Homeಕರ್ನಾಟಕಅನ್ಯಾಯಕ್ಕೆ ಒಳಗಾದವರು ಇಲ್ಲದಿದ್ದಾಗ ತೆರಳಿ ಕ್ಷಮೆ ಯಾಚಿಸಿದ ತೇಜಸ್ವಿ ಸೂರ್ಯ: ಸಾರ್ವಜನಿಕ ಕ್ಷಮೆ ಯಾಚನೆಗೆ ಒತ್ತಾಯ

ಅನ್ಯಾಯಕ್ಕೆ ಒಳಗಾದವರು ಇಲ್ಲದಿದ್ದಾಗ ತೆರಳಿ ಕ್ಷಮೆ ಯಾಚಿಸಿದ ತೇಜಸ್ವಿ ಸೂರ್ಯ: ಸಾರ್ವಜನಿಕ ಕ್ಷಮೆ ಯಾಚನೆಗೆ ಒತ್ತಾಯ

- Advertisement -
- Advertisement -

‘ನಾನು ನನಗೆ ಕೊಟ್ಟಿದ್ದ ಪಟ್ಟಿಯನ್ನು ಓದಿದ್ದೇನೆ, ತಪ್ಪಾಯ್ತು ಕ್ಷಮಿಸಿ’ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿ ವಾರ್‌ರೂಮಿಗೆ ಮತ್ತೆ ಭೇಟಿ ನೀಡಿದಾಗ ಬೇಡಿಕೊಂಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಆದರೆ, ರಾತ್ರೋರಾತ್ರಿ ನಡೆದ ಈ ಕ್ಷಮೆ ಯಾಚನೆ ಸಂದರ್ಭದಲ್ಲಿ, ತೇಜಸ್ವಿ ಮತ್ತು ಅವರ ಪಟಾಲಂ ಅವತ್ತು ಹೆಸರಿಸಿದ 16 ಮುಸ್ಲಿಂ ಉದ್ಯೋಗಿಗಳು ಅಲ್ಲಿ ಇರಲೇ ಇಲ್ಲ. ಈ ಸಂಸದರ ಆರ್ಭಟ, ಹುಂಬತನದ ಪರಿಣಾಮವಾಗಿಯೇ ಅವರು ತಾತ್ಕಾಲಿಕವಾಗಿ ಕೆಲಸ ಕಳೆದುಕೊಂಡಿದ್ದಾರೆ.

ಬಿಜೆಪಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ (ಮೇ 5) ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರು ದಕ್ಷಿಣ ಕೋವಿಡ್ ವಾರ್‌ರೂಮಿಗೆ ಭೇಟಿ ನೀಡಿ, ಕ್ಷಮೆ ಯಾಚಿಸಿದ್ದಾರೆ. ಮಂಗಳವಾರದಂದು ವಾರ್‌‌ರೂಂಗೆ ಮೇಲೆ ’ದಾಳಿ’ ನಡೆಸಿದ್ದ ತೇಜಸ್ವಿ ಅಲ್ಲಿ ಕೆಲಸ ಮಾಡುತ್ತಿದ್ದ 16 ಮುಸ್ಲಿಂ ಸಿಬ್ಬಂದಿಗಳ ಹೆಸರನ್ನು ಓದಿದ್ದು, ಅವರು ಕೋವಿಡ್ ಬೆಡ್ ಬ್ಲಾಕ್ ಮಾಡುವ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು. ಇದರಿಂದಾಗಿ ಈ ಉದ್ಯೋಗಿಗಳನ್ನು ಬಲಪಂಥೀಯರು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ್ದರು.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಇದನ್ನು ಅನುಸರಿಸಿ, ಈ ವಾರ್‌ರೂಮಿನಲ್ಲಿ ಕೆಲಸ ಮಾಡುವ 205 ಜನರ ಹೆಸರುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸೋರಿಕೆಯಾದ ನಂತರ ಸಂಸದ ತೇಜಸ್ವಿಯ ಕೋಮುವಾದಿ ಧೋರಣೆ ಬೆತ್ತಲಾಗಿತ್ತು. ಅಲ್ಲಿ ಶೇ. 90 ಕ್ಕಿಂತ ಹೆಚ್ಚು ಹಿಂದೂಗಳೇ ಇದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಸಂಸದರ ವಿರುದ್ಧ ಜಾಲತಾಣದಲ್ಲಿ ಅಭಿಯಾನ ಶುರುವಾಗಿ, ತೇಜಸ್ವಿ ರಾಜೀನಾಮೆ ನೀಡಿ ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿತ್ತು.

