಾರನ್ನು? ತಮ್ಮನ್ನೋ? ಅಧಿಕಾರಿಗಳನ್ನೋ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಹಾಕಿದ್ದಾರೆ.

“ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿಗಳು ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ‌ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. Nimma rajakeeyana ivaga thorisbedi..
    Thu nim janmakke..
    Ashtu neravagi sikkakondidru avrannella vahoskondu mathadthiyalla hottege yen thinthiya..
    Thakath idre yar yar hana hodithidare hidkodu..
    Manasika kushtarogi neenu…

  2. ಸಿದ್ಧರಾಮಯ್ಯ ಬಹಳ ಕರಾರುವಾಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಂದೊಂದು ವಾಕ್ಯವೂ ನಿಖರವಾಗಿದೆ. ಅವರ ಪಕ್ಷದವರೂ ಹೀಗೇ ಎಲ್ಲಾ ಕಡೆ ಬಾಯಿ ಬಿಟ್ಟಿದ್ದಲ್ಲಿ ಬಿಜೆಪಿಗರ ಆಟಾಟೋಪ ಸ್ವಲ್ಪವಾದರೂ ತಗ್ಗುತ್ತಿತ್ತು.

    ಹ್ಯಾಟ್ಸಾಫ್ ಸಿದ್ಧರಾಮಯ್ಯ!

  3. ಸತ್ಯ ಹೇಳಿದರೆ ಪಿತ್ತ ನೆತ್ತಿಗೇರ ಬಹುದು ತೇಜಸ್ವಿಗೆ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...