Homeಕರ್ನಾಟಕಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

- Advertisement -
- Advertisement -

`ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬಿಬಿಎಂಪಿ ವಾರ್‌ರೂಮಿಗೆ ದಾಳಿ ಮಾಡಿ, ಬೆಡ್ ಬ್ಲಾಕಿಂಗ್ ಹಗರಣದ ಹೆಸರಲ್ಲಿ ಕೋಮು ಸಾಮರಸ್ಯ ಕದಡುವ ಕೆಲಸ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಕೆಲವು ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರು ಬೆಂಗಳೂರು ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ವತ್ತು ತೇಜಸ್ವಿ ಸೂರ್ಯ ಜೊತೆಗೆ ಇದ್ದ ಬೆಂಗಳೂರಿನ ಬಸವನಗುಡಿಯ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆಯ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮೇಲೂ ದೂರು ದಾಖಲಿಸಲು ಅನುಮತಿ ನೀಡಿ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಸಾಮಾಜಿಕ ಕಾರ್ಯಕರ್ತ ವರದ ರಾಜೇಂದ್ರ ಮತ್ತು ಹಲವು ವಕೀಲರು ಈ ದೂರು ಸಲ್ಲಿಸಿದ್ದು, `206 ಉದ್ಯೋಗಿಗಳ ಪೈಕಿ 16 ಮುಸ್ಲಿಂ ಉದ್ಯೋಗಿಗಳ ಹೆಸರು ಹೇಳುವ ಮೂಲಕ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಯತ್ನ ಮಾಡಿದೆ. ಇದೇನು ಮದರಸಾನಾ ಎಂದು ನೇರವಾಗಿ ಮುಸ್ಲಿಮರ ವಿರುದ್ಧ ಅಸಂವಿಧಾನಿಕ ಮಾತುಗಳನ್ನು ಆಡಿದ್ದಾರೆ. ಹೀಗಾಗಿ ಸಂಸದರು ಮತ್ತು ಅವರ ಜೊತೆಗಿದ್ದ ಜನಪ್ರತಿನಿಧಿಗಳು ಕೋಮು ಸಾಮರಸ್ಯ ಕದಡುವ ಉದ್ದೇಶದಿಂದಲೇ ಈ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಅರ್ಜಿಯಲ್ಲಿ ಕೇಳಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವರದ ರಾಜೇಂದ್ರ `ಸಾಂಕ್ರಾಮಿಕ ತಡೆ ಕಾಯ್ದೆ ಪ್ರಕಾರ, ಜನಪ್ರತಿನಿಧಿ ಅಥವಾ ಯಾರದೇ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನ ಜಿಲ್ಲಾಧಿಕಾರಿ ಅವರ ನೇತೃತ್ವದ ಜಿಲ್ಲಾ ಮ್ಯಾಜಿಸ್ಟ್ರೇಟ್ ವ್ಯವಸ್ಥೆಯ ಅನುಮತಿ ಪಡೆಯುವ ಅಗತ್ಯವಿರುವ ಕಾರಣ, ನಾವು ಮನವಿ ಸಲ್ಲಿಸಿದ್ದೇವೆ’ ಎಂದು ಹೇಳಿದರು.

`ಈ ಮನವಿ ಪುರಸ್ಕರಿಸದಿದ್ದರೆ, ನಾವು ಹೈಕೋರ್ಟ್ ಮೆಟ್ಟಿಲು ಏರುತ್ತೇವೆ’ ಎಂದು ಅವರು ತಿಳಿಸಿದರು.

ಕೋಮು ಸಾಮರಸ್ಯ ಕದಡುವ ಉದ್ದೇಶದಲ್ಲಿ ಕಂಗನಾ ರಾಣಾವತ್ ಮಾಡಿದ ಟ್ವೀಟ್ ಕಾರಣಕ್ಕೆ, ಟ್ವಿಟರ್ ಅವರ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ನಿನ್ನೆ ಶುಕ್ರವಾರ ಕೋಲ್ಕೊತ್ತದಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಇದೇ ಮಾದರಿಯ ಪೋಸ್ಟ್ ಹಾಕಿದ್ದ ರಂಗಕರ್ಮಿ ಪ್ರಕಾಶ್ ಬೆಳವಾಡಿ ವಿರುದ್ಧ ಹಲವರು ಕೇಸ್ ಹಾಕುವ ಪ್ರಕ್ರಿಯೆಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...