Homeಮುಖಪುಟಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತಕುಮಾರ್ ಅಪಸ್ವರ: ಪಾಠ ಮಾಡಿದ ನೆಟ್ಟಿಗರು

- Advertisement -
- Advertisement -

ಅಪೌಷ್ಠಿಕತೆಯನ್ನು ಹೋಗಲಾಡಿಸುವ ಸಲುವಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಬೇಕೆಂಬ ತಜ್ಞರ ಶಿಫಾರಸ್ಸನ್ನು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಆದರೆ ಇದಕ್ಕೆ ಅಲ್ಲೊಂದು ಇಲ್ಲೊಂದು ಅಪಸ್ವರಗಳು ಕೇಳಿಬರುತ್ತಲೆ ಇವೆ. ಈ ಹಿಂದೆ ಕೆಲ ಮಠಾಧೀಶರು ಮೊಟ್ಟೆ ನೀಡಬಾರದು ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್‌ರವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಸಹ ಮೊಟ್ಟೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ಮೊಟ್ಟ ಏಕೆ ಬೇಕೆಂದು ನೆಟ್ಟಿಗರು ಅವರಿಗೆ ಪಾಠ ಮಾಡಿದ್ದಾರೆ.

ಸಮಾನತೆಯ ಬಗ್ಗೆ ಮಾತನಾಡುತ್ತಲೇ ನೀವು ಏಕೆ ಸಸ್ಯಾಹಾರಿಗಳ ಪರ ವಹಿಸಿದ್ದೀರಿ? ಮಕ್ಕಳು ಅವರಿಷ್ಟ ಬಂದಿದ್ದನ್ನು ತಿನ್ನುತ್ತಾರೆ, ನಿಮ್ಮ ಹೇರಿಕೆ ಏಕೆ ಎಂದು ಹಲವು ಪ್ರಶ್ನಿಸಿದ್ದಾರೆ.

“ನಮ್ಮ ಕರ್ನಾಟಕ ಸರ್ಕಾರ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ನೀಡಲು ಏಕೆ ನಿರ್ಧರಿಸಿದೆ? ಅದೊಂದೆ ಪೋಷಣೆಯ ಏಕೈಕ ಮೂಲವಲ್ಲ. ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳನ್ನು ಇದು ಹೊರಗಿಡುತ್ತದೆ.
ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಸಿಗುವಂತೆ ನಮ್ಮ ನೀತಿಗಳನ್ನು ರೂಪಿಸಬೇಕು” ಎಂದು ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮಾಡಿದ್ದರು.

ಅದಕ್ಕೆ ಪ್ರತಿಯಾಗಿ ನೂರಾರು ಜನರು ಮೊಟ್ಟೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ನೀವು ಸಸ್ಯಹಾರಿಯಾಗಿದ್ದಾರೆ ಅದು ನಿಮ್ಮಿಷ್ಟ. ಆದರೆ ಅದನ್ನು ದಯವಿಟ್ಟು ಇತರರ ಮೇಲೆ ಹೇರಬೇಡಿ. ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದರಿಂದ ತಪ್ಪೇನು? ನಿಮ್ಮ ಬ್ರಾಹ್ಮಣ್ಯವನ್ನು ಶಾಲೆಗಳಿಗೆ ತರಬೇಡಿ” ಎಂದು ಲಿಖಿತ್ ಕುಮಾರ್ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಮೊಟ್ಟೆ/ಬಾಳೆಹಣ್ಣು/ಕಡ್ಲೆಮಿಠಾಯಿ ಈ ಮೂರು ಆಯ್ಕೆಗಳಿವೆ. ಮಕ್ಕಳು ತಮಗೆ ಬೇಕಾದುದ್ದನ್ನು ತಿನ್ನುತ್ತಾರೆ. ಇಂತದ್ದೆ ತಿನ್ನಿ ಎಂದು ಹೇಳಲು ನಾವ್ಯಾರು ಎಂದು ಗಣೇಶ್ ಭಟ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ತೇಜಸ್ವಿನಿಯವರ ಪ್ರಕಾರ ಬಹುಸಂಖ್ಯಾತ ಮಾಂಸಾಹಾರಿಗಳು ಅಲ್ಪಸಂಖ್ಯಾತ ಸಸ್ಯಾಹಾರಿಗಳಿಗಾಗಿ ತಮ್ಮ ಆಹಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು?!! ವಾಹ್, ಇದೇ ನೋಡಿ ಬ್ರಾಹ್ಮಣ್ಯ ಅಂದರೆ!. ಇದರ ಬದಲಿಗೆ ಯಾಕೆ ಸಸ್ಯಾಹಾರಿಗಳೂ ಮೊಟ್ಟೆ ತಿನ್ನಬಾರದು.? ಆರೋಗ್ಯಕ್ಕೆ ಒಳ್ಳೆಯದು. ಆಗ ಸಮಾನತೆ ಕೂಡಾ ಉಂಟಾಗುತ್ತದೆ ಅಲ್ವಾ?!! ಎಂದು ಶ್ರೀನಿವಾಸ ಕಾರ್ಕಳರವರು ತಿರುಗೇಟು ನೀಡಿದ್ದಾರೆ.

