Homeಮುಖಪುಟಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

- Advertisement -
- Advertisement -

ಅಪೌಷ್ಠಿಕತೆಯನ್ನು ಹೋಗಲಾಡಿಸುವ ಸಲುವಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಬೇಕೆಂಬ ತಜ್ಞರ ಶಿಫಾರಸ್ಸನ್ನು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಆದರೆ ಇದಕ್ಕೆ ಅಲ್ಲೊಂದು ಇಲ್ಲೊಂದು ಅಪಸ್ವರಗಳು ಕೇಳಿಬರುತ್ತಲೆ ಇವೆ. ಈ ಹಿಂದೆ ಕೆಲ ಮಠಾಧೀಶರು ಮೊಟ್ಟೆ ನೀಡಬಾರದು ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‌ರವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಸಹ ಮೊಟ್ಟೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ಮೊಟ್ಟ ಏಕೆ ಬೇಕೆಂದು ನೆಟ್ಟಿಗರು ಅವರಿಗೆ ಪಾಠ ಮಾಡಿದ್ದಾರೆ.

ಸಮಾನತೆಯ ಬಗ್ಗೆ ಮಾತನಾಡುತ್ತಲೇ ನೀವು ಏಕೆ ಸಸ್ಯಾಹಾರಿಗಳ ಪರ ವಹಿಸಿದ್ದೀರಿ? ಮಕ್ಕಳು ಅವರಿಷ್ಟ ಬಂದಿದ್ದನ್ನು ತಿನ್ನುತ್ತಾರೆ, ನಿಮ್ಮ ಹೇರಿಕೆ ಏಕೆ ಎಂದು ಹಲವು ಪ್ರಶ್ನಿಸಿದ್ದಾರೆ.

“ನಮ್ಮ ಕರ್ನಾಟಕ ಸರ್ಕಾರ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ನೀಡಲು ಏಕೆ ನಿರ್ಧರಿಸಿದೆ? ಅದೊಂದೆ ಪೋಷಣೆಯ ಏಕೈಕ ಮೂಲವಲ್ಲ. ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳನ್ನು ಇದು ಹೊರಗಿಡುತ್ತದೆ.
ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಸಿಗುವಂತೆ ನಮ್ಮ ನೀತಿಗಳನ್ನು ರೂಪಿಸಬೇಕು” ಎಂದು ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮಾಡಿದ್ದರು.

ಅದಕ್ಕೆ ಪ್ರತಿಯಾಗಿ ನೂರಾರು ಜನರು ಮೊಟ್ಟೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ನೀವು ಸಸ್ಯಹಾರಿಯಾಗಿದ್ದಾರೆ ಅದು ನಿಮ್ಮಿಷ್ಟ. ಆದರೆ ಅದನ್ನು ದಯವಿಟ್ಟು ಇತರರ ಮೇಲೆ ಹೇರಬೇಡಿ. ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ತಪ್ಪೇನು? ನಿಮ್ಮ ಬ್ರಾಹ್ಮಣ್ಯವನ್ನು ಶಾಲೆಗಳಿಗೆ ತರಬೇಡಿ” ಎಂದು ಲಿಖಿತ್ ಕುಮಾರ್ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಮೊಟ್ಟೆ/ಬಾಳೆಹಣ್ಣು/ಕಡ್ಲೆಮಿಠಾಯಿ ಈ ಮೂರು ಆಯ್ಕೆಗಳಿವೆ. ಮಕ್ಕಳು ತಮಗೆ ಬೇಕಾದುದ್ದನ್ನು ತಿನ್ನುತ್ತಾರೆ. ಇಂತದ್ದೆ ತಿನ್ನಿ ಎಂದು ಹೇಳಲು ನಾವ್ಯಾರು ಎಂದು ಗಣೇಶ್ ಭಟ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ತೇಜಸ್ವಿನಿಯವರ ಪ್ರಕಾರ ಬಹುಸಂಖ್ಯಾತ ಮಾಂಸಾಹಾರಿಗಳು ಅಲ್ಪಸಂಖ್ಯಾತ ಸಸ್ಯಾಹಾರಿಗಳಿಗಾಗಿ ತಮ್ಮ ಆಹಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು?!! ವಾಹ್, ಇದೇ ನೋಡಿ ಬ್ರಾಹ್ಮಣ್ಯ ಅಂದರೆ!. ಇದರ ಬದಲಿಗೆ ಯಾಕೆ ಸಸ್ಯಾಹಾರಿಗಳೂ ಮೊಟ್ಟೆ ತಿನ್ನಬಾರದು.? ಆರೋಗ್ಯಕ್ಕೆ ಒಳ್ಳೆಯದು. ಆಗ ಸಮಾನತೆ ಕೂಡಾ ಉಂಟಾಗುತ್ತದೆ ಅಲ್ವಾ?!! ಎಂದು ಶ್ರೀನಿವಾಸ ಕಾರ್ಕಳರವರು ತಿರುಗೇಟು ನೀಡಿದ್ದಾರೆ.