ತೇಜಸ್ವಿಯ ಕ್ಷಮೆಯಾಚನೆ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, “ಇದೆಂತಹ ಕ್ಷಮೆಯಾಚನೆ? ಯಾರ ವಿರುದ್ಧ ಆರೋಪ ಮಾಡಿದ್ದರೋ ಅವರೇ ಇಲ್ಲದ ಸಂದರ್ಭದಲ್ಲಿ ಕ್ಷಮೆಯಾಚನೆ ಮಾಡಿದ್ದು ಒಂದು ನಾಟಕದಂತೆ ಕಾಣುತ್ತಿದೆ. ಸಂಸದರು ಅವತ್ತು ದಾಳಿ ಮಾಡಿದ್ದು ಕೋಮು ಸಾಮರಸ್ಯ ಹಾಳು ಮಾಡುವ ಪಿತೂರಿ ಹೊಂದಿತ್ತು. ಅವರಿಗೆ ಆ ಘಟನೆ ಬಗ್ಗೆ ನಿಜಕ್ಕೂ ಖೇದವಾಗಿದ್ದರೆ, ಅವರು ಸಾರ್ವಜನಿಕವಾಗಿ ಬಹಿರಂಗ ಕ್ಷಮೆ ಯಾಚಿಸಬೇಕು ಮತ್ತು ಇನ್ನು ಮುಂದೆ ಸಮಾಜದ ಸಾಮರಸ್ಯ ಕದಡುವ ಹೇಳಿಕೆ ನೀಡುವುದಿಲ್ಲ ಎಂದು ವಾಗ್ದಾನ ಮಾಡಬೇಕು. ಹಾಗೆ ಮಾಡದಿದ್ದರೆ, ಈ ಕ್ಷಮೆಯಾಚನೆ ಕೂಡ ಅವರ ಪಿತೂರಿಯ ಒಂಂದು ಭಾಗ ಮತ್ತು ಹೊಸ ನಾಟಕ ಎಂದೇ ಪರಿಗಣಿಸ ಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

ಇಂಥದ್ದೇ ಅಭಿಪ್ರಾಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಮುನ್ನೆಲೆಗೆ ಬರುತ್ತಿವೆ. ಸಂಸದರು ಬಹಿರಂಗ ಕ್ಷಮೆ ಕೇಳಬೇಕು ಎಂಬ ಆಗ್ರಹಗಳು ಕೇಳಿ ಬರುತ್ತಿವೆ. ತೇಜಸ್ವಿ ಅವರ ವಾರ್‌ರೂಮ್ ದಾಳಿ ಯಡಿಯೂರಪ್ಪ ಸರ್ಕಾರವಷ್ಟೇ ಅಲ್ಲ ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆಯ ವೈಫಲ್ಯವನ್ನೇ ಎತ್ತಿ ತೋರಿಸಿತ್ತು.

