Homeಮುಖಪುಟಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

- Advertisement -
- Advertisement -

ಅಪೌಷ್ಠಿಕತೆಯನ್ನು ಹೋಗಲಾಡಿಸುವ ಸಲುವಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಬೇಕೆಂಬ ತಜ್ಞರ ಶಿಫಾರಸ್ಸನ್ನು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಆದರೆ ಇದಕ್ಕೆ ಅಲ್ಲೊಂದು ಇಲ್ಲೊಂದು ಅಪಸ್ವರಗಳು ಕೇಳಿಬರುತ್ತಲೆ ಇವೆ. ಈ ಹಿಂದೆ ಕೆಲ ಮಠಾಧೀಶರು ಮೊಟ್ಟೆ ನೀಡಬಾರದು ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‌ರವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಸಹ ಮೊಟ್ಟೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ಮೊಟ್ಟ ಏಕೆ ಬೇಕೆಂದು ನೆಟ್ಟಿಗರು ಅವರಿಗೆ ಪಾಠ ಮಾಡಿದ್ದಾರೆ.

ಸಮಾನತೆಯ ಬಗ್ಗೆ ಮಾತನಾಡುತ್ತಲೇ ನೀವು ಏಕೆ ಸಸ್ಯಾಹಾರಿಗಳ ಪರ ವಹಿಸಿದ್ದೀರಿ? ಮಕ್ಕಳು ಅವರಿಷ್ಟ ಬಂದಿದ್ದನ್ನು ತಿನ್ನುತ್ತಾರೆ, ನಿಮ್ಮ ಹೇರಿಕೆ ಏಕೆ ಎಂದು ಹಲವು ಪ್ರಶ್ನಿಸಿದ್ದಾರೆ.

“ನಮ್ಮ ಕರ್ನಾಟಕ ಸರ್ಕಾರ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ನೀಡಲು ಏಕೆ ನಿರ್ಧರಿಸಿದೆ? ಅದೊಂದೆ ಪೋಷಣೆಯ ಏಕೈಕ ಮೂಲವಲ್ಲ. ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳನ್ನು ಇದು ಹೊರಗಿಡುತ್ತದೆ.
ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಸಿಗುವಂತೆ ನಮ್ಮ ನೀತಿಗಳನ್ನು ರೂಪಿಸಬೇಕು” ಎಂದು ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮಾಡಿದ್ದರು.

ಅದಕ್ಕೆ ಪ್ರತಿಯಾಗಿ ನೂರಾರು ಜನರು ಮೊಟ್ಟೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ನೀವು ಸಸ್ಯಹಾರಿಯಾಗಿದ್ದಾರೆ ಅದು ನಿಮ್ಮಿಷ್ಟ. ಆದರೆ ಅದನ್ನು ದಯವಿಟ್ಟು ಇತರರ ಮೇಲೆ ಹೇರಬೇಡಿ. ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ತಪ್ಪೇನು? ನಿಮ್ಮ ಬ್ರಾಹ್ಮಣ್ಯವನ್ನು ಶಾಲೆಗಳಿಗೆ ತರಬೇಡಿ” ಎಂದು ಲಿಖಿತ್ ಕುಮಾರ್ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಮೊಟ್ಟೆ/ಬಾಳೆಹಣ್ಣು/ಕಡ್ಲೆಮಿಠಾಯಿ ಈ ಮೂರು ಆಯ್ಕೆಗಳಿವೆ. ಮಕ್ಕಳು ತಮಗೆ ಬೇಕಾದುದ್ದನ್ನು ತಿನ್ನುತ್ತಾರೆ. ಇಂತದ್ದೆ ತಿನ್ನಿ ಎಂದು ಹೇಳಲು ನಾವ್ಯಾರು ಎಂದು ಗಣೇಶ್ ಭಟ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ತೇಜಸ್ವಿನಿಯವರ ಪ್ರಕಾರ ಬಹುಸಂಖ್ಯಾತ ಮಾಂಸಾಹಾರಿಗಳು ಅಲ್ಪಸಂಖ್ಯಾತ ಸಸ್ಯಾಹಾರಿಗಳಿಗಾಗಿ ತಮ್ಮ ಆಹಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು?!! ವಾಹ್, ಇದೇ ನೋಡಿ ಬ್ರಾಹ್ಮಣ್ಯ ಅಂದರೆ!. ಇದರ ಬದಲಿಗೆ ಯಾಕೆ ಸಸ್ಯಾಹಾರಿಗಳೂ ಮೊಟ್ಟೆ ತಿನ್ನಬಾರದು.? ಆರೋಗ್ಯಕ್ಕೆ ಒಳ್ಳೆಯದು. ಆಗ ಸಮಾನತೆ ಕೂಡಾ ಉಂಟಾಗುತ್ತದೆ ಅಲ್ವಾ?!! ಎಂದು ಶ್ರೀನಿವಾಸ ಕಾರ್ಕಳರವರು ತಿರುಗೇಟು ನೀಡಿದ್ದಾರೆ.

