Homeಮುಖಪುಟಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

- Advertisement -
- Advertisement -

ಅಪೌಷ್ಠಿಕತೆಯನ್ನು ಹೋಗಲಾಡಿಸುವ ಸಲುವಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಬೇಕೆಂಬ ತಜ್ಞರ ಶಿಫಾರಸ್ಸನ್ನು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಆದರೆ ಇದಕ್ಕೆ ಅಲ್ಲೊಂದು ಇಲ್ಲೊಂದು ಅಪಸ್ವರಗಳು ಕೇಳಿಬರುತ್ತಲೆ ಇವೆ. ಈ ಹಿಂದೆ ಕೆಲ ಮಠಾಧೀಶರು ಮೊಟ್ಟೆ ನೀಡಬಾರದು ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‌ರವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಸಹ ಮೊಟ್ಟೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ಮೊಟ್ಟ ಏಕೆ ಬೇಕೆಂದು ನೆಟ್ಟಿಗರು ಅವರಿಗೆ ಪಾಠ ಮಾಡಿದ್ದಾರೆ.

ಸಮಾನತೆಯ ಬಗ್ಗೆ ಮಾತನಾಡುತ್ತಲೇ ನೀವು ಏಕೆ ಸಸ್ಯಾಹಾರಿಗಳ ಪರ ವಹಿಸಿದ್ದೀರಿ? ಮಕ್ಕಳು ಅವರಿಷ್ಟ ಬಂದಿದ್ದನ್ನು ತಿನ್ನುತ್ತಾರೆ, ನಿಮ್ಮ ಹೇರಿಕೆ ಏಕೆ ಎಂದು ಹಲವು ಪ್ರಶ್ನಿಸಿದ್ದಾರೆ.

“ನಮ್ಮ ಕರ್ನಾಟಕ ಸರ್ಕಾರ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ನೀಡಲು ಏಕೆ ನಿರ್ಧರಿಸಿದೆ? ಅದೊಂದೆ ಪೋಷಣೆಯ ಏಕೈಕ ಮೂಲವಲ್ಲ. ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳನ್ನು ಇದು ಹೊರಗಿಡುತ್ತದೆ.
ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಸಿಗುವಂತೆ ನಮ್ಮ ನೀತಿಗಳನ್ನು ರೂಪಿಸಬೇಕು” ಎಂದು ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮಾಡಿದ್ದರು.

ಅದಕ್ಕೆ ಪ್ರತಿಯಾಗಿ ನೂರಾರು ಜನರು ಮೊಟ್ಟೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ನೀವು ಸಸ್ಯಹಾರಿಯಾಗಿದ್ದಾರೆ ಅದು ನಿಮ್ಮಿಷ್ಟ. ಆದರೆ ಅದನ್ನು ದಯವಿಟ್ಟು ಇತರರ ಮೇಲೆ ಹೇರಬೇಡಿ. ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ತಪ್ಪೇನು? ನಿಮ್ಮ ಬ್ರಾಹ್ಮಣ್ಯವನ್ನು ಶಾಲೆಗಳಿಗೆ ತರಬೇಡಿ” ಎಂದು ಲಿಖಿತ್ ಕುಮಾರ್ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಮೊಟ್ಟೆ/ಬಾಳೆಹಣ್ಣು/ಕಡ್ಲೆಮಿಠಾಯಿ ಈ ಮೂರು ಆಯ್ಕೆಗಳಿವೆ. ಮಕ್ಕಳು ತಮಗೆ ಬೇಕಾದುದ್ದನ್ನು ತಿನ್ನುತ್ತಾರೆ. ಇಂತದ್ದೆ ತಿನ್ನಿ ಎಂದು ಹೇಳಲು ನಾವ್ಯಾರು ಎಂದು ಗಣೇಶ್ ಭಟ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ತೇಜಸ್ವಿನಿಯವರ ಪ್ರಕಾರ ಬಹುಸಂಖ್ಯಾತ ಮಾಂಸಾಹಾರಿಗಳು ಅಲ್ಪಸಂಖ್ಯಾತ ಸಸ್ಯಾಹಾರಿಗಳಿಗಾಗಿ ತಮ್ಮ ಆಹಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು?!! ವಾಹ್, ಇದೇ ನೋಡಿ ಬ್ರಾಹ್ಮಣ್ಯ ಅಂದರೆ!. ಇದರ ಬದಲಿಗೆ ಯಾಕೆ ಸಸ್ಯಾಹಾರಿಗಳೂ ಮೊಟ್ಟೆ ತಿನ್ನಬಾರದು.? ಆರೋಗ್ಯಕ್ಕೆ ಒಳ್ಳೆಯದು. ಆಗ ಸಮಾನತೆ ಕೂಡಾ ಉಂಟಾಗುತ್ತದೆ ಅಲ್ವಾ?!! ಎಂದು ಶ್ರೀನಿವಾಸ ಕಾರ್ಕಳರವರು ತಿರುಗೇಟು ನೀಡಿದ್ದಾರೆ.

