Homeಕರ್ನಾಟಕಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ...

ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

- Advertisement -
- Advertisement -

ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ ಅದನ್ನು ಬಹಿರಂಗ ಪಡಿಸಿದ್ದೇನೆ ಎಂದು ಮಾಧ್ಯಮಗಳ ಮುಂದೆ ಒಂದು ಸಮುದಾಯದ ಜನರ ಪಟ್ಟಿ ಓದಿ ಟೀಕೆಗೆ ಒಳಗಾಗಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತೆ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಿ ಎಂಬ ವಿಚಾರದಲ್ಲಿ ಜನರ ಟೀಕೆಗೆ ಗುರಿಯಾಗಿದ್ದಾರೆ.

ದೇಶವು ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಬಿಕ್ಕಟ್ಟಿನ ಮಧ್ಯೆ, ಲಸಿಕೆ ಇಲ್ಲದಿರುವುದು ಒಂದು. ಲಸಿಕೆ ಲಭ್ಯವಿಲ್ಲದ ಬಗ್ಗೆ, ಪೂರೈಕೆ ಬೇಕು ಎಂದು ರಾಜ್ಯಗಳು ಕೇಂದ್ರವನ್ನು ಒತ್ತಾಯಿಸುತ್ತಿವೆ. ಇವುಗಳ ಮಧ್ಯೆ ಸಂಸದ ತೇಜಸ್ವಿ ಸೂರ್ಯ, ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಪಡೆದುಕೊಳ್ಳಿ ಎಂದು ಪ್ರಚಾರ ನಡೆಸಿದ್ದಾರೆ. ಈ ಬ್ಯಾನರ್‌ಗಳು ಜಯನಗರದ ಮೈದಾನದಲ್ಲಿ ಹಾಕಲಾಗಿವೆ.

ರಾಜ್ಯದಲ್ಲಿ ಲಸಿಕೆ ರಾಜಕೀಯ ಮುಂದುವರೆದಿದ್ದು, ‘ತೇಜಸ್ವಿ ಸೂರ್ಯ ಕಚೇರಿಯಿಂದ ಬೆಂಬಲಿತವಾಗಿದೆ’ ಎಂಬ ಪೋಸ್ಟರ್ ಜಯನಗರದ ಬಿಬಿಎಂಪಿ ಕೇಂದ್ರದ ಪಕ್ಕದಲ್ಲಿ ಕಾಣಿಸಿಕೊಂಡಿವೆ. ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ 900 ರೂಪಾಯಿಗೆ ಲಸಿಕೆ ನೀಡಲಾಗುತ್ತದೆ ಎಂಬ ಬ್ಯಾನರ್‌ಗಳು ಕಾಣಿಸಿಕೊಂಡಿವೆ. ಎಲ್ಲಾ ಬ್ಯಾನರ್‌ಗಳಲ್ಲಿಯೂ ಸಂಸದ ತೇಜಸ್ವಿ ಸೂರ್ಯ ಬೆಂಬಲಿತ ಎಂಬ ಬರಹ ಮತ್ತು ಅವರ ಫೋಟೋ ಹಾಕಲಾಗಿದೆ. ಈ ಪೋಸ್ಟರ್‌ಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಂ ಪಟ್ಟಿ: ಸಂತ್ರಸ್ತರು ಆರೋಪ ಮುಕ್ತರಾದರೂ ಇನ್ನೂ ಮರಳಿ ಸಿಗದ ಉದ್ಯೋಗ

ಹಲವು ನೆಟ್ಟಿಗರು ತಮ್ಮ ಖಾತೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಇರುವ ಬ್ಯಾನರ್‌ಗಳನ್ನು ಹಂಚಿಕೊಂಡು, ಇಂತಹ ರಾಜಕಾರಣ ಬಿಡಿ, ಜನರು ಲಸಿಕೆ ಇಲ್ಲದೆ ಆತಂಕದಲ್ಲಿರುವಾಗ ಖಾಸಗಿ ಆಸ್ಪತ್ರೆಯ ಲಸಿಕೆ ಅಭಿಯಾನ ಹೇಗೆ ಬೆಂಬಲಿಸುತ್ತಿರಿ ಎಂದು ಪ್ರಶ್ನಿಸಿದ್ದಾರೆ.

 

“ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ 900 ರೂಪಾಯಿ ತೆಗೆದುಕೊಳ್ಳುವ ಮೂಲಕ ಲಸಿಕೆ ಹಾಕುತ್ತಾರೆ. ಸಂಪೂರ್ಣ ಕಾರ್ಯಕ್ರಮದ ಕ್ರೆಡಿಟ್ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೆಗೆದುಕೊಳ್ಳುತ್ತಾರೆ. ಬಿಬಿಎಂಪಿಯಲ್ಲಿ ಲಸಿಕೆ ಇಲ್ಲದಿದ್ದಾಗ ಖಾಸಗಿ ಆಸ್ಪತ್ರೆಯನ್ನು ಸಂಸದರು ಹೇಗೆ ಉತ್ತೇಜಿಸಬಹುದು..? ಈ ಕೆಲಸಕ್ಕೆ ಅವರು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ..? ವಾಸವಿ ಆಸ್ಪತ್ರೆ ಲಸಿಕೆ ಖರೀದಿ ಸರಕುಪಟ್ಟಿ ತೋರಿಸಬೇಕು” ಎಂದು ಭೂಷಣ್ ಎಂಬುವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

“ತೇಜಸ್ವಿ ಸೂರ್ಯನಂತಹ ಬಿಜೆಪಿ ಸಂಸದರು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು ಮತ್ತು ಪ್ರತಿ ಡೋಸ್‌ಗೆ 900 ರೂಪಾಯಿ ಶುಲ್ಕ ವಿಧಿಸಬಹುದು. ಆದರೆ ಕಾಂಗ್ರೆಸ್ ಸಂಸದರು, ಶಾಸಕರು, ಸಂಸದರು, ಎಂಎಲ್‌ಎಡಿಎಸ್ ಮತ್ತು ಪಾರ್ಟಿ ಫಂಡ್‌ಗಳನ್ನು ಬಳಸಿಕೊಂಡು ಲಸಿಕೆ ಖರೀದಿಸಲು ಸರ್ಕಾರ ಏಕೆ ಅವಕಾಶ ನೀಡುತ್ತಿಲ್ಲ..? ಈ ಪಕ್ಷಪಾತ ಏಕೆ..?” ಎಂದು ಕಾಂಗ್ರೆಸ್ ಯುವ ನಾಯಕ ಶ್ರೀವತ್ಸಾ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತೇಜಸ್ವಿ ಸೂರ್ಯ ಒಬ್ಬ ಗ್ರಾಮ ಪಂಚಾಯತಿ ಸದಸ್ಯನಾಗಿರಲಿಕ್ಕೂ ನಾಲಾಯಕ್.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...