Homeಕರ್ನಾಟಕಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

- Advertisement -
- Advertisement -

`ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬಿಬಿಎಂಪಿ ವಾರ್‌ರೂಮಿಗೆ ದಾಳಿ ಮಾಡಿ, ಬೆಡ್ ಬ್ಲಾಕಿಂಗ್ ಹಗರಣದ ಹೆಸರಲ್ಲಿ ಕೋಮು ಸಾಮರಸ್ಯ ಕದಡುವ ಕೆಲಸ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಕೆಲವು ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರು ಬೆಂಗಳೂರು ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ವತ್ತು ತೇಜಸ್ವಿ ಸೂರ್ಯ ಜೊತೆಗೆ ಇದ್ದ ಬೆಂಗಳೂರಿನ ಬಸವನಗುಡಿಯ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆಯ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮೇಲೂ ದೂರು ದಾಖಲಿಸಲು ಅನುಮತಿ ನೀಡಿ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಸಾಮಾಜಿಕ ಕಾರ್ಯಕರ್ತ ವರದ ರಾಜೇಂದ್ರ ಮತ್ತು ಹಲವು ವಕೀಲರು ಈ ದೂರು ಸಲ್ಲಿಸಿದ್ದು, `206 ಉದ್ಯೋಗಿಗಳ ಪೈಕಿ 16 ಮುಸ್ಲಿಂ ಉದ್ಯೋಗಿಗಳ ಹೆಸರು ಹೇಳುವ ಮೂಲಕ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಯತ್ನ ಮಾಡಿದೆ. ಇದೇನು ಮದರಸಾನಾ ಎಂದು ನೇರವಾಗಿ ಮುಸ್ಲಿಮರ ವಿರುದ್ಧ ಅಸಂವಿಧಾನಿಕ ಮಾತುಗಳನ್ನು ಆಡಿದ್ದಾರೆ. ಹೀಗಾಗಿ ಸಂಸದರು ಮತ್ತು ಅವರ ಜೊತೆಗಿದ್ದ ಜನಪ್ರತಿನಿಧಿಗಳು ಕೋಮು ಸಾಮರಸ್ಯ ಕದಡುವ ಉದ್ದೇಶದಿಂದಲೇ ಈ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಅರ್ಜಿಯಲ್ಲಿ ಕೇಳಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವರದ ರಾಜೇಂದ್ರ `ಸಾಂಕ್ರಾಮಿಕ ತಡೆ ಕಾಯ್ದೆ ಪ್ರಕಾರ, ಜನಪ್ರತಿನಿಧಿ ಅಥವಾ ಯಾರದೇ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನ ಜಿಲ್ಲಾಧಿಕಾರಿ ಅವರ ನೇತೃತ್ವದ ಜಿಲ್ಲಾ ಮ್ಯಾಜಿಸ್ಟ್ರೇಟ್ ವ್ಯವಸ್ಥೆಯ ಅನುಮತಿ ಪಡೆಯುವ ಅಗತ್ಯವಿರುವ ಕಾರಣ, ನಾವು ಮನವಿ ಸಲ್ಲಿಸಿದ್ದೇವೆ’ ಎಂದು ಹೇಳಿದರು.

`ಈ ಮನವಿ ಪುರಸ್ಕರಿಸದಿದ್ದರೆ, ನಾವು ಹೈಕೋರ್ಟ್ ಮೆಟ್ಟಿಲು ಏರುತ್ತೇವೆ’ ಎಂದು ಅವರು ತಿಳಿಸಿದರು.

ಕೋಮು ಸಾಮರಸ್ಯ ಕದಡುವ ಉದ್ದೇಶದಲ್ಲಿ ಕಂಗನಾ ರಾಣಾವತ್ ಮಾಡಿದ ಟ್ವೀಟ್ ಕಾರಣಕ್ಕೆ, ಟ್ವಿಟರ್ ಅವರ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ನಿನ್ನೆ ಶುಕ್ರವಾರ ಕೋಲ್ಕೊತ್ತದಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಇದೇ ಮಾದರಿಯ ಪೋಸ್ಟ್ ಹಾಕಿದ್ದ ರಂಗಕರ್ಮಿ ಪ್ರಕಾಶ್ ಬೆಳವಾಡಿ ವಿರುದ್ಧ ಹಲವರು ಕೇಸ್ ಹಾಕುವ ಪ್ರಕ್ರಿಯೆಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...