Homeಕರ್ನಾಟಕಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

ಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ನೀಡಿದ್ದ ತೀರ್ಪಿನನ್ವಯ ಇದ್ದ ನಿರ್ಬಂಧವನ್ನು ರಾಜ್ಯ ಹೈಕೋರ್ಟ್ ತೆರವು ಮಾಡಿದೆ.
ತೇಜಸ್ವಿ ಅವರು ಅಭ್ಯರ್ಥಿ ಎಂದು ಘೋಷಣೆಯಾದ ತಕ್ಷಣ ಕೆಲವರು ಅವರನ್ನು ಟ್ವಿಟ್ಟರ್‍ನಲ್ಲಿ ಅಭಿನಂದಿಸಿದ್ದರು. ಆಗ ಮಹಿಳಾ ಉದ್ಯಮಿಯೊಬ್ಬರು ಅವರಿಗೆ, ಈ ವ್ಯಕ್ತಿಯ ಚಾರಿತ್ರ್ಯ ಸರಿ ಇಲ್ಲ, ಧರ್ಮದ ಕುರಿತು ಮಾತನಾಡುವವರೆಲ್ಲರೂ ಒಳ್ಳೆಯವರೇನೂ ಆಗಿರುವುದಿಲ್ಲ. ಬೇಕಾದರೆ ನಿಮಗೆ ಸಾಕ್ಷಿ ಒದಗಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲೇ ಹೇಳಿದ್ದರು. ಆ ನಂತರ ತನಗೇ ಆತನಿಂದ ಆದ ಮೋಸದ ಬಗ್ಗೆ ಟ್ವೀಟ್ ಮಾಡಿದ್ದರು.

ಇದು ವೈರಲ್ ಆಗಿತ್ತು. ಅಷ್ಟೇ ಅಲ್ಲದೇ, ಬಿಜೆಪಿಯ ವಲಯಗಳಿಂದಲೇ ತೇಜಸ್ವಿಯ ಇನ್ನೂ ಹಲವು ಹಗರಣಗಳ ಕುರಿತ ವಿವರಗಳು ಮತ್ತು ಸ್ಕ್ರೀನ್‍ಷಾಟ್‍ಗಳು, ವಿಡಿಯೋಗಳು ಮಾಧ್ಯಮ ಸಂಸ್ಥೆಗಳಿಗೆ ತಲುಪಿದ್ದವು. ಆದರೆ ಅಷ್ಟರಲ್ಲಿ ತೇಜಸ್ವಿಯವರು ನಗರದ ಸಿವಿಲ್ ಕೋರ್ಟಿನಲ್ಲಿ ತಮ್ಮ ವಿರುದ್ಧ ಈ ಪ್ರಕರಣ ಅಥವಾ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸಬಾರದೆಂದು ನಿರ್ಬಂಧ ಆದೇಶ ತಂದಿದ್ದರು.
ಈ ನಿರ್ಬಂಧ ಆದೇಶ ಸಹಾ ಟೀಕೆಗೊಳಗಾಗಿತ್ತು. ಇಂಡಿಯನ್ ಎಕ್ಸ್‍ಪ್ರೆಸ್ ಮತ್ತು ನಂತರ ಡೆಕ್ಕನ್ ಹೆರಾಲ್ಡ್ ಪ್ರಜಾವಾಣಿಗಳು ಅದರ ಬಗ್ಗೆ ಸಂಪಾದಕೀಯಗಳನ್ನೂ ಬರೆದಿದ್ದವು.

ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆಯ ತ್ರಿಲೋಚನ ಶಾಸ್ತ್ರಿಯವರು ಹಾಕಿದ ಮೊಕದ್ದಮೆಯ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಏನು ಹೇಳಲಾಗಿದೆ?
ಅರ್ಜಿದಾರರ ವಾದದ ಅಂಶಗಳು ಸರಿಯಾಗಿವೆ

ಮತದಾರರು ಸ್ಪರ್ಧಿಸಿರುವ ಅಭ್ಯರ್ಥಿ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕುಳ್ಳವರಾಗಿದ್ದಾರೆ.

ಸಂವಿಧಾನದ 19(1)ಎ ಕಲಂ ನಮಗೆ ‘ಅಭಿವ್ಯಕ್ತಿ ಸ್ವಾತಂತ್ರ್ಯ’ವನ್ನು ಕೊಟ್ಟಿದೆ.

ಮಾನಹಾನಿ ಸುದ್ದಿ ಪ್ರಕಟವಾದ ನಂತರವೇ ಅದು ಹೌದೇ ಅಲ್ಲವೇ ಎಂಬುದನ್ನು ನಿರ್ಧರಿಸಲು ಸಾಧ್ಯ.

ಆ ರೀತಿ ಮಾನಹಾನಿ ಆಗಿದೆ ಎಂದು, ಅಂತಹ ಕ್ರಿಯೆ ನಡೆದ ನಂತರ ಸಂಬಂಧಪಟ್ಟವರಿಗೆ ಅನಿಸಿದರೆ ಅವರು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಬಹುದು.

ಈ ಹಂತದಲ್ಲಿ ಪ್ರತಿವಾದಿಗೆ ಮಾನಹಾನಿ ಸುದ್ದಿ ಪ್ರಕಟವಾಗಿದೆ ಎಂದರೆ ಅದನ್ನು ಚುನಾವಣಾ ಆಯೋಗದ ಮುಂದೆ ತೆಗೆದುಕೊಂಡು ಹೋಗಿ ಪರಿಹಾರ ಪಡೆಯಬಹುದು.

ಈ ತೀರ್ಪಿನ ಮುಖಾಂತರ ತೇಜಸ್ವಿಯವರ ಕುರಿತ ಇತರ ವರದಿಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದಾಗಿದೆ. ಸ್ವತಃ ವಕೀಲರಾಗಿರುವ ತೇಜಸ್ವಿ ವಾಟ್ಸಾಪ್, ಗೂಗಲ್, ಫೇಸ್‍ಬುಕ್ ಮತ್ತು ಯಾಹೂ ಸಂಸ್ಥೆಗಳ ಮೇಲೂ ಇಂತಹ ಮೊಕದ್ದಮೆಯನ್ನು ಹೂಡಿ ಗೇಲಿಗೊಳಗಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಂತೂ ಇದು ಬಹಳ ತಮಾಷೆಯ ಸಂಗತಿಯಾಗಿತ್ತು.
ಅಂತಿಮವಾಗಿ ತ್ರಿಲೋಚನಾ ಶಾಸ್ತ್ರಿಯವರು ಹೂಡಿದ ಮೊಕದ್ದಮೆಯ ಕಾರಣದಿಂದ ಸದರಿ ಆದೇಶವು ರದ್ದಾಗಿದೆ. ಈಗ ತೇಜಸ್ವಿಯವರ ಮುಂದಿನ ನಡೆಯೇನು ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...