Homeಕರ್ನಾಟಕಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

ಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ನೀಡಿದ್ದ ತೀರ್ಪಿನನ್ವಯ ಇದ್ದ ನಿರ್ಬಂಧವನ್ನು ರಾಜ್ಯ ಹೈಕೋರ್ಟ್ ತೆರವು ಮಾಡಿದೆ.
ತೇಜಸ್ವಿ ಅವರು ಅಭ್ಯರ್ಥಿ ಎಂದು ಘೋಷಣೆಯಾದ ತಕ್ಷಣ ಕೆಲವರು ಅವರನ್ನು ಟ್ವಿಟ್ಟರ್‍ನಲ್ಲಿ ಅಭಿನಂದಿಸಿದ್ದರು. ಆಗ ಮಹಿಳಾ ಉದ್ಯಮಿಯೊಬ್ಬರು ಅವರಿಗೆ, ಈ ವ್ಯಕ್ತಿಯ ಚಾರಿತ್ರ್ಯ ಸರಿ ಇಲ್ಲ, ಧರ್ಮದ ಕುರಿತು ಮಾತನಾಡುವವರೆಲ್ಲರೂ ಒಳ್ಳೆಯವರೇನೂ ಆಗಿರುವುದಿಲ್ಲ. ಬೇಕಾದರೆ ನಿಮಗೆ ಸಾಕ್ಷಿ ಒದಗಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲೇ ಹೇಳಿದ್ದರು. ಆ ನಂತರ ತನಗೇ ಆತನಿಂದ ಆದ ಮೋಸದ ಬಗ್ಗೆ ಟ್ವೀಟ್ ಮಾಡಿದ್ದರು.

ಇದು ವೈರಲ್ ಆಗಿತ್ತು. ಅಷ್ಟೇ ಅಲ್ಲದೇ, ಬಿಜೆಪಿಯ ವಲಯಗಳಿಂದಲೇ ತೇಜಸ್ವಿಯ ಇನ್ನೂ ಹಲವು ಹಗರಣಗಳ ಕುರಿತ ವಿವರಗಳು ಮತ್ತು ಸ್ಕ್ರೀನ್‍ಷಾಟ್‍ಗಳು, ವಿಡಿಯೋಗಳು ಮಾಧ್ಯಮ ಸಂಸ್ಥೆಗಳಿಗೆ ತಲುಪಿದ್ದವು. ಆದರೆ ಅಷ್ಟರಲ್ಲಿ ತೇಜಸ್ವಿಯವರು ನಗರದ ಸಿವಿಲ್ ಕೋರ್ಟಿನಲ್ಲಿ ತಮ್ಮ ವಿರುದ್ಧ ಈ ಪ್ರಕರಣ ಅಥವಾ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸಬಾರದೆಂದು ನಿರ್ಬಂಧ ಆದೇಶ ತಂದಿದ್ದರು.
ಈ ನಿರ್ಬಂಧ ಆದೇಶ ಸಹಾ ಟೀಕೆಗೊಳಗಾಗಿತ್ತು. ಇಂಡಿಯನ್ ಎಕ್ಸ್‍ಪ್ರೆಸ್ ಮತ್ತು ನಂತರ ಡೆಕ್ಕನ್ ಹೆರಾಲ್ಡ್ ಪ್ರಜಾವಾಣಿಗಳು ಅದರ ಬಗ್ಗೆ ಸಂಪಾದಕೀಯಗಳನ್ನೂ ಬರೆದಿದ್ದವು.

ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆಯ ತ್ರಿಲೋಚನ ಶಾಸ್ತ್ರಿಯವರು ಹಾಕಿದ ಮೊಕದ್ದಮೆಯ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಏನು ಹೇಳಲಾಗಿದೆ?
ಅರ್ಜಿದಾರರ ವಾದದ ಅಂಶಗಳು ಸರಿಯಾಗಿವೆ

ಮತದಾರರು ಸ್ಪರ್ಧಿಸಿರುವ ಅಭ್ಯರ್ಥಿ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕುಳ್ಳವರಾಗಿದ್ದಾರೆ.

ಸಂವಿಧಾನದ 19(1)ಎ ಕಲಂ ನಮಗೆ ‘ಅಭಿವ್ಯಕ್ತಿ ಸ್ವಾತಂತ್ರ್ಯ’ವನ್ನು ಕೊಟ್ಟಿದೆ.

ಮಾನಹಾನಿ ಸುದ್ದಿ ಪ್ರಕಟವಾದ ನಂತರವೇ ಅದು ಹೌದೇ ಅಲ್ಲವೇ ಎಂಬುದನ್ನು ನಿರ್ಧರಿಸಲು ಸಾಧ್ಯ.

ಆ ರೀತಿ ಮಾನಹಾನಿ ಆಗಿದೆ ಎಂದು, ಅಂತಹ ಕ್ರಿಯೆ ನಡೆದ ನಂತರ ಸಂಬಂಧಪಟ್ಟವರಿಗೆ ಅನಿಸಿದರೆ ಅವರು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಬಹುದು.

ಈ ಹಂತದಲ್ಲಿ ಪ್ರತಿವಾದಿಗೆ ಮಾನಹಾನಿ ಸುದ್ದಿ ಪ್ರಕಟವಾಗಿದೆ ಎಂದರೆ ಅದನ್ನು ಚುನಾವಣಾ ಆಯೋಗದ ಮುಂದೆ ತೆಗೆದುಕೊಂಡು ಹೋಗಿ ಪರಿಹಾರ ಪಡೆಯಬಹುದು.

ಈ ತೀರ್ಪಿನ ಮುಖಾಂತರ ತೇಜಸ್ವಿಯವರ ಕುರಿತ ಇತರ ವರದಿಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದಾಗಿದೆ. ಸ್ವತಃ ವಕೀಲರಾಗಿರುವ ತೇಜಸ್ವಿ ವಾಟ್ಸಾಪ್, ಗೂಗಲ್, ಫೇಸ್‍ಬುಕ್ ಮತ್ತು ಯಾಹೂ ಸಂಸ್ಥೆಗಳ ಮೇಲೂ ಇಂತಹ ಮೊಕದ್ದಮೆಯನ್ನು ಹೂಡಿ ಗೇಲಿಗೊಳಗಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಂತೂ ಇದು ಬಹಳ ತಮಾಷೆಯ ಸಂಗತಿಯಾಗಿತ್ತು.
ಅಂತಿಮವಾಗಿ ತ್ರಿಲೋಚನಾ ಶಾಸ್ತ್ರಿಯವರು ಹೂಡಿದ ಮೊಕದ್ದಮೆಯ ಕಾರಣದಿಂದ ಸದರಿ ಆದೇಶವು ರದ್ದಾಗಿದೆ. ಈಗ ತೇಜಸ್ವಿಯವರ ಮುಂದಿನ ನಡೆಯೇನು ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...