Homeಕರ್ನಾಟಕವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ? ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದರು.

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾನೂನುಗಳ ಕುರಿತು ಯಾವುದೇ ವಾಸ್ತವಿಕತೆ ಗೊತ್ತಿಲ್ಲದೆ, ಕೋತಿಯಂತೆ ಮಾತನಾಡುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ” ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, “ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ?” ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಬಡಗಲಪುರ ನಾಗೇಂದ್ರ ಮಾತನಾಡಿದರು.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

“ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವ ಭರದಲ್ಲಿ ಕೆಲವರು ರೈತರ ಹೋರಾಟದ ನೈತಿಕ ಶಕ್ತಿಯನ್ನು ಎದುರಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ಈ ಪೈಕಿ ಬೆಂಗಳೂರಿನ ದಕ್ಷಿಣ ಕ್ಷೇತ್ರದ ಬಿಜೆಪಿ ಲೋಕಸಭಾ ಸದಸ್ಯನೂ ಒಬ್ಬ. ಹಾಗಾಗಿ, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ದುಷ್ಪರಿಣಾಮ ಕುರಿತು ಜನವರಿ 16 ರಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಬಹಿರಂಗ ಸಂವಾದ ಹಮ್ಮಿಕೊಳ್ಳಲಾಗಿದ್ದು, ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವವರು ಈ ಬಹಿರಂಗ ಸಂವಾದದಲ್ಲಿ ಮುಕ್ತವಾಗಿ ಭಾಗವಹಿಸಬಹುದು. ಈ ಸಂವಾದದಲ್ಲಿ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಸೇರಿದಂತೆ ಪಂಜಾಬ್‌ನ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ತಮಿಳುನಾಡಿನ ತಮಿಳಗ ವ್ಯವಸಾಯಿಗಳ್ ಸಂಘದ ಅಧ್ಯಕ್ಷ ಸೆಲ್ವಮುತ್ತು ಮಾತನಾಡಿ, “ರೈತ ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ಬೆಲೆ, ಸೌಕರ್ಯ ಕಲ್ಪಿಸಿ ಕೊಡುವ ಕಾನೂನು ಎಪಿಎಂಸಿಯನ್ನೇ ಬಲಿ ಪಡೆದುಕೊಳ್ಳುವ ದುರುದ್ದೇಶ ಹೊಂದಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಇಲ್ಲಿಯವರೆಗೂ ಕೃಷಿ ಉತ್ಪನ್ನ ಮಾರಾಟ ಸಮಿತಿ ಮೇಲಿನ ಎಲ್ಲ ಕಾರ್ಯಗಳನ್ನು ನಿರ್ವಹಿಸುತ್ತಿತ್ತು. ಆದರೀಗ ಕಾರ್ಪೋರೇಟ್ ಸಂಸ್ಥೆಗಳೂ ಭಾಗಿಯಾಗಿರುವುದರಿಂದ ಎಪಿಎಂಸಿಗಳು ಮುಚ್ಚುವ ಸಂಭವವಿದೆ. ಪ್ರಧಾನಿ, ಹಣಕಾಸು ಸಚಿವರು, ಕೃಷಿ ಸಚಿವರು ಒಟ್ಟಾಗಿ ಈ ಕಾನೂನಿನ ಕುರಿತು ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಿಲ್ಲ. ಈ ಕಾನೂನು ಜಾರಿಗೆ ಬಂದರೆ ಎನೆಲ್ಲಾ ಅನುಕೂಲ ಎಂದು ರೈತರಿಗೆ ತಿಳಿಸಿಲ್ಲ. ಹೇಳಿದ್ದನ್ನಷ್ಟೇ ಮತ್ತೆ ಮತ್ತೆ ಹೇಳುತ್ತಾರೆಯೇ ವಿನಃ ಬೇರೆ ಕೆಲಸ ಮಾಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ…

“ಉತ್ತರ ಭಾರತ ದಕ್ಷಿಣ ಭಾರತದ ಕೃಷಿ ಮಾರುಕಟ್ಟೆಗೂ ಬಹಳಷ್ಟು ವ್ಯತ್ಯಾಸವಿದೆ. ದಕ್ಷಿಣ ಭಾರತದಲ್ಲಿ ಗುತ್ತಿಗೆದಾರರು ತೋಟಗಳಿಗೆ ಬಂದು ಜಾಗವನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಾರೆ. ಹರಿಶಿನ, ನೆಲಗಡಲೆಯನ್ನು ಹರಾಜಿಗೆ ಬಿಟ್ಟು ವ್ಯಾಪಾರ ಮಾಡುತ್ತಾರೆ.
ಉಳಿದ ಬೆಳಗಳನ್ನು ನೇರವಾಗಿ ಮಂಡಿಗಳಲ್ಲಿ ವ್ಯಾಪಾರ ಮಾಡುತ್ತಾರೆ. ಆದರೆ, ಪಂಜಾಬ್ ಹರಿಯಾಣದಲ್ಲಿ ಎಲ್ಲವನ್ನೂ ಮಂಡಿಯಲ್ಲೇ ವ್ಯಾಪಾರ ಮಾಡಬೇಕು. ಇಂತಹ ಕಾನೂನಿನಿಂದ ಎಲ್ಲಾ ಮಂಡಿಗಳು ಅಳಿಯುತ್ತವೆ ಎಂಬ ಭಯ ಆ ಜನಗಳಲ್ಲಿವೆ. ಅಲ್ಲದೆ ಕಾರ್ಪೊರೇಟ್ ಕಂಪೆನಿಗಳಿಗಳ ಜೊತೆ ಒಪ್ಪಂದ ಮಾಡಿಕೊಂಡು ವ್ಯವಸಾಯ ಮಾಡಬೇಕಾದ ಸ್ಥಿತಿ ಬರುತ್ತದೆ ಎಂಬ ಭಯ ಅವರಲ್ಲಿದೆ. ಹಾಗಾಗಿಯೇ ಅವರಿ ಇಷ್ಟು ತೀವ್ರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ವಿವರಿಸಿದರು.

ಈ ಸಂವಾದದಲ್ಲಿ ಆಂಧ್ರದ ರೈತ ಸ್ವರಾಜ್ಯ ವೇದಿಕೆಯ ಕಿರಣ್ ಕುಮಾರ್, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಝಾಕ್ ಉಸ್ತಾದ್ ಸೇರಿದಂತೆ ಅನೇಕ ತಜ್ಞರು, ಹೋರಾಟಗಾರರು ಭಾಗವಹಿಸಿದ್ದರು.


ಇದನ್ನೂ ಓದಿ: ಬೆಂಗಳೂರು: ದಲಿತ ಮುಖಂಡ ಶ್ರೀನಿವಾಸ್ ಕೊಲೆ – ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...