ದಯವಿಟ್ಟು ಮೊಟ್ಟೆಯಷ್ಟು ಅಗ್ಗದ, ಪೌಷ್ಟಿಕ ಮತ್ತು ರುಚಿಕರವಾದ ಪರ್ಯಾಯವನ್ನು ಸೂಚಿಸಿ. ಕೆಲವು ದುರ್ಬಲವಾದ ಬ್ರಾಹ್ಮಣ ಇಂದ್ರಿಯಗಳನ್ನು ರಕ್ಷಿಸಲು ನಮ್ಮ ನೀತಿಗಳನ್ನು ಹೇರಬಾರದು. ಮೊಟ್ಟೆ ತಿನ್ನದವರಿಗೆ ಚಿಕ್ಕಿ ಇದೆ. ಮೊಟ್ಟೆ ತಿನ್ನುವವರು ಮೊಟ್ಟೆ ತಿಂದರೆ ಏಕೆ ಸಮಸ್ಯೆ? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಸರ್ಕಾರಿ ಶಾಲೆಲಿ ಬ್ರಾಹ್ಮಣ, ಲಿಂಗಾಯತ ಹೀಗೆ ಸಸ್ಯಹಾರಿ ಸಮುದಾಯದ ಮಕ್ಕಳು ಹೆಚ್ಚು ಓದ್ತಾಯಿಲ್ಲ. OBC/SC/ST ಮಕ್ಕಳು ಅಧಿಕವಾಗಿದ್ದರೆ. ಮೊಟ್ಟೆನು ಕೊಡ್ತಾನೆ, ಮಾಂಸನು ಕೊಡ್ತಾರೆ. ದುಬಾರಿ ಪೀಸ್ ಕಟ್ಟುವ ಶಾಲೆಲಿ ಮಕ್ಳನ್ನ ಓದಿಸುತ್ತಾ ಇರುವ ನೀವುಗಳು ಸರ್ಕಾರಿ ಶಾಲೆಲಿ ನಿಮ್ಮ ಪದ್ಧತಿಯನ್ನ ಹೇರಿಕೆ ಮಾಡೋಕೆ ಬರಬೇಡಿ. ತಮಿಳುನಾಡಿನಲ್ಲಿ ವಾರಕ್ಕೆ 5 ದಿನ ಮೊಟ್ಟೆ. ತೆಲಂಗಾಣ, ಆಂಧ್ರದಲ್ಲಿ ಮೊಟ್ಟೆ ಕೊಡ್ತಾರೆ. ಬರೀ ಧಾನ್ಯಗಳಿಂದ ಸಂಪೂರ್ಣ ಪೌಷ್ಟಿಕಾಂಶ ಬರಲ್ಲ. ಮೀನು, ಮೊಟ್ಟೆ, ಮಾಂಸ, ಹಾಲು ಅಗತ್ಯ. ಕಲ್ಯಾಣ ಕರ್ನಾಟಕ ಭಾಗದ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮೊಟ್ಟೆ ಕೊಟ್ಟಿದ್ದರಿಂದ ಅವರು ನ್ಯೂನಪೋಷಣೆಯ ಕೊರತೆ ಇಳಿಮುಖವಾಗಿದೆ. ಮೊದಲು ನ್ಯೂನಪೋಷಣೆಯ ತೀವ್ರ ಕೊರತೆ ಇತ್ತು” ಎಂದು ಟ್ವಿಟರ್ ಬಳಕೆದಾರರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

79% ಕನ್ನಡಿಗರು ಮಾಂಸಾಹಾರ ಸೇವಿಸುತ್ತಾರೆ. ಮೊಟ್ಟೆ ತಿನ್ನುವ ಜನಸಂಖ್ಯೆಯು ಕನಿಷ್ಠ 90% ಆಗಿರುತ್ತದೆ ಎಂದು ನನಗೆ ಖಾತ್ರಿಯಿದೆ. ಹಾಗಾದರೆ 10% ಜನರಿಗೆ ಪರ್ಯಾಯವನ್ನು ಒದಗಿಸಿದಾಗ 90% ಜನರು ಏನು ತಿನ್ನುತ್ತಾರೆ ಎಂಬುದನ್ನು ಏಕೆ ನಿರ್ಧರಿಸಬೇಕು. ನಿಮ್ಮ ಸಮಸ್ಯೆ ಏನು ಮೇಡಂ, ನೀವು ವಿವರಿಸುವಿರಾ? ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 75: ಹಳೇ ರಾಜಕಾರಣದ ಕಡೇ ವರಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದೋ ಮೊಟ್ಟೆ ತಿನ್ನುತ್ತಿರುವ ನಿಮಗೆ ಹೀಗೆ ಎಲ್ಲರೂ ಮೊಟ್ಟೆ ತಿಂದರೆ ಅದರ ಬೆಲೆ ಜಾಸ್ತಿ ಆಗಬಹುದೆಂಬ ಭಯ,ಅಥವಾ ನಿಮ್ಮ ವಕ್ರ ಬುದ್ದಿಯನ್ನು ಇದು ತೋರಿಸುತ್ತದೆ,ಇಲ್ಲವೇ ದೇವರ ಮೇಲೆ ಆಣೆ ಮಾಡಿ ಸತ್ಯ ಹೇಳಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...