Homeಮುಖಪುಟಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

- Advertisement -
- Advertisement -

ಅಪೌಷ್ಠಿಕತೆಯನ್ನು ಹೋಗಲಾಡಿಸುವ ಸಲುವಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಬೇಕೆಂಬ ತಜ್ಞರ ಶಿಫಾರಸ್ಸನ್ನು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಆದರೆ ಇದಕ್ಕೆ ಅಲ್ಲೊಂದು ಇಲ್ಲೊಂದು ಅಪಸ್ವರಗಳು ಕೇಳಿಬರುತ್ತಲೆ ಇವೆ. ಈ ಹಿಂದೆ ಕೆಲ ಮಠಾಧೀಶರು ಮೊಟ್ಟೆ ನೀಡಬಾರದು ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‌ರವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಸಹ ಮೊಟ್ಟೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ಮೊಟ್ಟ ಏಕೆ ಬೇಕೆಂದು ನೆಟ್ಟಿಗರು ಅವರಿಗೆ ಪಾಠ ಮಾಡಿದ್ದಾರೆ.

ಸಮಾನತೆಯ ಬಗ್ಗೆ ಮಾತನಾಡುತ್ತಲೇ ನೀವು ಏಕೆ ಸಸ್ಯಾಹಾರಿಗಳ ಪರ ವಹಿಸಿದ್ದೀರಿ? ಮಕ್ಕಳು ಅವರಿಷ್ಟ ಬಂದಿದ್ದನ್ನು ತಿನ್ನುತ್ತಾರೆ, ನಿಮ್ಮ ಹೇರಿಕೆ ಏಕೆ ಎಂದು ಹಲವು ಪ್ರಶ್ನಿಸಿದ್ದಾರೆ.

“ನಮ್ಮ ಕರ್ನಾಟಕ ಸರ್ಕಾರ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ನೀಡಲು ಏಕೆ ನಿರ್ಧರಿಸಿದೆ? ಅದೊಂದೆ ಪೋಷಣೆಯ ಏಕೈಕ ಮೂಲವಲ್ಲ. ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳನ್ನು ಇದು ಹೊರಗಿಡುತ್ತದೆ.
ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಸಿಗುವಂತೆ ನಮ್ಮ ನೀತಿಗಳನ್ನು ರೂಪಿಸಬೇಕು” ಎಂದು ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮಾಡಿದ್ದರು.

ಅದಕ್ಕೆ ಪ್ರತಿಯಾಗಿ ನೂರಾರು ಜನರು ಮೊಟ್ಟೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ನೀವು ಸಸ್ಯಹಾರಿಯಾಗಿದ್ದಾರೆ ಅದು ನಿಮ್ಮಿಷ್ಟ. ಆದರೆ ಅದನ್ನು ದಯವಿಟ್ಟು ಇತರರ ಮೇಲೆ ಹೇರಬೇಡಿ. ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ತಪ್ಪೇನು? ನಿಮ್ಮ ಬ್ರಾಹ್ಮಣ್ಯವನ್ನು ಶಾಲೆಗಳಿಗೆ ತರಬೇಡಿ” ಎಂದು ಲಿಖಿತ್ ಕುಮಾರ್ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಮೊಟ್ಟೆ/ಬಾಳೆಹಣ್ಣು/ಕಡ್ಲೆಮಿಠಾಯಿ ಈ ಮೂರು ಆಯ್ಕೆಗಳಿವೆ. ಮಕ್ಕಳು ತಮಗೆ ಬೇಕಾದುದ್ದನ್ನು ತಿನ್ನುತ್ತಾರೆ. ಇಂತದ್ದೆ ತಿನ್ನಿ ಎಂದು ಹೇಳಲು ನಾವ್ಯಾರು ಎಂದು ಗಣೇಶ್ ಭಟ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ತೇಜಸ್ವಿನಿಯವರ ಪ್ರಕಾರ ಬಹುಸಂಖ್ಯಾತ ಮಾಂಸಾಹಾರಿಗಳು ಅಲ್ಪಸಂಖ್ಯಾತ ಸಸ್ಯಾಹಾರಿಗಳಿಗಾಗಿ ತಮ್ಮ ಆಹಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು?!! ವಾಹ್, ಇದೇ ನೋಡಿ ಬ್ರಾಹ್ಮಣ್ಯ ಅಂದರೆ!. ಇದರ ಬದಲಿಗೆ ಯಾಕೆ ಸಸ್ಯಾಹಾರಿಗಳೂ ಮೊಟ್ಟೆ ತಿನ್ನಬಾರದು.? ಆರೋಗ್ಯಕ್ಕೆ ಒಳ್ಳೆಯದು. ಆಗ ಸಮಾನತೆ ಕೂಡಾ ಉಂಟಾಗುತ್ತದೆ ಅಲ್ವಾ?!! ಎಂದು ಶ್ರೀನಿವಾಸ ಕಾರ್ಕಳರವರು ತಿರುಗೇಟು ನೀಡಿದ್ದಾರೆ.