ಇದನ್ನೂ ಓದಿ: `ನಿಮ್ಮ ಜೋಳಿಗೆ ಎತ್ತಿಕೊಂಡು ಹೊರಟು ಬಿಡಿ!’ – ಪ್ರಧಾನಿ ಮೋದಿಗೆ ಅರುಂಧತಿ ರಾಯ್

‘ಕ್ಷಮಿಸಿ, ಇದು ನನ್ನ ಕಡೆಯಿಂದ ತಪ್ಪಾಗಿದೆ. ನನಗೆ ಒಂದು ಪಟ್ಟಿಯನ್ನು ನೀಡಲಾಯಿತು ಮತ್ತು ನಾನು ಅದನ್ನು ಓದಿದ್ದೇನೆ. ವಾರ್‌ರೂಮ್‌ನಲ್ಲಿ ನಡೆದ ಘಟನೆಯಿಂದ ಬೇಸರವಾಗಿದೆ ಎಂದು ನನಗೆ ತಿಳಿದಿದೆ’ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

“ವಾರ್‌ರೂಂ ದಾಳಿಯ ಸಮಯದಲ್ಲಿ ವಾರ್‌ರೂಮಿನಲ್ಲಿ ಇದ್ದವರು ನನಗೆ ನೀಡಿದ್ದ ಪಟ್ಟಿಯಲ್ಲಿನ ಹೆಸರುಗಳನ್ನು ಸುಮ್ಮನೆ ಓದಿದ್ದೇನೆ. ನನಗೆ ಕೋಮುವಾದಿ ಎನಿಸಿಕೊಳ್ಳುವ ಇರಾದೆ ಇಲ್ಲ. ನಾನು ಓದಿದ ಜನರ ಹೆಸರುಗಳು ಒಂದೇ ಸಮುದಾಯದವರು ಎಂದು ಕೂಡಾ ಗಮನ ಹರಿಸಿರಲಿಲ್ಲ…ಅವರನ್ನು ಹಿಂದೂ ಅಥವಾ ಮುಸ್ಲಿಂ ಎಂದು ನಾನು ನೋಡಲಿಲ್ಲ” ಎಂದು ಅವರು ಹೇಳಿದ್ದಾರೆ.

ಪ್ರಶ್ನೆಗಳು ಇನ್ನೂ ಇವೆ…

ತೇಜಸ್ವಿ ಆ ಪಟ್ಟಿಯನ್ನು ಎಲ್ಲಿಂದ ಪಡೆದರು ಅಥವಾ ಅದನ್ನು ಓದುವ ಮೊದಲು ಅದನ್ನು ಹೇಗೆ ಪರಿಶೀಲಿಸಿದರು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ. ಅವರು ಮಂಗಳವಾರ ಹೆಸರಿಸಿದ 16 ಉದ್ಯೋಗಿಗಳ ಬಳಿ ಕ್ಷಮೆ ಯಾಚಿಸಿಲ್ಲ.

‘ಇದರಲ್ಲಿ ಹೆಚ್ಚಿನವರು 20 ರ ವಯಸ್ಸಿನ ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳು. ಇವರೆಲ್ಲ ಸಮಾಜಸೇವೆಯ ತುಡಿತ ಮತ್ತು ತಾತ್ಕಾಲಿಕ ಆರ್ಥಿಕ ನೆರವಿನ ಕಾರಣಕ್ಕೆ ವಾರ್‌ರೂಮಿಗೆ ಕೆಲಸಕ್ಕೆ ಸೇರಿದವರು’ ಎಂದು ಅವರನ್ನು ನೇಮಕ ಮಾಡಿದ ಹೊರಗುತ್ತಿಗೆ ಕಂಪನಿ ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಹೇಳಿದ್ದಾಗಿ ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಪೊಲೀಸರು ಅವರಿಗೆ ಕ್ಲೀನ್ ಚಿಟ್ ನೀಡುವವರೆಗೂ ವಾರ್‌ರೂಮಿಗೆ ಬರಬಾರದೆಂದು ನಿರ್ಬಂಧ ಹೇರಲಾಗಿದೆ.
ತೇಜಸ್ವಿಯ ದಾಳಿ ನಂತರ ವಾರ್‌ರೂಮ್‌ನಲ್ಲಿ ಕೆಲಸ ಮಾಡುವವರ ನಂಬರ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಉದ್ಯೋಗಿಗಳು ದೂರವಾಣಿಯಲ್ಲಿ ಅಪರಿಚಿತರು ನಿರಂತರ ಕಿರುಕುಳವನ್ನು ಎದುರಿಸುತ್ತಿದ್ದಾರೆ.