ದಯವಿಟ್ಟು ಮೊಟ್ಟೆಯಷ್ಟು ಅಗ್ಗದ, ಪೌಷ್ಟಿಕ ಮತ್ತು ರುಚಿಕರವಾದ ಪರ್ಯಾಯವನ್ನು ಸೂಚಿಸಿ. ಕೆಲವು ದುರ್ಬಲವಾದ ಬ್ರಾಹ್ಮಣ ಇಂದ್ರಿಯಗಳನ್ನು ರಕ್ಷಿಸಲು ನಮ್ಮ ನೀತಿಗಳನ್ನು ಹೇರಬಾರದು. ಮೊಟ್ಟೆ ತಿನ್ನದವರಿಗೆ ಚಿಕ್ಕಿ ಇದೆ. ಮೊಟ್ಟೆ ತಿನ್ನುವವರು ಮೊಟ್ಟೆ ತಿಂದರೆ ಏಕೆ ಸಮಸ್ಯೆ? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಸರ್ಕಾರಿ ಶಾಲೆಲಿ ಬ್ರಾಹ್ಮಣ, ಲಿಂಗಾಯತ ಹೀಗೆ ಸಸ್ಯಹಾರಿ ಸಮುದಾಯದ ಮಕ್ಕಳು ಹೆಚ್ಚು ಓದ್ತಾಯಿಲ್ಲ. OBC/SC/ST ಮಕ್ಕಳು ಅಧಿಕವಾಗಿದ್ದರೆ. ಮೊಟ್ಟೆನು ಕೊಡ್ತಾನೆ, ಮಾಂಸನು ಕೊಡ್ತಾರೆ. ದುಬಾರಿ ಪೀಸ್ ಕಟ್ಟುವ ಶಾಲೆಲಿ ಮಕ್ಳನ್ನ ಓದಿಸುತ್ತಾ ಇರುವ ನೀವುಗಳು ಸರ್ಕಾರಿ ಶಾಲೆಲಿ ನಿಮ್ಮ ಪದ್ಧತಿಯನ್ನ ಹೇರಿಕೆ ಮಾಡೋಕೆ ಬರಬೇಡಿ. ತಮಿಳುನಾಡಿನಲ್ಲಿ ವಾರಕ್ಕೆ 5 ದಿನ ಮೊಟ್ಟೆ. ತೆಲಂಗಾಣ, ಆಂಧ್ರದಲ್ಲಿ ಮೊಟ್ಟೆ ಕೊಡ್ತಾರೆ. ಬರೀ ಧಾನ್ಯಗಳಿಂದ ಸಂಪೂರ್ಣ ಪೌಷ್ಟಿಕಾಂಶ ಬರಲ್ಲ. ಮೀನು, ಮೊಟ್ಟೆ, ಮಾಂಸ, ಹಾಲು ಅಗತ್ಯ. ಕಲ್ಯಾಣ ಕರ್ನಾಟಕ ಭಾಗದ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮೊಟ್ಟೆ ಕೊಟ್ಟಿದ್ದರಿಂದ ಅವರು ನ್ಯೂನಪೋಷಣೆಯ ಕೊರತೆ ಇಳಿಮುಖವಾಗಿದೆ. ಮೊದಲು ನ್ಯೂನಪೋಷಣೆಯ ತೀವ್ರ ಕೊರತೆ ಇತ್ತು” ಎಂದು ಟ್ವಿಟರ್ ಬಳಕೆದಾರರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

79% ಕನ್ನಡಿಗರು ಮಾಂಸಾಹಾರ ಸೇವಿಸುತ್ತಾರೆ. ಮೊಟ್ಟೆ ತಿನ್ನುವ ಜನಸಂಖ್ಯೆಯು ಕನಿಷ್ಠ 90% ಆಗಿರುತ್ತದೆ ಎಂದು ನನಗೆ ಖಾತ್ರಿಯಿದೆ. ಹಾಗಾದರೆ 10% ಜನರಿಗೆ ಪರ್ಯಾಯವನ್ನು ಒದಗಿಸಿದಾಗ 90% ಜನರು ಏನು ತಿನ್ನುತ್ತಾರೆ ಎಂಬುದನ್ನು ಏಕೆ ನಿರ್ಧರಿಸಬೇಕು. ನಿಮ್ಮ ಸಮಸ್ಯೆ ಏನು ಮೇಡಂ, ನೀವು ವಿವರಿಸುವಿರಾ? ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 75: ಹಳೇ ರಾಜಕಾರಣದ ಕಡೇ ವರಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದೋ ಮೊಟ್ಟೆ ತಿನ್ನುತ್ತಿರುವ ನಿಮಗೆ ಹೀಗೆ ಎಲ್ಲರೂ ಮೊಟ್ಟೆ ತಿಂದರೆ ಅದರ ಬೆಲೆ ಜಾಸ್ತಿ ಆಗಬಹುದೆಂಬ ಭಯ,ಅಥವಾ ನಿಮ್ಮ ವಕ್ರ ಬುದ್ದಿಯನ್ನು ಇದು ತೋರಿಸುತ್ತದೆ,ಇಲ್ಲವೇ ದೇವರ ಮೇಲೆ ಆಣೆ ಮಾಡಿ ಸತ್ಯ ಹೇಳಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...