Homeಕರ್ನಾಟಕಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

ಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ನೀಡಿದ್ದ ತೀರ್ಪಿನನ್ವಯ ಇದ್ದ ನಿರ್ಬಂಧವನ್ನು ರಾಜ್ಯ ಹೈಕೋರ್ಟ್ ತೆರವು ಮಾಡಿದೆ.
ತೇಜಸ್ವಿ ಅವರು ಅಭ್ಯರ್ಥಿ ಎಂದು ಘೋಷಣೆಯಾದ ತಕ್ಷಣ ಕೆಲವರು ಅವರನ್ನು ಟ್ವಿಟ್ಟರ್‍ನಲ್ಲಿ ಅಭಿನಂದಿಸಿದ್ದರು. ಆಗ ಮಹಿಳಾ ಉದ್ಯಮಿಯೊಬ್ಬರು ಅವರಿಗೆ, ಈ ವ್ಯಕ್ತಿಯ ಚಾರಿತ್ರ್ಯ ಸರಿ ಇಲ್ಲ, ಧರ್ಮದ ಕುರಿತು ಮಾತನಾಡುವವರೆಲ್ಲರೂ ಒಳ್ಳೆಯವರೇನೂ ಆಗಿರುವುದಿಲ್ಲ. ಬೇಕಾದರೆ ನಿಮಗೆ ಸಾಕ್ಷಿ ಒದಗಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲೇ ಹೇಳಿದ್ದರು. ಆ ನಂತರ ತನಗೇ ಆತನಿಂದ ಆದ ಮೋಸದ ಬಗ್ಗೆ ಟ್ವೀಟ್ ಮಾಡಿದ್ದರು.

ಇದು ವೈರಲ್ ಆಗಿತ್ತು. ಅಷ್ಟೇ ಅಲ್ಲದೇ, ಬಿಜೆಪಿಯ ವಲಯಗಳಿಂದಲೇ ತೇಜಸ್ವಿಯ ಇನ್ನೂ ಹಲವು ಹಗರಣಗಳ ಕುರಿತ ವಿವರಗಳು ಮತ್ತು ಸ್ಕ್ರೀನ್‍ಷಾಟ್‍ಗಳು, ವಿಡಿಯೋಗಳು ಮಾಧ್ಯಮ ಸಂಸ್ಥೆಗಳಿಗೆ ತಲುಪಿದ್ದವು. ಆದರೆ ಅಷ್ಟರಲ್ಲಿ ತೇಜಸ್ವಿಯವರು ನಗರದ ಸಿವಿಲ್ ಕೋರ್ಟಿನಲ್ಲಿ ತಮ್ಮ ವಿರುದ್ಧ ಈ ಪ್ರಕರಣ ಅಥವಾ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸಬಾರದೆಂದು ನಿರ್ಬಂಧ ಆದೇಶ ತಂದಿದ್ದರು.
ಈ ನಿರ್ಬಂಧ ಆದೇಶ ಸಹಾ ಟೀಕೆಗೊಳಗಾಗಿತ್ತು. ಇಂಡಿಯನ್ ಎಕ್ಸ್‍ಪ್ರೆಸ್ ಮತ್ತು ನಂತರ ಡೆಕ್ಕನ್ ಹೆರಾಲ್ಡ್ ಪ್ರಜಾವಾಣಿಗಳು ಅದರ ಬಗ್ಗೆ ಸಂಪಾದಕೀಯಗಳನ್ನೂ ಬರೆದಿದ್ದವು.

ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆಯ ತ್ರಿಲೋಚನ ಶಾಸ್ತ್ರಿಯವರು ಹಾಕಿದ ಮೊಕದ್ದಮೆಯ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಏನು ಹೇಳಲಾಗಿದೆ?
ಅರ್ಜಿದಾರರ ವಾದದ ಅಂಶಗಳು ಸರಿಯಾಗಿವೆ

ಮತದಾರರು ಸ್ಪರ್ಧಿಸಿರುವ ಅಭ್ಯರ್ಥಿ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕುಳ್ಳವರಾಗಿದ್ದಾರೆ.

ಸಂವಿಧಾನದ 19(1)ಎ ಕಲಂ ನಮಗೆ ‘ಅಭಿವ್ಯಕ್ತಿ ಸ್ವಾತಂತ್ರ್ಯ’ವನ್ನು ಕೊಟ್ಟಿದೆ.

ಮಾನಹಾನಿ ಸುದ್ದಿ ಪ್ರಕಟವಾದ ನಂತರವೇ ಅದು ಹೌದೇ ಅಲ್ಲವೇ ಎಂಬುದನ್ನು ನಿರ್ಧರಿಸಲು ಸಾಧ್ಯ.

ಆ ರೀತಿ ಮಾನಹಾನಿ ಆಗಿದೆ ಎಂದು, ಅಂತಹ ಕ್ರಿಯೆ ನಡೆದ ನಂತರ ಸಂಬಂಧಪಟ್ಟವರಿಗೆ ಅನಿಸಿದರೆ ಅವರು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಬಹುದು.

ಈ ಹಂತದಲ್ಲಿ ಪ್ರತಿವಾದಿಗೆ ಮಾನಹಾನಿ ಸುದ್ದಿ ಪ್ರಕಟವಾಗಿದೆ ಎಂದರೆ ಅದನ್ನು ಚುನಾವಣಾ ಆಯೋಗದ ಮುಂದೆ ತೆಗೆದುಕೊಂಡು ಹೋಗಿ ಪರಿಹಾರ ಪಡೆಯಬಹುದು.

ಈ ತೀರ್ಪಿನ ಮುಖಾಂತರ ತೇಜಸ್ವಿಯವರ ಕುರಿತ ಇತರ ವರದಿಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದಾಗಿದೆ. ಸ್ವತಃ ವಕೀಲರಾಗಿರುವ ತೇಜಸ್ವಿ ವಾಟ್ಸಾಪ್, ಗೂಗಲ್, ಫೇಸ್‍ಬುಕ್ ಮತ್ತು ಯಾಹೂ ಸಂಸ್ಥೆಗಳ ಮೇಲೂ ಇಂತಹ ಮೊಕದ್ದಮೆಯನ್ನು ಹೂಡಿ ಗೇಲಿಗೊಳಗಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಂತೂ ಇದು ಬಹಳ ತಮಾಷೆಯ ಸಂಗತಿಯಾಗಿತ್ತು.
ಅಂತಿಮವಾಗಿ ತ್ರಿಲೋಚನಾ ಶಾಸ್ತ್ರಿಯವರು ಹೂಡಿದ ಮೊಕದ್ದಮೆಯ ಕಾರಣದಿಂದ ಸದರಿ ಆದೇಶವು ರದ್ದಾಗಿದೆ. ಈಗ ತೇಜಸ್ವಿಯವರ ಮುಂದಿನ ನಡೆಯೇನು ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...