Homeಕರ್ನಾಟಕಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ...

ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

- Advertisement -
- Advertisement -

ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ ಅದನ್ನು ಬಹಿರಂಗ ಪಡಿಸಿದ್ದೇನೆ ಎಂದು ಮಾಧ್ಯಮಗಳ ಮುಂದೆ ಒಂದು ಸಮುದಾಯದ ಜನರ ಪಟ್ಟಿ ಓದಿ ಟೀಕೆಗೆ ಒಳಗಾಗಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತೆ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಿ ಎಂಬ ವಿಚಾರದಲ್ಲಿ ಜನರ ಟೀಕೆಗೆ ಗುರಿಯಾಗಿದ್ದಾರೆ.

ದೇಶವು ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಬಿಕ್ಕಟ್ಟಿನ ಮಧ್ಯೆ, ಲಸಿಕೆ ಇಲ್ಲದಿರುವುದು ಒಂದು. ಲಸಿಕೆ ಲಭ್ಯವಿಲ್ಲದ ಬಗ್ಗೆ, ಪೂರೈಕೆ ಬೇಕು ಎಂದು ರಾಜ್ಯಗಳು ಕೇಂದ್ರವನ್ನು ಒತ್ತಾಯಿಸುತ್ತಿವೆ. ಇವುಗಳ ಮಧ್ಯೆ ಸಂಸದ ತೇಜಸ್ವಿ ಸೂರ್ಯ, ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಪಡೆದುಕೊಳ್ಳಿ ಎಂದು ಪ್ರಚಾರ ನಡೆಸಿದ್ದಾರೆ. ಈ ಬ್ಯಾನರ್‌ಗಳು ಜಯನಗರದ ಮೈದಾನದಲ್ಲಿ ಹಾಕಲಾಗಿವೆ.

ರಾಜ್ಯದಲ್ಲಿ ಲಸಿಕೆ ರಾಜಕೀಯ ಮುಂದುವರೆದಿದ್ದು, ‘ತೇಜಸ್ವಿ ಸೂರ್ಯ ಕಚೇರಿಯಿಂದ ಬೆಂಬಲಿತವಾಗಿದೆ’ ಎಂಬ ಪೋಸ್ಟರ್ ಜಯನಗರದ ಬಿಬಿಎಂಪಿ ಕೇಂದ್ರದ ಪಕ್ಕದಲ್ಲಿ ಕಾಣಿಸಿಕೊಂಡಿವೆ. ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ 900 ರೂಪಾಯಿಗೆ ಲಸಿಕೆ ನೀಡಲಾಗುತ್ತದೆ ಎಂಬ ಬ್ಯಾನರ್‌ಗಳು ಕಾಣಿಸಿಕೊಂಡಿವೆ. ಎಲ್ಲಾ ಬ್ಯಾನರ್‌ಗಳಲ್ಲಿಯೂ ಸಂಸದ ತೇಜಸ್ವಿ ಸೂರ್ಯ ಬೆಂಬಲಿತ ಎಂಬ ಬರಹ ಮತ್ತು ಅವರ ಫೋಟೋ ಹಾಕಲಾಗಿದೆ. ಈ ಪೋಸ್ಟರ್‌ಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಂ ಪಟ್ಟಿ: ಸಂತ್ರಸ್ತರು ಆರೋಪ ಮುಕ್ತರಾದರೂ ಇನ್ನೂ ಮರಳಿ ಸಿಗದ ಉದ್ಯೋಗ

ಹಲವು ನೆಟ್ಟಿಗರು ತಮ್ಮ ಖಾತೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಇರುವ ಬ್ಯಾನರ್‌ಗಳನ್ನು ಹಂಚಿಕೊಂಡು, ಇಂತಹ ರಾಜಕಾರಣ ಬಿಡಿ, ಜನರು ಲಸಿಕೆ ಇಲ್ಲದೆ ಆತಂಕದಲ್ಲಿರುವಾಗ ಖಾಸಗಿ ಆಸ್ಪತ್ರೆಯ ಲಸಿಕೆ ಅಭಿಯಾನ ಹೇಗೆ ಬೆಂಬಲಿಸುತ್ತಿರಿ ಎಂದು ಪ್ರಶ್ನಿಸಿದ್ದಾರೆ.

 

“ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ 900 ರೂಪಾಯಿ ತೆಗೆದುಕೊಳ್ಳುವ ಮೂಲಕ ಲಸಿಕೆ ಹಾಕುತ್ತಾರೆ. ಸಂಪೂರ್ಣ ಕಾರ್ಯಕ್ರಮದ ಕ್ರೆಡಿಟ್ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೆಗೆದುಕೊಳ್ಳುತ್ತಾರೆ. ಬಿಬಿಎಂಪಿಯಲ್ಲಿ ಲಸಿಕೆ ಇಲ್ಲದಿದ್ದಾಗ ಖಾಸಗಿ ಆಸ್ಪತ್ರೆಯನ್ನು ಸಂಸದರು ಹೇಗೆ ಉತ್ತೇಜಿಸಬಹುದು..? ಈ ಕೆಲಸಕ್ಕೆ ಅವರು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ..? ವಾಸವಿ ಆಸ್ಪತ್ರೆ ಲಸಿಕೆ ಖರೀದಿ ಸರಕುಪಟ್ಟಿ ತೋರಿಸಬೇಕು” ಎಂದು ಭೂಷಣ್ ಎಂಬುವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

“ತೇಜಸ್ವಿ ಸೂರ್ಯನಂತಹ ಬಿಜೆಪಿ ಸಂಸದರು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು ಮತ್ತು ಪ್ರತಿ ಡೋಸ್‌ಗೆ 900 ರೂಪಾಯಿ ಶುಲ್ಕ ವಿಧಿಸಬಹುದು. ಆದರೆ ಕಾಂಗ್ರೆಸ್ ಸಂಸದರು, ಶಾಸಕರು, ಸಂಸದರು, ಎಂಎಲ್‌ಎಡಿಎಸ್ ಮತ್ತು ಪಾರ್ಟಿ ಫಂಡ್‌ಗಳನ್ನು ಬಳಸಿಕೊಂಡು ಲಸಿಕೆ ಖರೀದಿಸಲು ಸರ್ಕಾರ ಏಕೆ ಅವಕಾಶ ನೀಡುತ್ತಿಲ್ಲ..? ಈ ಪಕ್ಷಪಾತ ಏಕೆ..?” ಎಂದು ಕಾಂಗ್ರೆಸ್ ಯುವ ನಾಯಕ ಶ್ರೀವತ್ಸಾ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತೇಜಸ್ವಿ ಸೂರ್ಯ ಒಬ್ಬ ಗ್ರಾಮ ಪಂಚಾಯತಿ ಸದಸ್ಯನಾಗಿರಲಿಕ್ಕೂ ನಾಲಾಯಕ್.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...