Homeಕರ್ನಾಟಕಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ...

ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

- Advertisement -
- Advertisement -

ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ ಅದನ್ನು ಬಹಿರಂಗ ಪಡಿಸಿದ್ದೇನೆ ಎಂದು ಮಾಧ್ಯಮಗಳ ಮುಂದೆ ಒಂದು ಸಮುದಾಯದ ಜನರ ಪಟ್ಟಿ ಓದಿ ಟೀಕೆಗೆ ಒಳಗಾಗಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತೆ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಿ ಎಂಬ ವಿಚಾರದಲ್ಲಿ ಜನರ ಟೀಕೆಗೆ ಗುರಿಯಾಗಿದ್ದಾರೆ.

ದೇಶವು ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಬಿಕ್ಕಟ್ಟಿನ ಮಧ್ಯೆ, ಲಸಿಕೆ ಇಲ್ಲದಿರುವುದು ಒಂದು. ಲಸಿಕೆ ಲಭ್ಯವಿಲ್ಲದ ಬಗ್ಗೆ, ಪೂರೈಕೆ ಬೇಕು ಎಂದು ರಾಜ್ಯಗಳು ಕೇಂದ್ರವನ್ನು ಒತ್ತಾಯಿಸುತ್ತಿವೆ. ಇವುಗಳ ಮಧ್ಯೆ ಸಂಸದ ತೇಜಸ್ವಿ ಸೂರ್ಯ, ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಪಡೆದುಕೊಳ್ಳಿ ಎಂದು ಪ್ರಚಾರ ನಡೆಸಿದ್ದಾರೆ. ಈ ಬ್ಯಾನರ್‌ಗಳು ಜಯನಗರದ ಮೈದಾನದಲ್ಲಿ ಹಾಕಲಾಗಿವೆ.

ರಾಜ್ಯದಲ್ಲಿ ಲಸಿಕೆ ರಾಜಕೀಯ ಮುಂದುವರೆದಿದ್ದು, ‘ತೇಜಸ್ವಿ ಸೂರ್ಯ ಕಚೇರಿಯಿಂದ ಬೆಂಬಲಿತವಾಗಿದೆ’ ಎಂಬ ಪೋಸ್ಟರ್ ಜಯನಗರದ ಬಿಬಿಎಂಪಿ ಕೇಂದ್ರದ ಪಕ್ಕದಲ್ಲಿ ಕಾಣಿಸಿಕೊಂಡಿವೆ. ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ 900 ರೂಪಾಯಿಗೆ ಲಸಿಕೆ ನೀಡಲಾಗುತ್ತದೆ ಎಂಬ ಬ್ಯಾನರ್‌ಗಳು ಕಾಣಿಸಿಕೊಂಡಿವೆ. ಎಲ್ಲಾ ಬ್ಯಾನರ್‌ಗಳಲ್ಲಿಯೂ ಸಂಸದ ತೇಜಸ್ವಿ ಸೂರ್ಯ ಬೆಂಬಲಿತ ಎಂಬ ಬರಹ ಮತ್ತು ಅವರ ಫೋಟೋ ಹಾಕಲಾಗಿದೆ. ಈ ಪೋಸ್ಟರ್‌ಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಂ ಪಟ್ಟಿ: ಸಂತ್ರಸ್ತರು ಆರೋಪ ಮುಕ್ತರಾದರೂ ಇನ್ನೂ ಮರಳಿ ಸಿಗದ ಉದ್ಯೋಗ

ಹಲವು ನೆಟ್ಟಿಗರು ತಮ್ಮ ಖಾತೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಇರುವ ಬ್ಯಾನರ್‌ಗಳನ್ನು ಹಂಚಿಕೊಂಡು, ಇಂತಹ ರಾಜಕಾರಣ ಬಿಡಿ, ಜನರು ಲಸಿಕೆ ಇಲ್ಲದೆ ಆತಂಕದಲ್ಲಿರುವಾಗ ಖಾಸಗಿ ಆಸ್ಪತ್ರೆಯ ಲಸಿಕೆ ಅಭಿಯಾನ ಹೇಗೆ ಬೆಂಬಲಿಸುತ್ತಿರಿ ಎಂದು ಪ್ರಶ್ನಿಸಿದ್ದಾರೆ.

 

“ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ 900 ರೂಪಾಯಿ ತೆಗೆದುಕೊಳ್ಳುವ ಮೂಲಕ ಲಸಿಕೆ ಹಾಕುತ್ತಾರೆ. ಸಂಪೂರ್ಣ ಕಾರ್ಯಕ್ರಮದ ಕ್ರೆಡಿಟ್ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೆಗೆದುಕೊಳ್ಳುತ್ತಾರೆ. ಬಿಬಿಎಂಪಿಯಲ್ಲಿ ಲಸಿಕೆ ಇಲ್ಲದಿದ್ದಾಗ ಖಾಸಗಿ ಆಸ್ಪತ್ರೆಯನ್ನು ಸಂಸದರು ಹೇಗೆ ಉತ್ತೇಜಿಸಬಹುದು..? ಈ ಕೆಲಸಕ್ಕೆ ಅವರು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ..? ವಾಸವಿ ಆಸ್ಪತ್ರೆ ಲಸಿಕೆ ಖರೀದಿ ಸರಕುಪಟ್ಟಿ ತೋರಿಸಬೇಕು” ಎಂದು ಭೂಷಣ್ ಎಂಬುವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

“ತೇಜಸ್ವಿ ಸೂರ್ಯನಂತಹ ಬಿಜೆಪಿ ಸಂಸದರು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು ಮತ್ತು ಪ್ರತಿ ಡೋಸ್‌ಗೆ 900 ರೂಪಾಯಿ ಶುಲ್ಕ ವಿಧಿಸಬಹುದು. ಆದರೆ ಕಾಂಗ್ರೆಸ್ ಸಂಸದರು, ಶಾಸಕರು, ಸಂಸದರು, ಎಂಎಲ್‌ಎಡಿಎಸ್ ಮತ್ತು ಪಾರ್ಟಿ ಫಂಡ್‌ಗಳನ್ನು ಬಳಸಿಕೊಂಡು ಲಸಿಕೆ ಖರೀದಿಸಲು ಸರ್ಕಾರ ಏಕೆ ಅವಕಾಶ ನೀಡುತ್ತಿಲ್ಲ..? ಈ ಪಕ್ಷಪಾತ ಏಕೆ..?” ಎಂದು ಕಾಂಗ್ರೆಸ್ ಯುವ ನಾಯಕ ಶ್ರೀವತ್ಸಾ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತೇಜಸ್ವಿ ಸೂರ್ಯ ಒಬ್ಬ ಗ್ರಾಮ ಪಂಚಾಯತಿ ಸದಸ್ಯನಾಗಿರಲಿಕ್ಕೂ ನಾಲಾಯಕ್.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...