ದಯವಿಟ್ಟು ಮೊಟ್ಟೆಯಷ್ಟು ಅಗ್ಗದ, ಪೌಷ್ಟಿಕ ಮತ್ತು ರುಚಿಕರವಾದ ಪರ್ಯಾಯವನ್ನು ಸೂಚಿಸಿ. ಕೆಲವು ದುರ್ಬಲವಾದ ಬ್ರಾಹ್ಮಣ ಇಂದ್ರಿಯಗಳನ್ನು ರಕ್ಷಿಸಲು ನಮ್ಮ ನೀತಿಗಳನ್ನು ಹೇರಬಾರದು. ಮೊಟ್ಟೆ ತಿನ್ನದವರಿಗೆ ಚಿಕ್ಕಿ ಇದೆ. ಮೊಟ್ಟೆ ತಿನ್ನುವವರು ಮೊಟ್ಟೆ ತಿಂದರೆ ಏಕೆ ಸಮಸ್ಯೆ? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಸರ್ಕಾರಿ ಶಾಲೆಲಿ ಬ್ರಾಹ್ಮಣ, ಲಿಂಗಾಯತ ಹೀಗೆ ಸಸ್ಯಹಾರಿ ಸಮುದಾಯದ ಮಕ್ಕಳು ಹೆಚ್ಚು ಓದ್ತಾಯಿಲ್ಲ. OBC/SC/ST ಮಕ್ಕಳು ಅಧಿಕವಾಗಿದ್ದರೆ. ಮೊಟ್ಟೆನು ಕೊಡ್ತಾನೆ, ಮಾಂಸನು ಕೊಡ್ತಾರೆ. ದುಬಾರಿ ಪೀಸ್ ಕಟ್ಟುವ ಶಾಲೆಲಿ ಮಕ್ಳನ್ನ ಓದಿಸುತ್ತಾ ಇರುವ ನೀವುಗಳು ಸರ್ಕಾರಿ ಶಾಲೆಲಿ ನಿಮ್ಮ ಪದ್ಧತಿಯನ್ನ ಹೇರಿಕೆ ಮಾಡೋಕೆ ಬರಬೇಡಿ. ತಮಿಳುನಾಡಿನಲ್ಲಿ ವಾರಕ್ಕೆ 5 ದಿನ ಮೊಟ್ಟೆ. ತೆಲಂಗಾಣ, ಆಂಧ್ರದಲ್ಲಿ ಮೊಟ್ಟೆ ಕೊಡ್ತಾರೆ. ಬರೀ ಧಾನ್ಯಗಳಿಂದ ಸಂಪೂರ್ಣ ಪೌಷ್ಟಿಕಾಂಶ ಬರಲ್ಲ. ಮೀನು, ಮೊಟ್ಟೆ, ಮಾಂಸ, ಹಾಲು ಅಗತ್ಯ. ಕಲ್ಯಾಣ ಕರ್ನಾಟಕ ಭಾಗದ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮೊಟ್ಟೆ ಕೊಟ್ಟಿದ್ದರಿಂದ ಅವರು ನ್ಯೂನಪೋಷಣೆಯ ಕೊರತೆ ಇಳಿಮುಖವಾಗಿದೆ. ಮೊದಲು ನ್ಯೂನಪೋಷಣೆಯ ತೀವ್ರ ಕೊರತೆ ಇತ್ತು” ಎಂದು ಟ್ವಿಟರ್ ಬಳಕೆದಾರರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

79% ಕನ್ನಡಿಗರು ಮಾಂಸಾಹಾರ ಸೇವಿಸುತ್ತಾರೆ. ಮೊಟ್ಟೆ ತಿನ್ನುವ ಜನಸಂಖ್ಯೆಯು ಕನಿಷ್ಠ 90% ಆಗಿರುತ್ತದೆ ಎಂದು ನನಗೆ ಖಾತ್ರಿಯಿದೆ. ಹಾಗಾದರೆ 10% ಜನರಿಗೆ ಪರ್ಯಾಯವನ್ನು ಒದಗಿಸಿದಾಗ 90% ಜನರು ಏನು ತಿನ್ನುತ್ತಾರೆ ಎಂಬುದನ್ನು ಏಕೆ ನಿರ್ಧರಿಸಬೇಕು. ನಿಮ್ಮ ಸಮಸ್ಯೆ ಏನು ಮೇಡಂ, ನೀವು ವಿವರಿಸುವಿರಾ? ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 75: ಹಳೇ ರಾಜಕಾರಣದ ಕಡೇ ವರಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದೋ ಮೊಟ್ಟೆ ತಿನ್ನುತ್ತಿರುವ ನಿಮಗೆ ಹೀಗೆ ಎಲ್ಲರೂ ಮೊಟ್ಟೆ ತಿಂದರೆ ಅದರ ಬೆಲೆ ಜಾಸ್ತಿ ಆಗಬಹುದೆಂಬ ಭಯ,ಅಥವಾ ನಿಮ್ಮ ವಕ್ರ ಬುದ್ದಿಯನ್ನು ಇದು ತೋರಿಸುತ್ತದೆ,ಇಲ್ಲವೇ ದೇವರ ಮೇಲೆ ಆಣೆ ಮಾಡಿ ಸತ್ಯ ಹೇಳಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...