ದಯವಿಟ್ಟು ಮೊಟ್ಟೆಯಷ್ಟು ಅಗ್ಗದ, ಪೌಷ್ಟಿಕ ಮತ್ತು ರುಚಿಕರವಾದ ಪರ್ಯಾಯವನ್ನು ಸೂಚಿಸಿ. ಕೆಲವು ದುರ್ಬಲವಾದ ಬ್ರಾಹ್ಮಣ ಇಂದ್ರಿಯಗಳನ್ನು ರಕ್ಷಿಸಲು ನಮ್ಮ ನೀತಿಗಳನ್ನು ಹೇರಬಾರದು. ಮೊಟ್ಟೆ ತಿನ್ನದವರಿಗೆ ಚಿಕ್ಕಿ ಇದೆ. ಮೊಟ್ಟೆ ತಿನ್ನುವವರು ಮೊಟ್ಟೆ ತಿಂದರೆ ಏಕೆ ಸಮಸ್ಯೆ? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಸರ್ಕಾರಿ ಶಾಲೆಲಿ ಬ್ರಾಹ್ಮಣ, ಲಿಂಗಾಯತ ಹೀಗೆ ಸಸ್ಯಹಾರಿ ಸಮುದಾಯದ ಮಕ್ಕಳು ಹೆಚ್ಚು ಓದ್ತಾಯಿಲ್ಲ. OBC/SC/ST ಮಕ್ಕಳು ಅಧಿಕವಾಗಿದ್ದರೆ. ಮೊಟ್ಟೆನು ಕೊಡ್ತಾನೆ, ಮಾಂಸನು ಕೊಡ್ತಾರೆ. ದುಬಾರಿ ಪೀಸ್ ಕಟ್ಟುವ ಶಾಲೆಲಿ ಮಕ್ಳನ್ನ ಓದಿಸುತ್ತಾ ಇರುವ ನೀವುಗಳು ಸರ್ಕಾರಿ ಶಾಲೆಲಿ ನಿಮ್ಮ ಪದ್ಧತಿಯನ್ನ ಹೇರಿಕೆ ಮಾಡೋಕೆ ಬರಬೇಡಿ. ತಮಿಳುನಾಡಿನಲ್ಲಿ ವಾರಕ್ಕೆ 5 ದಿನ ಮೊಟ್ಟೆ. ತೆಲಂಗಾಣ, ಆಂಧ್ರದಲ್ಲಿ ಮೊಟ್ಟೆ ಕೊಡ್ತಾರೆ. ಬರೀ ಧಾನ್ಯಗಳಿಂದ ಸಂಪೂರ್ಣ ಪೌಷ್ಟಿಕಾಂಶ ಬರಲ್ಲ. ಮೀನು, ಮೊಟ್ಟೆ, ಮಾಂಸ, ಹಾಲು ಅಗತ್ಯ. ಕಲ್ಯಾಣ ಕರ್ನಾಟಕ ಭಾಗದ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮೊಟ್ಟೆ ಕೊಟ್ಟಿದ್ದರಿಂದ ಅವರು ನ್ಯೂನಪೋಷಣೆಯ ಕೊರತೆ ಇಳಿಮುಖವಾಗಿದೆ. ಮೊದಲು ನ್ಯೂನಪೋಷಣೆಯ ತೀವ್ರ ಕೊರತೆ ಇತ್ತು” ಎಂದು ಟ್ವಿಟರ್ ಬಳಕೆದಾರರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

79% ಕನ್ನಡಿಗರು ಮಾಂಸಾಹಾರ ಸೇವಿಸುತ್ತಾರೆ. ಮೊಟ್ಟೆ ತಿನ್ನುವ ಜನಸಂಖ್ಯೆಯು ಕನಿಷ್ಠ 90% ಆಗಿರುತ್ತದೆ ಎಂದು ನನಗೆ ಖಾತ್ರಿಯಿದೆ. ಹಾಗಾದರೆ 10% ಜನರಿಗೆ ಪರ್ಯಾಯವನ್ನು ಒದಗಿಸಿದಾಗ 90% ಜನರು ಏನು ತಿನ್ನುತ್ತಾರೆ ಎಂಬುದನ್ನು ಏಕೆ ನಿರ್ಧರಿಸಬೇಕು. ನಿಮ್ಮ ಸಮಸ್ಯೆ ಏನು ಮೇಡಂ, ನೀವು ವಿವರಿಸುವಿರಾ? ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 75: ಹಳೇ ರಾಜಕಾರಣದ ಕಡೇ ವರಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದೋ ಮೊಟ್ಟೆ ತಿನ್ನುತ್ತಿರುವ ನಿಮಗೆ ಹೀಗೆ ಎಲ್ಲರೂ ಮೊಟ್ಟೆ ತಿಂದರೆ ಅದರ ಬೆಲೆ ಜಾಸ್ತಿ ಆಗಬಹುದೆಂಬ ಭಯ,ಅಥವಾ ನಿಮ್ಮ ವಕ್ರ ಬುದ್ದಿಯನ್ನು ಇದು ತೋರಿಸುತ್ತದೆ,ಇಲ್ಲವೇ ದೇವರ ಮೇಲೆ ಆಣೆ ಮಾಡಿ ಸತ್ಯ ಹೇಳಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...