Homeಕರ್ನಾಟಕಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

- Advertisement -
- Advertisement -

`ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬಿಬಿಎಂಪಿ ವಾರ್‌ರೂಮಿಗೆ ದಾಳಿ ಮಾಡಿ, ಬೆಡ್ ಬ್ಲಾಕಿಂಗ್ ಹಗರಣದ ಹೆಸರಲ್ಲಿ ಕೋಮು ಸಾಮರಸ್ಯ ಕದಡುವ ಕೆಲಸ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಕೆಲವು ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರು ಬೆಂಗಳೂರು ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ವತ್ತು ತೇಜಸ್ವಿ ಸೂರ್ಯ ಜೊತೆಗೆ ಇದ್ದ ಬೆಂಗಳೂರಿನ ಬಸವನಗುಡಿಯ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆಯ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮೇಲೂ ದೂರು ದಾಖಲಿಸಲು ಅನುಮತಿ ನೀಡಿ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಸಾಮಾಜಿಕ ಕಾರ್ಯಕರ್ತ ವರದ ರಾಜೇಂದ್ರ ಮತ್ತು ಹಲವು ವಕೀಲರು ಈ ದೂರು ಸಲ್ಲಿಸಿದ್ದು, `206 ಉದ್ಯೋಗಿಗಳ ಪೈಕಿ 16 ಮುಸ್ಲಿಂ ಉದ್ಯೋಗಿಗಳ ಹೆಸರು ಹೇಳುವ ಮೂಲಕ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಯತ್ನ ಮಾಡಿದೆ. ಇದೇನು ಮದರಸಾನಾ ಎಂದು ನೇರವಾಗಿ ಮುಸ್ಲಿಮರ ವಿರುದ್ಧ ಅಸಂವಿಧಾನಿಕ ಮಾತುಗಳನ್ನು ಆಡಿದ್ದಾರೆ. ಹೀಗಾಗಿ ಸಂಸದರು ಮತ್ತು ಅವರ ಜೊತೆಗಿದ್ದ ಜನಪ್ರತಿನಿಧಿಗಳು ಕೋಮು ಸಾಮರಸ್ಯ ಕದಡುವ ಉದ್ದೇಶದಿಂದಲೇ ಈ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಅರ್ಜಿಯಲ್ಲಿ ಕೇಳಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವರದ ರಾಜೇಂದ್ರ `ಸಾಂಕ್ರಾಮಿಕ ತಡೆ ಕಾಯ್ದೆ ಪ್ರಕಾರ, ಜನಪ್ರತಿನಿಧಿ ಅಥವಾ ಯಾರದೇ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನ ಜಿಲ್ಲಾಧಿಕಾರಿ ಅವರ ನೇತೃತ್ವದ ಜಿಲ್ಲಾ ಮ್ಯಾಜಿಸ್ಟ್ರೇಟ್ ವ್ಯವಸ್ಥೆಯ ಅನುಮತಿ ಪಡೆಯುವ ಅಗತ್ಯವಿರುವ ಕಾರಣ, ನಾವು ಮನವಿ ಸಲ್ಲಿಸಿದ್ದೇವೆ’ ಎಂದು ಹೇಳಿದರು.

`ಈ ಮನವಿ ಪುರಸ್ಕರಿಸದಿದ್ದರೆ, ನಾವು ಹೈಕೋರ್ಟ್ ಮೆಟ್ಟಿಲು ಏರುತ್ತೇವೆ’ ಎಂದು ಅವರು ತಿಳಿಸಿದರು.

ಕೋಮು ಸಾಮರಸ್ಯ ಕದಡುವ ಉದ್ದೇಶದಲ್ಲಿ ಕಂಗನಾ ರಾಣಾವತ್ ಮಾಡಿದ ಟ್ವೀಟ್ ಕಾರಣಕ್ಕೆ, ಟ್ವಿಟರ್ ಅವರ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ನಿನ್ನೆ ಶುಕ್ರವಾರ ಕೋಲ್ಕೊತ್ತದಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಇದೇ ಮಾದರಿಯ ಪೋಸ್ಟ್ ಹಾಕಿದ್ದ ರಂಗಕರ್ಮಿ ಪ್ರಕಾಶ್ ಬೆಳವಾಡಿ ವಿರುದ್ಧ ಹಲವರು ಕೇಸ್ ಹಾಕುವ ಪ್ರಕ್ರಿಯೆಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...