Homeಮುಖಪುಟಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

- Advertisement -
- Advertisement -

ಅಪೌಷ್ಠಿಕತೆಯನ್ನು ಹೋಗಲಾಡಿಸುವ ಸಲುವಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಬೇಕೆಂಬ ತಜ್ಞರ ಶಿಫಾರಸ್ಸನ್ನು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಆದರೆ ಇದಕ್ಕೆ ಅಲ್ಲೊಂದು ಇಲ್ಲೊಂದು ಅಪಸ್ವರಗಳು ಕೇಳಿಬರುತ್ತಲೆ ಇವೆ. ಈ ಹಿಂದೆ ಕೆಲ ಮಠಾಧೀಶರು ಮೊಟ್ಟೆ ನೀಡಬಾರದು ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‌ರವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಸಹ ಮೊಟ್ಟೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ಮೊಟ್ಟ ಏಕೆ ಬೇಕೆಂದು ನೆಟ್ಟಿಗರು ಅವರಿಗೆ ಪಾಠ ಮಾಡಿದ್ದಾರೆ.

ಸಮಾನತೆಯ ಬಗ್ಗೆ ಮಾತನಾಡುತ್ತಲೇ ನೀವು ಏಕೆ ಸಸ್ಯಾಹಾರಿಗಳ ಪರ ವಹಿಸಿದ್ದೀರಿ? ಮಕ್ಕಳು ಅವರಿಷ್ಟ ಬಂದಿದ್ದನ್ನು ತಿನ್ನುತ್ತಾರೆ, ನಿಮ್ಮ ಹೇರಿಕೆ ಏಕೆ ಎಂದು ಹಲವು ಪ್ರಶ್ನಿಸಿದ್ದಾರೆ.

“ನಮ್ಮ ಕರ್ನಾಟಕ ಸರ್ಕಾರ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ನೀಡಲು ಏಕೆ ನಿರ್ಧರಿಸಿದೆ? ಅದೊಂದೆ ಪೋಷಣೆಯ ಏಕೈಕ ಮೂಲವಲ್ಲ. ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳನ್ನು ಇದು ಹೊರಗಿಡುತ್ತದೆ.
ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಸಿಗುವಂತೆ ನಮ್ಮ ನೀತಿಗಳನ್ನು ರೂಪಿಸಬೇಕು” ಎಂದು ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮಾಡಿದ್ದರು.

ಅದಕ್ಕೆ ಪ್ರತಿಯಾಗಿ ನೂರಾರು ಜನರು ಮೊಟ್ಟೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ನೀವು ಸಸ್ಯಹಾರಿಯಾಗಿದ್ದಾರೆ ಅದು ನಿಮ್ಮಿಷ್ಟ. ಆದರೆ ಅದನ್ನು ದಯವಿಟ್ಟು ಇತರರ ಮೇಲೆ ಹೇರಬೇಡಿ. ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ತಪ್ಪೇನು? ನಿಮ್ಮ ಬ್ರಾಹ್ಮಣ್ಯವನ್ನು ಶಾಲೆಗಳಿಗೆ ತರಬೇಡಿ” ಎಂದು ಲಿಖಿತ್ ಕುಮಾರ್ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಮೊಟ್ಟೆ/ಬಾಳೆಹಣ್ಣು/ಕಡ್ಲೆಮಿಠಾಯಿ ಈ ಮೂರು ಆಯ್ಕೆಗಳಿವೆ. ಮಕ್ಕಳು ತಮಗೆ ಬೇಕಾದುದ್ದನ್ನು ತಿನ್ನುತ್ತಾರೆ. ಇಂತದ್ದೆ ತಿನ್ನಿ ಎಂದು ಹೇಳಲು ನಾವ್ಯಾರು ಎಂದು ಗಣೇಶ್ ಭಟ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ತೇಜಸ್ವಿನಿಯವರ ಪ್ರಕಾರ ಬಹುಸಂಖ್ಯಾತ ಮಾಂಸಾಹಾರಿಗಳು ಅಲ್ಪಸಂಖ್ಯಾತ ಸಸ್ಯಾಹಾರಿಗಳಿಗಾಗಿ ತಮ್ಮ ಆಹಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು?!! ವಾಹ್, ಇದೇ ನೋಡಿ ಬ್ರಾಹ್ಮಣ್ಯ ಅಂದರೆ!. ಇದರ ಬದಲಿಗೆ ಯಾಕೆ ಸಸ್ಯಾಹಾರಿಗಳೂ ಮೊಟ್ಟೆ ತಿನ್ನಬಾರದು.? ಆರೋಗ್ಯಕ್ಕೆ ಒಳ್ಳೆಯದು. ಆಗ ಸಮಾನತೆ ಕೂಡಾ ಉಂಟಾಗುತ್ತದೆ ಅಲ್ವಾ?!! ಎಂದು ಶ್ರೀನಿವಾಸ ಕಾರ್ಕಳರವರು ತಿರುಗೇಟು ನೀಡಿದ್ದಾರೆ.

