Homeಕರ್ನಾಟಕತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

ತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

- Advertisement -
- Advertisement -

ಕನ್ನಡದ ಖ್ಯಾತ ಕಥೆಗಾರ, ಕಾದಂಬರಿಕಾರ, ವಿಮರ್ಶಕ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರನ್ನು ಅಣಿಕಿಸಿ ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಮಾಡಿರುವ ಕಮೆಂಟ್‌ನ ಸ್ಕ್ರೀನ್‌ಶಾಟ್ ಈಗ ಹರಿದಾಡುತ್ತಿದೆ.

ತೇಜಸ್ವಿಯವರ ಏಕೈಕ ಕವನ ಸಂಕಲನ ‘ಬೃಹನ್ನಳೆ ಸೋಮುವಿನ ಸ್ವಗತ ಲಹರಿ’. ಈ ಕೃತಿಯು 1962ರಲ್ಲಿ ಪ್ರಕಟವಾಯಿತು. ರಾಜಕೀಯ ವಿಡಂಬನೆ, ಹತಾಶೆ, ಅಸಹಾಯಕತೆ, ಸಿಟ್ಟು ಅಪ್ರಕಟಿತ ಪ್ರೇಮವನ್ನು ಇಲ್ಲಿನ ಕವನಗಳಲ್ಲಿ ಕಾಣಬಹುದು ಎಂದು ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲಿನ ಕವಿತೆಯೊಂದರ ಕುರಿತು ಕಮೆಂಟ್ ಮಾಡಿರುವ ಚಕ್ರತೀರ್ಥ, ‘ನೈಂಟಿ ಎಮ್ಮೆಲ್‌ ಕವಿತೆ’ ಎಂದು ಅಣಕಿಸಿದ್ದಾರೆ.

‘#ನವಇತಿಹಾಸನಿರ್ಮಾಣಗಳು’ ಹ್ಯಾಷ್‌ಟ್ಯಾಗ್‌ ಬಳಸಿ ಮಾಡಿರುವ ಪೋಸ್ಟ್‌ನಲ್ಲಿ “ಪೂರ್ಣಚಂದ್ರ ತೇಜಸ್ವಿಯವರು ತಮ್ಮ ಪ್ರತಿ ಕವನದಲ್ಲಿ ನಮ್ಮ ದೇಶದ Inequality of wealth ಬಗ್ಗೆ ಹೇಳಿದ್ದಾರೆ” ಎಂದು ಚಕ್ರತೀರ್ಥ ಬರೆದಿದ್ದಾರೆ.

ಭಾಗ್ಯ ಸುಭಾಷ್‌ ಎಂಬವರು ‘ಅವರು ಕವಿತೆ ಬರೆದಿದ್ದಾರಾ?’ ಎಂದು ಕಮೆಂಟ್ ಮಾಡಿದ್ದಾರೆ. ಅದಕ್ಕೆ ಸುಮಾ ಆರಾಧ್ಯ ಅವರು ಕವಿತೆಯನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ರೋಹಿತ್‌ ಚಕ್ರತೀರ್ಥ ಕಮೆಂಟ್ ಮಾಡಿ, “ನೈಂಟಿಎಮ್ಮೆಲ್‌” ಕವಿತೆ ಎಂದಿದ್ದಾರೆ.

‘ಬ್ರಾಹ್ಮಣ ಯುವಕರಿಗೆ’ ಎಂಬ ಕವಿತೆಯನ್ನು ಸುಮಾ ಆರಾಧ್ಯ ಹಂಚಿಕೊಂಡಿರುವುದನ್ನು ಕಾಣಬಹುದು.

ಕನ್ನಡ ಸಾಹಿತಿಗಳು, ಬರಹಗಾರರ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಾ ಬಂದಿರುವ ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ, ಆ ಸಮಿತಿ ನೀಡಿರುವ ಪಠ್ಯವನ್ನು ಅಳವಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನೂತನ ಪಠ್ಯಪುಸ್ತಕಗಳನ್ನು ಕೂಡಲೇ ವಾಪಸ್‌ ಪಡೆಯಬೇಕೆಂಬ ಆಗ್ರಹ ಹೆಚ್ಚಾಗುತ್ತಿದೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಎದುರಿಸುತ್ತಿರುವ ರೋಹಿತ್‌ ಚಕ್ರತೀರ್ಥ ಅವರು ಈ ಹಿಂದೆ ಮಾಡಿರುವ ಪೋಸ್ಟ್‌ಗಳು, ಕಮೆಂಟ್‌ಗಳು ಹೊರಬೀಳತೊಡಗಿವೆ. ಅಶ್ಲೀಲವಾಗಿ ಮಾಡಿದ್ದ ಪೋಸ್ಟ್‌ಗಳೆಲ್ಲ ಚರ್ಚೆಗೆ ಬಂದ ಬಳಿಕ ರೋಹಿತ್‌ ಚಕ್ರತೀರ್ಥ ಅವರು ತಮ್ಮ ಎಫ್‌ಬಿ ಪ್ರೊಫೈಲ್‌ ಲಾಕ್ ಮಾಡಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. “ವೈಚಾರಿಕತೆಯನ್ನು ತುಳಿದುಹಾಕದಿದ್ದರೆ ತಟ್ಟೆ ಕಾಸಿಗೆ ಕುತ್ತು ಬರುತ್ತದೆ” ಎಂಬುದು ಮನುವಾದಿಗಳ ಆತಂಕ. ಅದಕ್ಕಾಗಿ ಅವರು ಚಕ್ರತೀರ್ತನಂತಹ ಹೀನಕ್ರಿಮಿಯನ್ನು ಉನ್ನತ ಸ್ಥಾನದಲ್ಲಿ ಕೂರಿಸಿದ್ದಾರೆ. ಈ ನಾಡಿನ ಪ್ರಜ್ಞಾವಂತರು ಇದಕ್ಕೆ ಪ್ರತಿಬಟಿಸದಿದ್ದರೆ, ದೇವನೂರು ಮಹಾದೇವ ಅವರು ಹೇಳಿರುವಂತೆ ಈ ನಾಡಿಗೆ ಕೇಡುಗಾಲ ಕಟ್ಟಿಟ್ಟ ಬುತ್ತಿ.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...