Homeಮುಖಪುಟತೇಜಸ್ವಿ ಯಾದವ್ ಬಿಹಾರದ ಮುಂದಿನ ಮುಖ್ಯಮಂತ್ರಿ: ಸುಳಿವು ನೀಡಿದ ನಿತೀಶ್ ಕಮಾರ್

ತೇಜಸ್ವಿ ಯಾದವ್ ಬಿಹಾರದ ಮುಂದಿನ ಮುಖ್ಯಮಂತ್ರಿ: ಸುಳಿವು ನೀಡಿದ ನಿತೀಶ್ ಕಮಾರ್

- Advertisement -
- Advertisement -

2025ರ ಚುನಾವಣೆಯ ನಂತರ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾಗುತ್ತಾರೆ ಎಂಬುದಾಗಿ ಹಾಲಿ ಸಿಎಂ ನಿತೀಶ್ ಕುಮಾರ್ ಸುಳಿವು ನೀಡಿದ್ದಾರೆ.

“ನಾನು ಪ್ರಧಾನಿ ಅಭ್ಯರ್ಥಿ ಅಥವಾ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ. ಬಿಜೆಪಿಯನ್ನು ಸೋಲಿಸುವುದೇ ನನ್ನ ಗುರಿ. ನಾವು ತೇಜಸ್ವಿ ಯಾದವ್ ಅವರನ್ನು ಪ್ರೋತ್ಸಾಹಿಸಬೇಕಾಗಿದೆ” ಎಂದು ಬಿಹಾರದ ಆಡಳಿತ ಒಕ್ಕೂಟದ ಶಾಸಕರ ಸಭೆಯಲ್ಲಿ ನಿತೀಶ್ ಕುಮಾರ್ ಹೇಳಿದ್ದಾರೆ.

“ನಾವು ಬಹಳಷ್ಟು ಮಾಡುತ್ತಿದ್ದೇವೆ. ಇನ್ನೂ ಏನಾದರೂ ಉಳಿದಿದ್ದರೆ ಭವಿಷ್ಯದಲ್ಲಿ ತೇಜಸ್ವಿ ಯಾದವ್ ಆ ಕೆಲಸ ಮಾಡುತ್ತಾರೆ ಮತ್ತು ಎಲ್ಲವನ್ನೂ ಪೂರ್ಣಗೊಳಿಸುತ್ತಾರೆ. ನಮ್ಮನ್ನು ವಿಭಜಿಸಲು ಕೆಲವರು ಬಯಸುತ್ತಿದ್ದಾರೆ. ಆದರೆ ಯಾರ ಮಾತಿಗೂ ಮಣಿಯಲು ಪ್ರಯತ್ನಿಸಬೇಡಿ. ನಾವು ಒಗ್ಗಟ್ಟಾಗಿರಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು. ಯಾವುದೇ ಘರ್ಷಣೆ ಇರಬಾರದು” ಇಂದು ಈ ಮುಂಚೆ ನಿತೀಶ್ ಕುಮಾರ್ ಹೇಳಿದ್ದರು.

“ತೇಜಸ್ವಿ ಇಲ್ಲಿದ್ದಾರೆ, ಅವರನ್ನು ಮುಂದಕ್ಕೆ ಕೊಂಡೊಯ್ಯಲು ನಾನು ಏನು ಮಾಡಬಹುದೋ ಅದನ್ನು ಮಾಡಿದ್ದೇನೆ. ನಾನು ಅವರನ್ನು ಇನ್ನೂ ಮುಂದಕ್ಕೆ ಕರೆದೊಯ್ಯುತ್ತೇನೆ. ಅದನ್ನು ನೀವು ನೋಡುತ್ತೀರಿ. ನಮ್ಮ ಎಲ್ಲಾ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಲ್ಲ. ನಾವು ಏನೇ ಮಾಡಿದರೂ ಗಾಂಧಿ ಮಾರ್ಗವನ್ನೇ ಅನುಸರಿಸುತ್ತಿದ್ದೇವೆ’’ ಎಂದು ಹೇಳುವ ಮೂಲಕ ಬಿಹಾರದ ತನ್ನ ಮುಂದಿನ ಉತ್ತರಾಧಿಕಾರಿ ತೇಜಸ್ವಿ ಯಾದವ್ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ತೇಜಸ್ವಿ ಯಾದವ್, ‘ಸದ್ಯದ ನನ್ನ ಗುರಿ 2024ರ ಚುನಾವಣೆಯಾಗಿದೆ. ಉಳಿದ ವಿಷಯಗಳ ಬಗ್ಗೆ ನಂತರ ಯೋಚಿಸುತ್ತೇವೆ’ ಎಂದಿದ್ದಾರೆ.

2017ರಿಂದ ತೇಜಸ್ವಿ ಯಾದವ್ ನಿತೀಶ್ ಕುಮಾರ್‌ರವರ ಕಟು ಟೀಕಾಕಾರರಾಗಿದ್ದರು. ಏಕೆಂದರೆ ಆ ಸಮಯದಲ್ಲಿ ಮಹಾ ಘಟಬಂಧನ್ ಮೈತ್ರಿ ತೊರೆದು ನಿತೀಶ್ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದ್ದರು. ಅದೇ ರೀತಿಯಾಗಿ 2022ರಲ್ಲಿಯೂ ಸಹ ಬಿಜೆಪಿ ಕೈಬಿಟ್ಟು ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಿದ್ದಾರೆ. ಅಂದಿನಿಂದ ತೆಜಸ್ವಿ ಯಾದವ್ ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾಗಿದ್ದಾರೆ.

ಕಳೆದ ತಿಂಗಳು ತೇಜಸ್ವಿ ಯಾದವ್ ನಿತೀಶ್ ಕುಮಾರ್‌ರವರನ್ನು ಹೊಗಳಿದ್ದರು. “ನನ್ನ ತಂದೆ ಮತ್ತು ತಾಯಿ ಮುಖ್ಯಮಂತ್ರಿಯಾಗಿದ್ದರು, ವಿರೋಧ ಪಕ್ಷದ ನಾಯಕರಾಗಿದ್ದರು. ನಾನು ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೇನೆ. ಒಮ್ಮೆ ವಿರೋಧ ಪಕ್ಷದ ಮುಖಂಡನಾಗಿದ್ದೆ. ಅಲ್ಲದೆ ಬಹಳ ಅನುಭವವುಳ್ಳ ಮುಖ್ಯಮಂತ್ರಿಯವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಅದೃಷ್ಟವಂತೆ ವ್ಯಕ್ತಿ” ಅಲ್ಲವೇ? ಎಂದಿದ್ದರು.

ಇದನ್ನೂ ಓದಿ; ‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದಿದ್ದ ಕಾಂಗ್ರೆಸ್ ಮುಖಂಡನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...