Homeಕರ್ನಾಟಕವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ? ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದರು.

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾನೂನುಗಳ ಕುರಿತು ಯಾವುದೇ ವಾಸ್ತವಿಕತೆ ಗೊತ್ತಿಲ್ಲದೆ, ಕೋತಿಯಂತೆ ಮಾತನಾಡುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ” ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ, “ರೈತ ವಿರೋಧಿ ಕಾಯ್ದೆಗಳು, ಕರ್ನಾಟಕಕ್ಕೆ ಆಗಿರುವ ಅನ್ಯಾಯಕ್ಕೇನು ಪ್ರತಿಕ್ರಿಯೆ?” ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಬಡಗಲಪುರ ನಾಗೇಂದ್ರ ಮಾತನಾಡಿದರು.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

“ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವ ಭರದಲ್ಲಿ ಕೆಲವರು ರೈತರ ಹೋರಾಟದ ನೈತಿಕ ಶಕ್ತಿಯನ್ನು ಎದುರಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ಈ ಪೈಕಿ ಬೆಂಗಳೂರಿನ ದಕ್ಷಿಣ ಕ್ಷೇತ್ರದ ಬಿಜೆಪಿ ಲೋಕಸಭಾ ಸದಸ್ಯನೂ ಒಬ್ಬ. ಹಾಗಾಗಿ, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ದುಷ್ಪರಿಣಾಮ ಕುರಿತು ಜನವರಿ 16 ರಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಬಹಿರಂಗ ಸಂವಾದ ಹಮ್ಮಿಕೊಳ್ಳಲಾಗಿದ್ದು, ಕೃಷಿ ಕಾಯ್ದೆಗಳ ಪರವಾಗಿ ಮಾತನಾಡುವವರು ಈ ಬಹಿರಂಗ ಸಂವಾದದಲ್ಲಿ ಮುಕ್ತವಾಗಿ ಭಾಗವಹಿಸಬಹುದು. ಈ ಸಂವಾದದಲ್ಲಿ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಸೇರಿದಂತೆ ಪಂಜಾಬ್‌ನ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ತಮಿಳುನಾಡಿನ ತಮಿಳಗ ವ್ಯವಸಾಯಿಗಳ್ ಸಂಘದ ಅಧ್ಯಕ್ಷ ಸೆಲ್ವಮುತ್ತು ಮಾತನಾಡಿ, “ರೈತ ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ಬೆಲೆ, ಸೌಕರ್ಯ ಕಲ್ಪಿಸಿ ಕೊಡುವ ಕಾನೂನು ಎಪಿಎಂಸಿಯನ್ನೇ ಬಲಿ ಪಡೆದುಕೊಳ್ಳುವ ದುರುದ್ದೇಶ ಹೊಂದಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಇಲ್ಲಿಯವರೆಗೂ ಕೃಷಿ ಉತ್ಪನ್ನ ಮಾರಾಟ ಸಮಿತಿ ಮೇಲಿನ ಎಲ್ಲ ಕಾರ್ಯಗಳನ್ನು ನಿರ್ವಹಿಸುತ್ತಿತ್ತು. ಆದರೀಗ ಕಾರ್ಪೋರೇಟ್ ಸಂಸ್ಥೆಗಳೂ ಭಾಗಿಯಾಗಿರುವುದರಿಂದ ಎಪಿಎಂಸಿಗಳು ಮುಚ್ಚುವ ಸಂಭವವಿದೆ. ಪ್ರಧಾನಿ, ಹಣಕಾಸು ಸಚಿವರು, ಕೃಷಿ ಸಚಿವರು ಒಟ್ಟಾಗಿ ಈ ಕಾನೂನಿನ ಕುರಿತು ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಿಲ್ಲ. ಈ ಕಾನೂನು ಜಾರಿಗೆ ಬಂದರೆ ಎನೆಲ್ಲಾ ಅನುಕೂಲ ಎಂದು ರೈತರಿಗೆ ತಿಳಿಸಿಲ್ಲ. ಹೇಳಿದ್ದನ್ನಷ್ಟೇ ಮತ್ತೆ ಮತ್ತೆ ಹೇಳುತ್ತಾರೆಯೇ ವಿನಃ ಬೇರೆ ಕೆಲಸ ಮಾಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ…

“ಉತ್ತರ ಭಾರತ ದಕ್ಷಿಣ ಭಾರತದ ಕೃಷಿ ಮಾರುಕಟ್ಟೆಗೂ ಬಹಳಷ್ಟು ವ್ಯತ್ಯಾಸವಿದೆ. ದಕ್ಷಿಣ ಭಾರತದಲ್ಲಿ ಗುತ್ತಿಗೆದಾರರು ತೋಟಗಳಿಗೆ ಬಂದು ಜಾಗವನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಾರೆ. ಹರಿಶಿನ, ನೆಲಗಡಲೆಯನ್ನು ಹರಾಜಿಗೆ ಬಿಟ್ಟು ವ್ಯಾಪಾರ ಮಾಡುತ್ತಾರೆ.
ಉಳಿದ ಬೆಳಗಳನ್ನು ನೇರವಾಗಿ ಮಂಡಿಗಳಲ್ಲಿ ವ್ಯಾಪಾರ ಮಾಡುತ್ತಾರೆ. ಆದರೆ, ಪಂಜಾಬ್ ಹರಿಯಾಣದಲ್ಲಿ ಎಲ್ಲವನ್ನೂ ಮಂಡಿಯಲ್ಲೇ ವ್ಯಾಪಾರ ಮಾಡಬೇಕು. ಇಂತಹ ಕಾನೂನಿನಿಂದ ಎಲ್ಲಾ ಮಂಡಿಗಳು ಅಳಿಯುತ್ತವೆ ಎಂಬ ಭಯ ಆ ಜನಗಳಲ್ಲಿವೆ. ಅಲ್ಲದೆ ಕಾರ್ಪೊರೇಟ್ ಕಂಪೆನಿಗಳಿಗಳ ಜೊತೆ ಒಪ್ಪಂದ ಮಾಡಿಕೊಂಡು ವ್ಯವಸಾಯ ಮಾಡಬೇಕಾದ ಸ್ಥಿತಿ ಬರುತ್ತದೆ ಎಂಬ ಭಯ ಅವರಲ್ಲಿದೆ. ಹಾಗಾಗಿಯೇ ಅವರಿ ಇಷ್ಟು ತೀವ್ರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ವಿವರಿಸಿದರು.

ಈ ಸಂವಾದದಲ್ಲಿ ಆಂಧ್ರದ ರೈತ ಸ್ವರಾಜ್ಯ ವೇದಿಕೆಯ ಕಿರಣ್ ಕುಮಾರ್, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಝಾಕ್ ಉಸ್ತಾದ್ ಸೇರಿದಂತೆ ಅನೇಕ ತಜ್ಞರು, ಹೋರಾಟಗಾರರು ಭಾಗವಹಿಸಿದ್ದರು.


ಇದನ್ನೂ ಓದಿ: ಬೆಂಗಳೂರು: ದಲಿತ ಮುಖಂಡ ಶ್ರೀನಿವಾಸ್ ಕೊಲೆ – ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...