Homeಮುಖಪುಟತೇಜಸ್ವಿ ಯಾದವ್ ತುಂಬಾ ಒಳ್ಳೆಯ ಹುಡುಗ, ಮುಂದೆ ಬಿಹಾರವನ್ನು ಮುನ್ನಡೆಸಬಹದು: ಉಮಾ ಭಾರತಿ

ತೇಜಸ್ವಿ ಯಾದವ್ ತುಂಬಾ ಒಳ್ಳೆಯ ಹುಡುಗ, ಮುಂದೆ ಬಿಹಾರವನ್ನು ಮುನ್ನಡೆಸಬಹದು: ಉಮಾ ಭಾರತಿ

- Advertisement -
- Advertisement -

ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಅವರನ್ನು ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಇದೀಗ ದೋಷ ಮುಕ್ತಗೊಂಡಿರುವ ಬಿಜೆಪಿ ನಾಯಕಿ ಉಮಾ ಭಾರತಿ ಶ್ಲಾಘಿಸಿದ್ದು, “ತೇಜಸ್ವಿಯವರಿಗೆ ವಯಸ್ಸು ಇದ್ದರೂ, ರಾಜ್ಯವನ್ನು ನಡೆಸುವಷ್ಟು ಅನುಭವವಿಲ್ಲ, ಬಿಹಾರದಲ್ಲಿ ಗೆದ್ದಿದ್ದರೆ ಅಂತಿಮವಾಗಿ ಲಾಲು ಯಾದವ್ ಚುಕ್ಕಾಣಿ ಹಿಡಿಯುತ್ತಿದ್ದರು” ಎಂದು ಪ್ರತಿಪಾದಿಸಿದ್ದಾರೆ.

“ತೇಜಸ್ವಿ ತುಂಬಾ ಒಳ್ಳೆಯ ಹುಡುಗ. ಆದರೆ ಬಿಹಾರವನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಆರ್ಜೆಡಿ ಅಧ್ಯಕ್ಷ  ಲಾಲು ಪ್ರಸಾದ್ ಯಾದವ್ ಅಂತಿಮವಾಗಿ ಬಿಹಾರವನ್ನು ಮತ್ತೇ ಜಂಗಲ್‌ರಾಜ್‌ಗೆ ಕರೆದೊಯ್ಯುವ ಚುಕ್ಕಾಣಿ ಹಿಡಿಯುತ್ತಿದ್ದರು. ತನ್ನ ಮುಂದಿನ ವಯಸ್ಸಿನಲ್ಲಿ ತೇಜಸ್ವಿ ರಾಜ್ಯವನ್ನು ಮುನ್ನಡೆಸಬಹುದು” ಎಂದು ಅವರು ಭೋಪಾಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದರು.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ನಂತರ ಮಧ್ಯಪ್ರದೇಶ ಉಪಚುನಾವಣೆಯ ಬಗ್ಗೆ ಮಾತನಾಡಿದ ಉಮಾ ಭಾರತಿ, “ಕಮಲ್ ನಾಥ್ ಈ ಚುನಾವಣೆಯಲ್ಲಿ ಚಾತುರ್ಯದಿಂದ ಹೋರಾಡಿದ್ದಾರೆ. ಬಹುಶಃ ಅವರು ತಮ್ಮ ಸರ್ಕಾರವನ್ನು ಚೆನ್ನಾಗಿ ನಡೆಸುತ್ತಿದ್ದರೆ ಈ ಚುನಾವಣೆಯ ಸಮಸ್ಯೆಗಳಿರಲಿಲ್ಲ. ಅವರು ನನ್ನ ಹಿರಿಯ ಅಣ್ಣನಿದ್ದಂತೆ, ಬಹಳ ಸಭ್ಯ ವ್ಯಕ್ತಿ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮಾಜಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ತನ್ನ 22 ಬೆಂಬಲಿಗ ಶಾಸಕರೊಂದಿಗೆ ರಾಜಿನಾಮೆ ನೀಡಿದ್ದರಿಂದ, ಮಧ್ಯಪ್ರದೇಶದಲ್ಲಿ ಕಮಲ್‌‌ ನಾಥ್‌ ನೇತೃತ್ವದ ಕಾಂಗ್ರೆಸ್ ಪಕ್ಷ ಆಡಳಿತ ಕುಸಿದು ಬಿದ್ದಿತ್ತು. ಅಲ್ಲಿ ಇತ್ತೀಚೆಗೆ ಒಟ್ಟು 28 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು, ಅದರಲ್ಲಿ ಬಿಜೆಪಿ 19 ಸ್ಥಾನಗಳಲ್ಲಿ ಜಯಗಲಿಸಿದ್ದರೆ, ಕಾಂಗ್ರೆಸ್ ಕೇವಲ 9 ಸ್ಥಾನಗಳಲ್ಲಿ ಜಯಗಳಿಸಿದೆ.

ಇದನ್ನೂ ಓದಿ: ಬಾಬರಿ ಮಸೀದಿ ಪ್ರಕರಣದಲ್ಲಿ ಗಲ್ಲಿಗೇರಿಸಲಿ, ಜಾಮೀನು ಪಡೆಯುವುದಿಲ್ಲ- ಉಮಾ ಭಾರತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...