ಕೆಲವರು ಅವರ ಮನೆಗೂ ಹೋಗಿ ಆಸ್ಪತ್ರೆಯ ಹಾಸಿಗೆಗಳಿಗೆ ಒತ್ತಾಯಿಸುತ್ತಿದ್ದಾರೆ ಮತ್ತು ಆಸ್ಪತ್ರೆಯ ಹಾಸಿಗೆಗಳನ್ನು ನೀಡಲು ನೀವು ಎಷ್ಟು ಹಣವನ್ನು ತೆಗೆದುಕೊಳ್ಳುತ್ತಿದ್ದೀರಿ ಎಂದು ಕೇಳುತ್ತಿದ್ದಾರೆ. ನಿರಂತರ ಫೋನ್ ಕರೆಗಳಿಂದಾಗಿ ಹಲವಾರು ಉದ್ಯೋಗಿಗಳು ತಮ್ಮ ಫೋನ್ ಸಂಖ್ಯೆಯನ್ನು ನಿಷ್ಕ್ರಿಯಯಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಉದ್ದೇಶಿಸಿ ಮಾತನಾಡಿದ್ದ ತೇಜಸ್ವಿ ಸೂರ್ಯ, “ನನ್ನ ಮೊಬೈಲ್ ನಂಬರ್ ಕೂಡ ಸೋರಿಕೆಯಾಗಿದ್ದು, ನಾನು ಕೂಡ ಬೆದರಿಕೆಗಳನ್ನು ಎದುರಿಸುತ್ತಿದ್ದೇನೆ. ಚಿಂತಿಸಬೇಡಿ, ಇದು ಒಂದು ವಾರದಲ್ಲಿ ಮುಗಿಯುತ್ತದೆ. ನಾನು ನಿಮ್ಮೊಂದಿಗಿದ್ದೇನೆ.. ನಿಮ್ಮ ಸಂಖ್ಯೆಯನ್ನು ಸೋರಿಕೆ ಮಾಡಿದವರಿಗೆ ನಾನು ಪಾಠ ಕಲಿಸುತ್ತೇನೆ” ಎಂದು ಹೇಳಿದ್ದು, ವಾರ್‌ರೂಮ್ ಉದ್ಯೋಗಿಗಳಿಗೆ ಹೊಸ ಸಿಮ್ ಕಾರ್ಡ್‌ಗಳನ್ನು ಕೊಡುವ ಭರವಸೆ ನೀಡಿದ್ದಾರೆ. ಆದರೆ ಅವರು ತಮ್ಮ ಕಚೇರಿಯಿಂದಲೇ ಈ ವಿವರಗಳು ಸೋರಿಕೆಯಾಗಿದೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ.

“ನನ್ನ ಮೂಲಕ ಬಹಳಷ್ಟು ಒಳ್ಳೆಯದು ಸಂಭವಿಸಿದೆ ಎಂಬುದನ್ನು ನೀವು ನೆನಪಿಟ್ಟುಕೊಳ್ಳಬೇಕೆಂದು ನಾನು ಬಯಸುತ್ತೇನೆ. ನಾನು ಜಾತಿವಾದಿ ಅಥವಾ ಕೋಮುವಾದಿ ಅಲ್ಲ. ನಾನು ಜನರಿಗೆ ಒಳ್ಳೆಯದನ್ನು ಮಾಡುತ್ತಿದ್ದೇನೆ. ನನಗೆ ಯಾವುದೇ ಕೆಟ್ಟ ಉದ್ದೇಶಗಳಿಲ್ಲ” ಎಂದು ಅವರು ತಿಳಿಸಿದ್ದಾರೆ ಎಂದು ವಾರ್‌ರೂಂ ಮೂಲಗಳು ತಿಳಿಸಿವೆ.