ದಯವಿಟ್ಟು ಮೊಟ್ಟೆಯಷ್ಟು ಅಗ್ಗದ, ಪೌಷ್ಟಿಕ ಮತ್ತು ರುಚಿಕರವಾದ ಪರ್ಯಾಯವನ್ನು ಸೂಚಿಸಿ. ಕೆಲವು ದುರ್ಬಲವಾದ ಬ್ರಾಹ್ಮಣ ಇಂದ್ರಿಯಗಳನ್ನು ರಕ್ಷಿಸಲು ನಮ್ಮ ನೀತಿಗಳನ್ನು ಹೇರಬಾರದು. ಮೊಟ್ಟೆ ತಿನ್ನದವರಿಗೆ ಚಿಕ್ಕಿ ಇದೆ. ಮೊಟ್ಟೆ ತಿನ್ನುವವರು ಮೊಟ್ಟೆ ತಿಂದರೆ ಏಕೆ ಸಮಸ್ಯೆ? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಸರ್ಕಾರಿ ಶಾಲೆಲಿ ಬ್ರಾಹ್ಮಣ, ಲಿಂಗಾಯತ ಹೀಗೆ ಸಸ್ಯಹಾರಿ ಸಮುದಾಯದ ಮಕ್ಕಳು ಹೆಚ್ಚು ಓದ್ತಾಯಿಲ್ಲ. OBC/SC/ST ಮಕ್ಕಳು ಅಧಿಕವಾಗಿದ್ದರೆ. ಮೊಟ್ಟೆನು ಕೊಡ್ತಾನೆ, ಮಾಂಸನು ಕೊಡ್ತಾರೆ. ದುಬಾರಿ ಪೀಸ್ ಕಟ್ಟುವ ಶಾಲೆಲಿ ಮಕ್ಳನ್ನ ಓದಿಸುತ್ತಾ ಇರುವ ನೀವುಗಳು ಸರ್ಕಾರಿ ಶಾಲೆಲಿ ನಿಮ್ಮ ಪದ್ಧತಿಯನ್ನ ಹೇರಿಕೆ ಮಾಡೋಕೆ ಬರಬೇಡಿ. ತಮಿಳುನಾಡಿನಲ್ಲಿ ವಾರಕ್ಕೆ 5 ದಿನ ಮೊಟ್ಟೆ. ತೆಲಂಗಾಣ, ಆಂಧ್ರದಲ್ಲಿ ಮೊಟ್ಟೆ ಕೊಡ್ತಾರೆ. ಬರೀ ಧಾನ್ಯಗಳಿಂದ ಸಂಪೂರ್ಣ ಪೌಷ್ಟಿಕಾಂಶ ಬರಲ್ಲ. ಮೀನು, ಮೊಟ್ಟೆ, ಮಾಂಸ, ಹಾಲು ಅಗತ್ಯ. ಕಲ್ಯಾಣ ಕರ್ನಾಟಕ ಭಾಗದ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮೊಟ್ಟೆ ಕೊಟ್ಟಿದ್ದರಿಂದ ಅವರು ನ್ಯೂನಪೋಷಣೆಯ ಕೊರತೆ ಇಳಿಮುಖವಾಗಿದೆ. ಮೊದಲು ನ್ಯೂನಪೋಷಣೆಯ ತೀವ್ರ ಕೊರತೆ ಇತ್ತು” ಎಂದು ಟ್ವಿಟರ್ ಬಳಕೆದಾರರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

79% ಕನ್ನಡಿಗರು ಮಾಂಸಾಹಾರ ಸೇವಿಸುತ್ತಾರೆ. ಮೊಟ್ಟೆ ತಿನ್ನುವ ಜನಸಂಖ್ಯೆಯು ಕನಿಷ್ಠ 90% ಆಗಿರುತ್ತದೆ ಎಂದು ನನಗೆ ಖಾತ್ರಿಯಿದೆ. ಹಾಗಾದರೆ 10% ಜನರಿಗೆ ಪರ್ಯಾಯವನ್ನು ಒದಗಿಸಿದಾಗ 90% ಜನರು ಏನು ತಿನ್ನುತ್ತಾರೆ ಎಂಬುದನ್ನು ಏಕೆ ನಿರ್ಧರಿಸಬೇಕು. ನಿಮ್ಮ ಸಮಸ್ಯೆ ಏನು ಮೇಡಂ, ನೀವು ವಿವರಿಸುವಿರಾ? ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 75: ಹಳೇ ರಾಜಕಾರಣದ ಕಡೇ ವರಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದೋ ಮೊಟ್ಟೆ ತಿನ್ನುತ್ತಿರುವ ನಿಮಗೆ ಹೀಗೆ ಎಲ್ಲರೂ ಮೊಟ್ಟೆ ತಿಂದರೆ ಅದರ ಬೆಲೆ ಜಾಸ್ತಿ ಆಗಬಹುದೆಂಬ ಭಯ,ಅಥವಾ ನಿಮ್ಮ ವಕ್ರ ಬುದ್ದಿಯನ್ನು ಇದು ತೋರಿಸುತ್ತದೆ,ಇಲ್ಲವೇ ದೇವರ ಮೇಲೆ ಆಣೆ ಮಾಡಿ ಸತ್ಯ ಹೇಳಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...