Homeಮುಖಪುಟಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಬಿಹಾರದ ವೈಶಾಲಿಯಲ್ಲಿ ಮೊದಲ ಬಾರಿಗೆ ಪ್ರಜಾಪ್ರಭುತ್ವ ಸ್ಥಾಪನೆಯಾದ ಕಾರಣ, ಇಲ್ಲಿ ನಾವು ಮುಖ್ಯಮಂತ್ರಿ ಅಭ್ಯರ್ಥಿಗಳ ನಡುವೆ ಚರ್ಚೆ ನಡೆಯಬೇಕು ಎನ್ನುವ ಈ ಸಂಪ್ರದಾಯವನ್ನು ಪ್ರಾರಂಭಿಸೋಣ ಎಂದು ಅವರು ಹೇಳಿದರು.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಬಿಹಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ನೇರ ಚರ್ಚೆ ಮಾಡಲು ಆಹ್ವಾನಿಸಿ ಸವಾಲು ಹಾಕಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ, ಸರ್ಕಾರದ ಮುಖ್ಯಸ್ಥರಾಗಿ ಕಳೆದ 15 ವರ್ಷಗಳಲ್ಲಿ ಅವರು ಮಾಡಿದ ಸಾಧನೆಗಳ ಬಗ್ಗೆ ಚರ್ಚಿಸಲು ಅಭಿವೃದ್ಧಿಯ ವಿಷಯದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲು ಯಾವುದೇ ಸಮಯ ಮತ್ತು ಸ್ಥಳವನ್ನು ಆಯ್ಕೆ ಮಾಡಬಹುದು ಎಂದು ತೇಜಸ್ವಿ ಯಾದವ್ ನಿತೀಶ್ ಕುಮಾರ್ ಅವರಿಗೆ ಸವಾಲು ಹಾಕಿದರು.

“ಕಳೆದ 15 ವರ್ಷಗಳಲ್ಲಿ ನಿತೀಶ್ ಕುಮಾರ್ ಅವರು ತಮ್ಮ ಸಾಧನೆಗಳ ಬಗ್ಗೆ ನನ್ನೊಂದಿಗೆ ಚರ್ಚಿಸಲಿ ಎಂದು ನಾನು ಒತ್ತಾಯಿಸುತ್ತೇನೆ. ಬಿಹಾರದ ವೈಶಾಲಿಯಲ್ಲಿ ಮೊದಲ ಬಾರಿಗೆ ಪ್ರಜಾಪ್ರಭುತ್ವ ಸ್ಥಾಪನೆಯಾದ ಕಾರಣ, ಇಲ್ಲಿ ನಾವು ಮುಖ್ಯಮಂತ್ರಿ ಅಭ್ಯರ್ಥಿಗಳ ನಡುವೆ ನೇರ ಚರ್ಚೆ ನಡೆಯಬೇಕು ಎನ್ನುವ ಈ ಸಂಪ್ರದಾಯವನ್ನು ಪ್ರಾರಂಭಿಸೋಣ” ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

“ಜನರು ರಾಜ್ಯ ಸರ್ಕಾರದ ಮೇಲೆ ತೀವ್ರ ಕೋಪಗೊಂಡಿದ್ದು, ಮಹಾ ಘಟಬಂಧನ್ ಸ್ಪಷ್ಟ ಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದರು.

ಪ್ರತಿ ಚುನಾವಣಾ ಸಭೆಯಲ್ಲೂ ನಿರುದ್ಯೋಗ ಮತ್ತು ವಲಸೆಯ ವಿಷಯಗಳ ಬಗ್ಗೆ ತೇಜಸ್ವಿ ಯಾದವ್ ನಿರಂತರವಾಗಿ ಆಡಳಿತ ಪಕ್ಷವನ್ನು ಗುರಿಯಾಗಿಸಿಕೊಂಡಿದ್ದಾರೆ.

ಇದರ ನಡುವೆ, ಸವಾಲಿಗೆ ಪ್ರತಿಕ್ರಿಯಿಸಿದ ಬಿಹಾರದ ಮಾಜಿ ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ನಿತ್ಯಾನಂದ್ ರೈ, “ಅಭಿವೃದ್ಧಿಯ ವಿಷಯದಲ್ಲಿ ಎಲ್ಲಿಯಾದರೂ ಚರ್ಚಿಸಲು ಅವರು ಸಿದ್ಧರಾಗಿದ್ದಾರೆ. ಆದರೆ ಈಗ ನಿತೀಶ್ ಕುಮಾರ್ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ” ಎಂದರು.

ಬಿಹಾರದಲ್ಲಿ, 243 ಸದಸ್ಯರ ವಿಧಾನಸಭಾ ಚುನಾವಣೆಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಮತದಾನ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...