ದಯವಿಟ್ಟು ಮೊಟ್ಟೆಯಷ್ಟು ಅಗ್ಗದ, ಪೌಷ್ಟಿಕ ಮತ್ತು ರುಚಿಕರವಾದ ಪರ್ಯಾಯವನ್ನು ಸೂಚಿಸಿ. ಕೆಲವು ದುರ್ಬಲವಾದ ಬ್ರಾಹ್ಮಣ ಇಂದ್ರಿಯಗಳನ್ನು ರಕ್ಷಿಸಲು ನಮ್ಮ ನೀತಿಗಳನ್ನು ಹೇರಬಾರದು. ಮೊಟ್ಟೆ ತಿನ್ನದವರಿಗೆ ಚಿಕ್ಕಿ ಇದೆ. ಮೊಟ್ಟೆ ತಿನ್ನುವವರು ಮೊಟ್ಟೆ ತಿಂದರೆ ಏಕೆ ಸಮಸ್ಯೆ? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಸರ್ಕಾರಿ ಶಾಲೆಲಿ ಬ್ರಾಹ್ಮಣ, ಲಿಂಗಾಯತ ಹೀಗೆ ಸಸ್ಯಹಾರಿ ಸಮುದಾಯದ ಮಕ್ಕಳು ಹೆಚ್ಚು ಓದ್ತಾಯಿಲ್ಲ. OBC/SC/ST ಮಕ್ಕಳು ಅಧಿಕವಾಗಿದ್ದರೆ. ಮೊಟ್ಟೆನು ಕೊಡ್ತಾನೆ, ಮಾಂಸನು ಕೊಡ್ತಾರೆ. ದುಬಾರಿ ಪೀಸ್ ಕಟ್ಟುವ ಶಾಲೆಲಿ ಮಕ್ಳನ್ನ ಓದಿಸುತ್ತಾ ಇರುವ ನೀವುಗಳು ಸರ್ಕಾರಿ ಶಾಲೆಲಿ ನಿಮ್ಮ ಪದ್ಧತಿಯನ್ನ ಹೇರಿಕೆ ಮಾಡೋಕೆ ಬರಬೇಡಿ. ತಮಿಳುನಾಡಿನಲ್ಲಿ ವಾರಕ್ಕೆ 5 ದಿನ ಮೊಟ್ಟೆ. ತೆಲಂಗಾಣ, ಆಂಧ್ರದಲ್ಲಿ ಮೊಟ್ಟೆ ಕೊಡ್ತಾರೆ. ಬರೀ ಧಾನ್ಯಗಳಿಂದ ಸಂಪೂರ್ಣ ಪೌಷ್ಟಿಕಾಂಶ ಬರಲ್ಲ. ಮೀನು, ಮೊಟ್ಟೆ, ಮಾಂಸ, ಹಾಲು ಅಗತ್ಯ. ಕಲ್ಯಾಣ ಕರ್ನಾಟಕ ಭಾಗದ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮೊಟ್ಟೆ ಕೊಟ್ಟಿದ್ದರಿಂದ ಅವರು ನ್ಯೂನಪೋಷಣೆಯ ಕೊರತೆ ಇಳಿಮುಖವಾಗಿದೆ. ಮೊದಲು ನ್ಯೂನಪೋಷಣೆಯ ತೀವ್ರ ಕೊರತೆ ಇತ್ತು” ಎಂದು ಟ್ವಿಟರ್ ಬಳಕೆದಾರರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

79% ಕನ್ನಡಿಗರು ಮಾಂಸಾಹಾರ ಸೇವಿಸುತ್ತಾರೆ. ಮೊಟ್ಟೆ ತಿನ್ನುವ ಜನಸಂಖ್ಯೆಯು ಕನಿಷ್ಠ 90% ಆಗಿರುತ್ತದೆ ಎಂದು ನನಗೆ ಖಾತ್ರಿಯಿದೆ. ಹಾಗಾದರೆ 10% ಜನರಿಗೆ ಪರ್ಯಾಯವನ್ನು ಒದಗಿಸಿದಾಗ 90% ಜನರು ಏನು ತಿನ್ನುತ್ತಾರೆ ಎಂಬುದನ್ನು ಏಕೆ ನಿರ್ಧರಿಸಬೇಕು. ನಿಮ್ಮ ಸಮಸ್ಯೆ ಏನು ಮೇಡಂ, ನೀವು ವಿವರಿಸುವಿರಾ? ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 75: ಹಳೇ ರಾಜಕಾರಣದ ಕಡೇ ವರಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದೋ ಮೊಟ್ಟೆ ತಿನ್ನುತ್ತಿರುವ ನಿಮಗೆ ಹೀಗೆ ಎಲ್ಲರೂ ಮೊಟ್ಟೆ ತಿಂದರೆ ಅದರ ಬೆಲೆ ಜಾಸ್ತಿ ಆಗಬಹುದೆಂಬ ಭಯ,ಅಥವಾ ನಿಮ್ಮ ವಕ್ರ ಬುದ್ದಿಯನ್ನು ಇದು ತೋರಿಸುತ್ತದೆ,ಇಲ್ಲವೇ ದೇವರ ಮೇಲೆ ಆಣೆ ಮಾಡಿ ಸತ್ಯ ಹೇಳಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...