Homeಕರ್ನಾಟಕಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

- Advertisement -
- Advertisement -

`ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬಿಬಿಎಂಪಿ ವಾರ್‌ರೂಮಿಗೆ ದಾಳಿ ಮಾಡಿ, ಬೆಡ್ ಬ್ಲಾಕಿಂಗ್ ಹಗರಣದ ಹೆಸರಲ್ಲಿ ಕೋಮು ಸಾಮರಸ್ಯ ಕದಡುವ ಕೆಲಸ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಕೆಲವು ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರು ಬೆಂಗಳೂರು ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ವತ್ತು ತೇಜಸ್ವಿ ಸೂರ್ಯ ಜೊತೆಗೆ ಇದ್ದ ಬೆಂಗಳೂರಿನ ಬಸವನಗುಡಿಯ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆಯ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮೇಲೂ ದೂರು ದಾಖಲಿಸಲು ಅನುಮತಿ ನೀಡಿ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಸಾಮಾಜಿಕ ಕಾರ್ಯಕರ್ತ ವರದ ರಾಜೇಂದ್ರ ಮತ್ತು ಹಲವು ವಕೀಲರು ಈ ದೂರು ಸಲ್ಲಿಸಿದ್ದು, `206 ಉದ್ಯೋಗಿಗಳ ಪೈಕಿ 16 ಮುಸ್ಲಿಂ ಉದ್ಯೋಗಿಗಳ ಹೆಸರು ಹೇಳುವ ಮೂಲಕ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಯತ್ನ ಮಾಡಿದೆ. ಇದೇನು ಮದರಸಾನಾ ಎಂದು ನೇರವಾಗಿ ಮುಸ್ಲಿಮರ ವಿರುದ್ಧ ಅಸಂವಿಧಾನಿಕ ಮಾತುಗಳನ್ನು ಆಡಿದ್ದಾರೆ. ಹೀಗಾಗಿ ಸಂಸದರು ಮತ್ತು ಅವರ ಜೊತೆಗಿದ್ದ ಜನಪ್ರತಿನಿಧಿಗಳು ಕೋಮು ಸಾಮರಸ್ಯ ಕದಡುವ ಉದ್ದೇಶದಿಂದಲೇ ಈ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಅರ್ಜಿಯಲ್ಲಿ ಕೇಳಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವರದ ರಾಜೇಂದ್ರ `ಸಾಂಕ್ರಾಮಿಕ ತಡೆ ಕಾಯ್ದೆ ಪ್ರಕಾರ, ಜನಪ್ರತಿನಿಧಿ ಅಥವಾ ಯಾರದೇ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನ ಜಿಲ್ಲಾಧಿಕಾರಿ ಅವರ ನೇತೃತ್ವದ ಜಿಲ್ಲಾ ಮ್ಯಾಜಿಸ್ಟ್ರೇಟ್ ವ್ಯವಸ್ಥೆಯ ಅನುಮತಿ ಪಡೆಯುವ ಅಗತ್ಯವಿರುವ ಕಾರಣ, ನಾವು ಮನವಿ ಸಲ್ಲಿಸಿದ್ದೇವೆ’ ಎಂದು ಹೇಳಿದರು.

`ಈ ಮನವಿ ಪುರಸ್ಕರಿಸದಿದ್ದರೆ, ನಾವು ಹೈಕೋರ್ಟ್ ಮೆಟ್ಟಿಲು ಏರುತ್ತೇವೆ’ ಎಂದು ಅವರು ತಿಳಿಸಿದರು.

ಕೋಮು ಸಾಮರಸ್ಯ ಕದಡುವ ಉದ್ದೇಶದಲ್ಲಿ ಕಂಗನಾ ರಾಣಾವತ್ ಮಾಡಿದ ಟ್ವೀಟ್ ಕಾರಣಕ್ಕೆ, ಟ್ವಿಟರ್ ಅವರ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ನಿನ್ನೆ ಶುಕ್ರವಾರ ಕೋಲ್ಕೊತ್ತದಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಇದೇ ಮಾದರಿಯ ಪೋಸ್ಟ್ ಹಾಕಿದ್ದ ರಂಗಕರ್ಮಿ ಪ್ರಕಾಶ್ ಬೆಳವಾಡಿ ವಿರುದ್ಧ ಹಲವರು ಕೇಸ್ ಹಾಕುವ ಪ್ರಕ್ರಿಯೆಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...