ಇದನ್ನೂ ಓದಿ:  ಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

ಇತರ ಮೂರು ಬಿಜೆಪಿ ಮುಖಂಡರೊಂದಿಗೆ ವಾರ್‌ರೂಮಿಗೆ ದಾಳಿ ಮಾಡಿದ್ದ ತೇಜಸ್ವಿ ಅದರ ಲೈವ್‌‌ ಪ್ರಸಾರವನ್ನು ಮಾಡಿದ್ದರು. ಆದರೆ ಕ್ಷಮೆಯಾಚನೆ ಸಂದರ್ಭದಲ್ಲಿ ಯಾವುದೇ ಲೈವ್‌‌ ಪ್ರಸಾರ ಇರಲಿಲ್ಲ ಮತ್ತು ವಾರ್‌ರೂಮಿನಲ್ಲಿದ್ದವರಿಗೆ ವೀಡಿಯೊಗಳನ್ನು ಚಿತ್ರೀಕರಿಸದಂತೆ, ಫೋಟೊ ತೆಗೆಯದಂತೆ ಕೋರಲಾಗಿತ್ತು.

ನ್ಯೂಸ್ ಮಿನಿಟ್ ವೆಬ್‌ಸೈಟ್‌‌ ವಾರ್‌ರೂಮಿಲ್ಲಿ ಕೆಲಸ ಮಾಡುವ ಮೂರು ಜನರೊಂದಿಗೆ ಮಾತನಾಡಿದ್ದು, ಅವರೆಲ್ಲರೂ ತಮ್ಮ 16 ಸಹೋದ್ಯೋಗಿಗಳಿಗೆ ಸಂಭವಿಸಿರುವುದು ದುರದೃಷ್ಟಕರ ಮತ್ತು ಅನಗತ್ಯ ಎಂದು ಹೇಳಿದ್ದಾರೆ.

“ನಾವು ಇಲ್ಲಿ ಮುಸ್ಲಿಮರು ಮತ್ತು ಹಿಂದೂಗಳು ಒಟ್ಟಾಗಿ ಕೆಲಸ ಮಾಡುತ್ತೇವೆ. ತೇಜಸ್ವಿ ಹೆಸರಿಸಿದ ಇವರೆಲ್ಲರೂ ಚಿಕ್ಕ ಹುಡುಗರು. ಅವರನ್ನು ಭಯೋತ್ಪಾದಕರು ಎಂದು ಅವರು ಹೇಗೆ ಕರೆಯುತ್ತಾರೆ? ಬಂದೂಕುಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದು ಕೂಡಾ ಈ ಹುಡುಗರಿಗೆ ತಿಳಿದಿಲ್ಲ ಎಂದು ನಾನು ಭಾವಿಸುತ್ತೇನೆ. ತೇಜಸ್ವಿಯ ಈ ಕ್ಷಮೆಯಾಚನೆಯು ನಾಮಕಾವಾಸ್ತೆಗೆ ನಡೆದಿದೆ. ಅವರು ಹುಡುಗರ ಹೆಸರನ್ನು ಓದುವ ಮೂಲಕ ಅವರಿಗೆ ದೊಡ್ಡ ಅನ್ಯಾಯ ಎಸಗಿದ್ದಾರೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಆಧಾರ: ದಿ ನ್ಯೂಸ್ ಮಿನಿಟ್

ಇದನ್ನೂ ಓದಿ: ಬೆಡ್‌‌ಗೆ ಪರದಾಟ; ತನ್ನ ಪತಿಗಾಗಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟಿಸಿದ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...