Homeಕರ್ನಾಟಕವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ? ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದರು.

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾನೂನುಗಳ ಕುರಿತು ಯಾವುದೇ ವಾಸ್ತವಿಕತೆ ಗೊತ್ತಿಲ್ಲದೆ, ಕೋತಿಯಂತೆ ಮಾತನಾಡುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ” ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, “ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ?” ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಬಡಗಲಪುರ ನಾಗೇಂದ್ರ ಮಾತನಾಡಿದರು.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

“ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವ ಭರದಲ್ಲಿ ಕೆಲವರು ರೈತರ ಹೋರಾಟದ ನೈತಿಕ ಶಕ್ತಿಯನ್ನು ಎದುರಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ಈ ಪೈಕಿ ಬೆಂಗಳೂರಿನ ದಕ್ಷಿಣ ಕ್ಷೇತ್ರದ ಬಿಜೆಪಿ ಲೋಕಸಭಾ ಸದಸ್ಯನೂ ಒಬ್ಬ. ಹಾಗಾಗಿ, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ದುಷ್ಪರಿಣಾಮ ಕುರಿತು ಜನವರಿ 16 ರಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಬಹಿರಂಗ ಸಂವಾದ ಹಮ್ಮಿಕೊಳ್ಳಲಾಗಿದ್ದು, ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವವರು ಈ ಬಹಿರಂಗ ಸಂವಾದದಲ್ಲಿ ಮುಕ್ತವಾಗಿ ಭಾಗವಹಿಸಬಹುದು. ಈ ಸಂವಾದದಲ್ಲಿ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಸೇರಿದಂತೆ ಪಂಜಾಬ್‌ನ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ತಮಿಳುನಾಡಿನ ತಮಿಳಗ ವ್ಯವಸಾಯಿಗಳ್ ಸಂಘದ ಅಧ್ಯಕ್ಷ ಸೆಲ್ವಮುತ್ತು ಮಾತನಾಡಿ, “ರೈತ ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ಬೆಲೆ, ಸೌಕರ್ಯ ಕಲ್ಪಿಸಿ ಕೊಡುವ ಕಾನೂನು ಎಪಿಎಂಸಿಯನ್ನೇ ಬಲಿ ಪಡೆದುಕೊಳ್ಳುವ ದುರುದ್ದೇಶ ಹೊಂದಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಇಲ್ಲಿಯವರೆಗೂ ಕೃಷಿ ಉತ್ಪನ್ನ ಮಾರಾಟ ಸಮಿತಿ ಮೇಲಿನ ಎಲ್ಲ ಕಾರ್ಯಗಳನ್ನು ನಿರ್ವಹಿಸುತ್ತಿತ್ತು. ಆದರೀಗ ಕಾರ್ಪೋರೇಟ್ ಸಂಸ್ಥೆಗಳೂ ಭಾಗಿಯಾಗಿರುವುದರಿಂದ ಎಪಿಎಂಸಿಗಳು ಮುಚ್ಚುವ ಸಂಭವವಿದೆ. ಪ್ರಧಾನಿ, ಹಣಕಾಸು ಸಚಿವರು, ಕೃಷಿ ಸಚಿವರು ಒಟ್ಟಾಗಿ ಈ ಕಾನೂನಿನ ಕುರಿತು ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಿಲ್ಲ. ಈ ಕಾನೂನು ಜಾರಿಗೆ ಬಂದರೆ ಎನೆಲ್ಲಾ ಅನುಕೂಲ ಎಂದು ರೈತರಿಗೆ ತಿಳಿಸಿಲ್ಲ. ಹೇಳಿದ್ದನ್ನಷ್ಟೇ ಮತ್ತೆ ಮತ್ತೆ ಹೇಳುತ್ತಾರೆಯೇ ವಿನಃ ಬೇರೆ ಕೆಲಸ ಮಾಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ…

“ಉತ್ತರ ಭಾರತ ದಕ್ಷಿಣ ಭಾರತದ ಕೃಷಿ ಮಾರುಕಟ್ಟೆಗೂ ಬಹಳಷ್ಟು ವ್ಯತ್ಯಾಸವಿದೆ. ದಕ್ಷಿಣ ಭಾರತದಲ್ಲಿ ಗುತ್ತಿಗೆದಾರರು ತೋಟಗಳಿಗೆ ಬಂದು ಜಾಗವನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಾರೆ. ಹರಿಶಿನ, ನೆಲಗಡಲೆಯನ್ನು ಹರಾಜಿಗೆ ಬಿಟ್ಟು ವ್ಯಾಪಾರ ಮಾಡುತ್ತಾರೆ.
ಉಳಿದ ಬೆಳಗಳನ್ನು ನೇರವಾಗಿ ಮಂಡಿಗಳಲ್ಲಿ ವ್ಯಾಪಾರ ಮಾಡುತ್ತಾರೆ. ಆದರೆ, ಪಂಜಾಬ್ ಹರಿಯಾಣದಲ್ಲಿ ಎಲ್ಲವನ್ನೂ ಮಂಡಿಯಲ್ಲೇ ವ್ಯಾಪಾರ ಮಾಡಬೇಕು. ಇಂತಹ ಕಾನೂನಿನಿಂದ ಎಲ್ಲಾ ಮಂಡಿಗಳು ಅಳಿಯುತ್ತವೆ ಎಂಬ ಭಯ ಆ ಜನಗಳಲ್ಲಿವೆ. ಅಲ್ಲದೆ ಕಾರ್ಪೊರೇಟ್ ಕಂಪೆನಿಗಳಿಗಳ ಜೊತೆ ಒಪ್ಪಂದ ಮಾಡಿಕೊಂಡು ವ್ಯವಸಾಯ ಮಾಡಬೇಕಾದ ಸ್ಥಿತಿ ಬರುತ್ತದೆ ಎಂಬ ಭಯ ಅವರಲ್ಲಿದೆ. ಹಾಗಾಗಿಯೇ ಅವರಿ ಇಷ್ಟು ತೀವ್ರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ವಿವರಿಸಿದರು.

ಈ ಸಂವಾದದಲ್ಲಿ ಆಂಧ್ರದ ರೈತ ಸ್ವರಾಜ್ಯ ವೇದಿಕೆಯ ಕಿರಣ್ ಕುಮಾರ್, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಝಾಕ್ ಉಸ್ತಾದ್ ಸೇರಿದಂತೆ ಅನೇಕ ತಜ್ಞರು, ಹೋರಾಟಗಾರರು ಭಾಗವಹಿಸಿದ್ದರು.


ಇದನ್ನೂ ಓದಿ: ಬೆಂಗಳೂರು: ದಲಿತ ಮುಖಂಡ ಶ್ರೀನಿವಾಸ್ ಕೊಲೆ – ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...