Homeಕರ್ನಾಟಕಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

ಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ನೀಡಿದ್ದ ತೀರ್ಪಿನನ್ವಯ ಇದ್ದ ನಿರ್ಬಂಧವನ್ನು ರಾಜ್ಯ ಹೈಕೋರ್ಟ್ ತೆರವು ಮಾಡಿದೆ.
ತೇಜಸ್ವಿ ಅವರು ಅಭ್ಯರ್ಥಿ ಎಂದು ಘೋಷಣೆಯಾದ ತಕ್ಷಣ ಕೆಲವರು ಅವರನ್ನು ಟ್ವಿಟ್ಟರ್‍ನಲ್ಲಿ ಅಭಿನಂದಿಸಿದ್ದರು. ಆಗ ಮಹಿಳಾ ಉದ್ಯಮಿಯೊಬ್ಬರು ಅವರಿಗೆ, ಈ ವ್ಯಕ್ತಿಯ ಚಾರಿತ್ರ್ಯ ಸರಿ ಇಲ್ಲ, ಧರ್ಮದ ಕುರಿತು ಮಾತನಾಡುವವರೆಲ್ಲರೂ ಒಳ್ಳೆಯವರೇನೂ ಆಗಿರುವುದಿಲ್ಲ. ಬೇಕಾದರೆ ನಿಮಗೆ ಸಾಕ್ಷಿ ಒದಗಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲೇ ಹೇಳಿದ್ದರು. ಆ ನಂತರ ತನಗೇ ಆತನಿಂದ ಆದ ಮೋಸದ ಬಗ್ಗೆ ಟ್ವೀಟ್ ಮಾಡಿದ್ದರು.

ಇದು ವೈರಲ್ ಆಗಿತ್ತು. ಅಷ್ಟೇ ಅಲ್ಲದೇ, ಬಿಜೆಪಿಯ ವಲಯಗಳಿಂದಲೇ ತೇಜಸ್ವಿಯ ಇನ್ನೂ ಹಲವು ಹಗರಣಗಳ ಕುರಿತ ವಿವರಗಳು ಮತ್ತು ಸ್ಕ್ರೀನ್‍ಷಾಟ್‍ಗಳು, ವಿಡಿಯೋಗಳು ಮಾಧ್ಯಮ ಸಂಸ್ಥೆಗಳಿಗೆ ತಲುಪಿದ್ದವು. ಆದರೆ ಅಷ್ಟರಲ್ಲಿ ತೇಜಸ್ವಿಯವರು ನಗರದ ಸಿವಿಲ್ ಕೋರ್ಟಿನಲ್ಲಿ ತಮ್ಮ ವಿರುದ್ಧ ಈ ಪ್ರಕರಣ ಅಥವಾ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸಬಾರದೆಂದು ನಿರ್ಬಂಧ ಆದೇಶ ತಂದಿದ್ದರು.
ಈ ನಿರ್ಬಂಧ ಆದೇಶ ಸಹಾ ಟೀಕೆಗೊಳಗಾಗಿತ್ತು. ಇಂಡಿಯನ್ ಎಕ್ಸ್‍ಪ್ರೆಸ್ ಮತ್ತು ನಂತರ ಡೆಕ್ಕನ್ ಹೆರಾಲ್ಡ್ ಪ್ರಜಾವಾಣಿಗಳು ಅದರ ಬಗ್ಗೆ ಸಂಪಾದಕೀಯಗಳನ್ನೂ ಬರೆದಿದ್ದವು.

ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆಯ ತ್ರಿಲೋಚನ ಶಾಸ್ತ್ರಿಯವರು ಹಾಕಿದ ಮೊಕದ್ದಮೆಯ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಏನು ಹೇಳಲಾಗಿದೆ?
ಅರ್ಜಿದಾರರ ವಾದದ ಅಂಶಗಳು ಸರಿಯಾಗಿವೆ

ಮತದಾರರು ಸ್ಪರ್ಧಿಸಿರುವ ಅಭ್ಯರ್ಥಿ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕುಳ್ಳವರಾಗಿದ್ದಾರೆ.

ಸಂವಿಧಾನದ 19(1)ಎ ಕಲಂ ನಮಗೆ ‘ಅಭಿವ್ಯಕ್ತಿ ಸ್ವಾತಂತ್ರ್ಯ’ವನ್ನು ಕೊಟ್ಟಿದೆ.

ಮಾನಹಾನಿ ಸುದ್ದಿ ಪ್ರಕಟವಾದ ನಂತರವೇ ಅದು ಹೌದೇ ಅಲ್ಲವೇ ಎಂಬುದನ್ನು ನಿರ್ಧರಿಸಲು ಸಾಧ್ಯ.

ಆ ರೀತಿ ಮಾನಹಾನಿ ಆಗಿದೆ ಎಂದು, ಅಂತಹ ಕ್ರಿಯೆ ನಡೆದ ನಂತರ ಸಂಬಂಧಪಟ್ಟವರಿಗೆ ಅನಿಸಿದರೆ ಅವರು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಬಹುದು.

ಈ ಹಂತದಲ್ಲಿ ಪ್ರತಿವಾದಿಗೆ ಮಾನಹಾನಿ ಸುದ್ದಿ ಪ್ರಕಟವಾಗಿದೆ ಎಂದರೆ ಅದನ್ನು ಚುನಾವಣಾ ಆಯೋಗದ ಮುಂದೆ ತೆಗೆದುಕೊಂಡು ಹೋಗಿ ಪರಿಹಾರ ಪಡೆಯಬಹುದು.

ಈ ತೀರ್ಪಿನ ಮುಖಾಂತರ ತೇಜಸ್ವಿಯವರ ಕುರಿತ ಇತರ ವರದಿಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದಾಗಿದೆ. ಸ್ವತಃ ವಕೀಲರಾಗಿರುವ ತೇಜಸ್ವಿ ವಾಟ್ಸಾಪ್, ಗೂಗಲ್, ಫೇಸ್‍ಬುಕ್ ಮತ್ತು ಯಾಹೂ ಸಂಸ್ಥೆಗಳ ಮೇಲೂ ಇಂತಹ ಮೊಕದ್ದಮೆಯನ್ನು ಹೂಡಿ ಗೇಲಿಗೊಳಗಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಂತೂ ಇದು ಬಹಳ ತಮಾಷೆಯ ಸಂಗತಿಯಾಗಿತ್ತು.
ಅಂತಿಮವಾಗಿ ತ್ರಿಲೋಚನಾ ಶಾಸ್ತ್ರಿಯವರು ಹೂಡಿದ ಮೊಕದ್ದಮೆಯ ಕಾರಣದಿಂದ ಸದರಿ ಆದೇಶವು ರದ್ದಾಗಿದೆ. ಈಗ ತೇಜಸ್ವಿಯವರ ಮುಂದಿನ ನಡೆಯೇನು ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...