Homeಕರ್ನಾಟಕಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

- Advertisement -
- Advertisement -

`ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬಿಬಿಎಂಪಿ ವಾರ್‌ರೂಮಿಗೆ ದಾಳಿ ಮಾಡಿ, ಬೆಡ್ ಬ್ಲಾಕಿಂಗ್ ಹಗರಣದ ಹೆಸರಲ್ಲಿ ಕೋಮು ಸಾಮರಸ್ಯ ಕದಡುವ ಕೆಲಸ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಕೆಲವು ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರು ಬೆಂಗಳೂರು ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ವತ್ತು ತೇಜಸ್ವಿ ಸೂರ್ಯ ಜೊತೆಗೆ ಇದ್ದ ಬೆಂಗಳೂರಿನ ಬಸವನಗುಡಿಯ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆಯ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮೇಲೂ ದೂರು ದಾಖಲಿಸಲು ಅನುಮತಿ ನೀಡಿ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಸಾಮಾಜಿಕ ಕಾರ್ಯಕರ್ತ ವರದ ರಾಜೇಂದ್ರ ಮತ್ತು ಹಲವು ವಕೀಲರು ಈ ದೂರು ಸಲ್ಲಿಸಿದ್ದು, `206 ಉದ್ಯೋಗಿಗಳ ಪೈಕಿ 16 ಮುಸ್ಲಿಂ ಉದ್ಯೋಗಿಗಳ ಹೆಸರು ಹೇಳುವ ಮೂಲಕ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಯತ್ನ ಮಾಡಿದೆ. ಇದೇನು ಮದರಸಾನಾ ಎಂದು ನೇರವಾಗಿ ಮುಸ್ಲಿಮರ ವಿರುದ್ಧ ಅಸಂವಿಧಾನಿಕ ಮಾತುಗಳನ್ನು ಆಡಿದ್ದಾರೆ. ಹೀಗಾಗಿ ಸಂಸದರು ಮತ್ತು ಅವರ ಜೊತೆಗಿದ್ದ ಜನಪ್ರತಿನಿಧಿಗಳು ಕೋಮು ಸಾಮರಸ್ಯ ಕದಡುವ ಉದ್ದೇಶದಿಂದಲೇ ಈ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಅರ್ಜಿಯಲ್ಲಿ ಕೇಳಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವರದ ರಾಜೇಂದ್ರ `ಸಾಂಕ್ರಾಮಿಕ ತಡೆ ಕಾಯ್ದೆ ಪ್ರಕಾರ, ಜನಪ್ರತಿನಿಧಿ ಅಥವಾ ಯಾರದೇ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನ ಜಿಲ್ಲಾಧಿಕಾರಿ ಅವರ ನೇತೃತ್ವದ ಜಿಲ್ಲಾ ಮ್ಯಾಜಿಸ್ಟ್ರೇಟ್ ವ್ಯವಸ್ಥೆಯ ಅನುಮತಿ ಪಡೆಯುವ ಅಗತ್ಯವಿರುವ ಕಾರಣ, ನಾವು ಮನವಿ ಸಲ್ಲಿಸಿದ್ದೇವೆ’ ಎಂದು ಹೇಳಿದರು.

`ಈ ಮನವಿ ಪುರಸ್ಕರಿಸದಿದ್ದರೆ, ನಾವು ಹೈಕೋರ್ಟ್ ಮೆಟ್ಟಿಲು ಏರುತ್ತೇವೆ’ ಎಂದು ಅವರು ತಿಳಿಸಿದರು.

ಕೋಮು ಸಾಮರಸ್ಯ ಕದಡುವ ಉದ್ದೇಶದಲ್ಲಿ ಕಂಗನಾ ರಾಣಾವತ್ ಮಾಡಿದ ಟ್ವೀಟ್ ಕಾರಣಕ್ಕೆ, ಟ್ವಿಟರ್ ಅವರ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ನಿನ್ನೆ ಶುಕ್ರವಾರ ಕೋಲ್ಕೊತ್ತದಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಇದೇ ಮಾದರಿಯ ಪೋಸ್ಟ್ ಹಾಕಿದ್ದ ರಂಗಕರ್ಮಿ ಪ್ರಕಾಶ್ ಬೆಳವಾಡಿ ವಿರುದ್ಧ ಹಲವರು ಕೇಸ್ ಹಾಕುವ ಪ್ರಕ್ರಿಯೆಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...